<p><strong>ಬೀಳಗಿ:</strong> ತಾಲ್ಲೂಕು ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳಿಗೆ ರೈತರು ಉಪಯೋಗಿಸುವ ಟ್ಯಾಕ್ಟರ್ಗಳಿಗೆ ಡೀಸೆಲ್ ಕೊರತೆಯಾಗದಂತೆ ನಿಗಾವಹಿಸಲು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವನಗೌಡ ಪಾಟೀಲ ತಹಶೀಲ್ದಾರ್ ವಿನೋದ ಹತ್ತಳ್ಳಿ ಅವರಿಗೆ ಮನವಿ ಮಾಡಿದರು.</p>.<p>ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಶನಿವಾರ ಕೃಷಿ ಚಟುವಟಿಕೆಗಳಿಗೆ ಡೀಸೆಲ್ ಕೊರತೆಯಾಗದಿರಲಿ ಎಂದು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ರೈತರು ಟ್ಯಾಕ್ಟರ್ಗಳನ್ನು ತಮ್ಮ ಹಳ್ಳಿಗಳಿಂದ ತೆಗೆದುಕೊಂಡು ಡೀಸೆಲ್ ಪಂಪುಗಳಿಗೆ ಬಂದು ಭರ್ತಿ ಮಾಡಿಕೊಳ್ಳಬೇಕೆಂದರೆ ಮಧ್ಯದ ದಾರಿಯಲ್ಲಿ 5 ರಿಂದ 6 ಲೀಟರ್ ಡೀಸೆಲ್ ಹಾಳಾಗುತ್ತದೆ. ಕಾರಣ ಮೊದಲಿನ ಹಾಗೆ ಕ್ಯಾನ್ ಮುಖಾಂತರ ಡೀಸೆಲ್ ಕೊಡಿಸುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.</p>.<p>ರೈತರ ಹೆಸರಿನಲ್ಲಿ ಕಿಸಾನ್ ಸೇವಾ ಕೇಂದ್ರ ಲೈಸನ್ಸ್ ಪಡೆದ ಡೀಸೆಲ್ ಪಂಪುಗಳಲ್ಲಿ ರೈತರಿಗೆ ಹೆಚ್ಚುವರಿ ಸರಕು ಇಟ್ಟುಕೊಂಡು ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವ ವ್ಯವಸ್ಥೆ ಮಾಡಬೇಕು ಎಂದರು.</p>.<p>ದೇಶದ ಆಹಾರ ಭದ್ರತೆ ಗಮನದಲ್ಲಿಟ್ಟುಕೊಂಡು ರೈತರ ಕೃಷಿ ಚಟುವಟಿಕೆಗಳು ನಿರಾತಂಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅವರು ರೈತರಿಗೆ ಆಗುವ ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ತಹಶೀಲ್ದಾರ್ ಗಮನಕ್ಕೆ ತಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-19-1970534140</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ:</strong> ತಾಲ್ಲೂಕು ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳಿಗೆ ರೈತರು ಉಪಯೋಗಿಸುವ ಟ್ಯಾಕ್ಟರ್ಗಳಿಗೆ ಡೀಸೆಲ್ ಕೊರತೆಯಾಗದಂತೆ ನಿಗಾವಹಿಸಲು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವನಗೌಡ ಪಾಟೀಲ ತಹಶೀಲ್ದಾರ್ ವಿನೋದ ಹತ್ತಳ್ಳಿ ಅವರಿಗೆ ಮನವಿ ಮಾಡಿದರು.</p>.<p>ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಶನಿವಾರ ಕೃಷಿ ಚಟುವಟಿಕೆಗಳಿಗೆ ಡೀಸೆಲ್ ಕೊರತೆಯಾಗದಿರಲಿ ಎಂದು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ರೈತರು ಟ್ಯಾಕ್ಟರ್ಗಳನ್ನು ತಮ್ಮ ಹಳ್ಳಿಗಳಿಂದ ತೆಗೆದುಕೊಂಡು ಡೀಸೆಲ್ ಪಂಪುಗಳಿಗೆ ಬಂದು ಭರ್ತಿ ಮಾಡಿಕೊಳ್ಳಬೇಕೆಂದರೆ ಮಧ್ಯದ ದಾರಿಯಲ್ಲಿ 5 ರಿಂದ 6 ಲೀಟರ್ ಡೀಸೆಲ್ ಹಾಳಾಗುತ್ತದೆ. ಕಾರಣ ಮೊದಲಿನ ಹಾಗೆ ಕ್ಯಾನ್ ಮುಖಾಂತರ ಡೀಸೆಲ್ ಕೊಡಿಸುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.</p>.<p>ರೈತರ ಹೆಸರಿನಲ್ಲಿ ಕಿಸಾನ್ ಸೇವಾ ಕೇಂದ್ರ ಲೈಸನ್ಸ್ ಪಡೆದ ಡೀಸೆಲ್ ಪಂಪುಗಳಲ್ಲಿ ರೈತರಿಗೆ ಹೆಚ್ಚುವರಿ ಸರಕು ಇಟ್ಟುಕೊಂಡು ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವ ವ್ಯವಸ್ಥೆ ಮಾಡಬೇಕು ಎಂದರು.</p>.<p>ದೇಶದ ಆಹಾರ ಭದ್ರತೆ ಗಮನದಲ್ಲಿಟ್ಟುಕೊಂಡು ರೈತರ ಕೃಷಿ ಚಟುವಟಿಕೆಗಳು ನಿರಾತಂಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅವರು ರೈತರಿಗೆ ಆಗುವ ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ತಹಶೀಲ್ದಾರ್ ಗಮನಕ್ಕೆ ತಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-19-1970534140</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>