<p><strong>ರಾಂಪುರ</strong>: ಸಮೀಪದ ಶಿರೂರ ಪಟ್ಟಣದಲ್ಲಿ ಪಟ್ಟಣ ಪಂಚಾಯತಿ ವತಿಯಿಂದ ಮಂಗಳವಾರ ಹರ್ ಘರ್ ತಿರಂಗಾ ಕಾರ್ಯಕ್ರಮದ ಅಡಿ ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು.</p>.<p>ಪಟ್ಟಣ ಪಂಚಾಯತಿ ಕಾರ್ಯಾಲಯದಿಂದ ಆರಂಭವಾದ ತಿರಂಗಾ ಬೈಕ್ ರ್ಯಾಲಿ ಕಮ್ಮಾರ ಓಣಿ, ಲಂಗಟದವರ ಓಣಿ, ನೇಕಾರ ಪೇಟೆ, ದೊಡ್ಡ ಓಣಿ, ಪಂಚಪ್ಪನ ಪೇಟೆ ಸೇರಿದಂತೆ ವಿವಿಧೆಡೆ ಸಂಚರಿಸಿತು. ಈ ಸಂದರ್ಭದಲ್ಲಿ ರಾಷ್ಟ್ರಭಕ್ತಿಯ ವಿವಿಧ ಘೋಷಣೆಗಳನ್ನು ಕೂಗುತ್ತ ಜನರಲ್ಲಿ ರಾಷ್ಟ್ರಪ್ರೇಮದ ಅರಿವು ಮೂಡಿಸಲಾಯಿತು.</p>.<p>ಹಳೇ ಚಾವಡಿಯ ಹತ್ತಿರ ರ್ಯಾಲಿ ಮುಕ್ತಾಯಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಶಿವಾನಂದ ಆಲೂರ, ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹೋರಾಟಗಾರರನನ್ನು ಸ್ಮರಣೆ ಮಾಡುವ ಮೂಲಕ ದೇಶ ಪ್ರೇಮ ಹೊಂದಬೇಕು ಎಂದರು.</p>.<p>ಕಚೇರಿ ವ್ಯವಸ್ಥಾಪಕ ಯು.ಜಿ. ವರದಪ್ಪನವರ, ಹನಮಂತ ಚನ್ನದಾಸರ, ಸೋಮು ಕುರಿಗಾರ, ಜಿ.ಜಿ. ಹಿರೇಮಠ, ಪ್ರಶಾಂತ ಬೂದಿಹಾಳ, ಹನಮಂತ ಹಳ್ಳಿಯವರ, ಎಚ್.ಐ. ಮ್ಯಾಗೇರಿ, ಪೌರ ಕಾರ್ಮಿಕರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಪುರ</strong>: ಸಮೀಪದ ಶಿರೂರ ಪಟ್ಟಣದಲ್ಲಿ ಪಟ್ಟಣ ಪಂಚಾಯತಿ ವತಿಯಿಂದ ಮಂಗಳವಾರ ಹರ್ ಘರ್ ತಿರಂಗಾ ಕಾರ್ಯಕ್ರಮದ ಅಡಿ ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು.</p>.<p>ಪಟ್ಟಣ ಪಂಚಾಯತಿ ಕಾರ್ಯಾಲಯದಿಂದ ಆರಂಭವಾದ ತಿರಂಗಾ ಬೈಕ್ ರ್ಯಾಲಿ ಕಮ್ಮಾರ ಓಣಿ, ಲಂಗಟದವರ ಓಣಿ, ನೇಕಾರ ಪೇಟೆ, ದೊಡ್ಡ ಓಣಿ, ಪಂಚಪ್ಪನ ಪೇಟೆ ಸೇರಿದಂತೆ ವಿವಿಧೆಡೆ ಸಂಚರಿಸಿತು. ಈ ಸಂದರ್ಭದಲ್ಲಿ ರಾಷ್ಟ್ರಭಕ್ತಿಯ ವಿವಿಧ ಘೋಷಣೆಗಳನ್ನು ಕೂಗುತ್ತ ಜನರಲ್ಲಿ ರಾಷ್ಟ್ರಪ್ರೇಮದ ಅರಿವು ಮೂಡಿಸಲಾಯಿತು.</p>.<p>ಹಳೇ ಚಾವಡಿಯ ಹತ್ತಿರ ರ್ಯಾಲಿ ಮುಕ್ತಾಯಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಶಿವಾನಂದ ಆಲೂರ, ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹೋರಾಟಗಾರರನನ್ನು ಸ್ಮರಣೆ ಮಾಡುವ ಮೂಲಕ ದೇಶ ಪ್ರೇಮ ಹೊಂದಬೇಕು ಎಂದರು.</p>.<p>ಕಚೇರಿ ವ್ಯವಸ್ಥಾಪಕ ಯು.ಜಿ. ವರದಪ್ಪನವರ, ಹನಮಂತ ಚನ್ನದಾಸರ, ಸೋಮು ಕುರಿಗಾರ, ಜಿ.ಜಿ. ಹಿರೇಮಠ, ಪ್ರಶಾಂತ ಬೂದಿಹಾಳ, ಹನಮಂತ ಹಳ್ಳಿಯವರ, ಎಚ್.ಐ. ಮ್ಯಾಗೇರಿ, ಪೌರ ಕಾರ್ಮಿಕರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>