<p>ಬೀಳಗಿ: ‘ಉತ್ಸವಗಳು ಸಂಬಂಧಗಳನ್ನು ಗಟ್ಟಗೊಳಿಸುವುದರ ಜೊತೆಗೆ ಬದುಕಿನ ಮೌಲ್ಯಗಳನ್ನು ತಿಳಿಸಿಕೊಡುತ್ತವೆ. ಸಮಾಜದಲ್ಲಿ ಒಗ್ಗಟ್ಟಿನಿಂದ ಎಲ್ಲರೊಂದಿಗೆ ಬಾಳುವುದನ್ನು ಕಲಿಯಬೇಕು’ ಎಂದು ಹಾಸನ ಜಿಲ್ಲೆ ಅರೆಮಾದನಹಳ್ಳಿ ಸುಜ್ಞಾನ ಪ್ರಭು ಪೀಠ ವಿಶ್ವಬ್ರಾಹ್ಮಣ ಮಾಹಾಸಂಸ್ಥಾನ ಮಠದ ಶಿವಜ್ಞಾನ ತೀರ್ಥ ಸ್ವಾಮೀಜಿ ಹೇಳಿದರು.</p>.<p>ಸ್ಥಳೀಯ ಸಿದ್ದೇಶ್ವರ ನಗರದಲ್ಲಿರುವ ಕಾಳಿಕಾಕಮಠೇಶ್ವರ ದೇವಸ್ಥಾನದ ದಶಮಾನೋತ್ಸವ ಹಾಗೂ ಯುಗಾದಿ ಸಂಭ್ರಮ ಸಮಾರಂಭದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಕೆಪಿಸಿಸಿ ಮಹಿಳಾ ಕಾರ್ಯದರ್ಶಿ ಡಾ.ವಸಂತ ಮುರಳಿ ಮಾತನಾಡಿ, ವಿಶ್ವಕರ್ಮ ಸಮಾಜದಿಂದ ನಿರ್ಮಾಣ ಮಾಡುವ ಸಮುದಾಯ ಭವನಕ್ಕೆ ₹5 ಲಕ್ಷ ಕೊಡುವುದಾಗಿ ವಾಗ್ದಾನ ಮಾಡಿದರು.</p>.<p>ಮುಖಂಡರಾದ ಕೆ.ಎನ್. ಬಡಿಗೇರ, ವಿ.ಎಸ್.ಪತ್ತಾರ, ಈರಣ್ಣ ಪತ್ತಾರ, ಶಂಕರ ಬಡಿಗೇರ, ಎಂ. ಆರ್. ಪತ್ತಾರ, ಗುರುನಾಥ ಪತ್ತಾರ ಭಾಗವಹಿಸಿದ್ದರು. ಶಿಕ್ಷಕ ಎಸ್. ಎಸ್. ಬಡಿಗೇರ ನಿರೂಪಿಸಿದರು. ನಾಗರಾಜ ಟಂಕಸಾಲಿ, ಚಂದ್ರಕಾಂತ ಪತ್ತಾರ, ಮನೋಹರ ಪತ್ತಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-19-146886840</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀಳಗಿ: ‘ಉತ್ಸವಗಳು ಸಂಬಂಧಗಳನ್ನು ಗಟ್ಟಗೊಳಿಸುವುದರ ಜೊತೆಗೆ ಬದುಕಿನ ಮೌಲ್ಯಗಳನ್ನು ತಿಳಿಸಿಕೊಡುತ್ತವೆ. ಸಮಾಜದಲ್ಲಿ ಒಗ್ಗಟ್ಟಿನಿಂದ ಎಲ್ಲರೊಂದಿಗೆ ಬಾಳುವುದನ್ನು ಕಲಿಯಬೇಕು’ ಎಂದು ಹಾಸನ ಜಿಲ್ಲೆ ಅರೆಮಾದನಹಳ್ಳಿ ಸುಜ್ಞಾನ ಪ್ರಭು ಪೀಠ ವಿಶ್ವಬ್ರಾಹ್ಮಣ ಮಾಹಾಸಂಸ್ಥಾನ ಮಠದ ಶಿವಜ್ಞಾನ ತೀರ್ಥ ಸ್ವಾಮೀಜಿ ಹೇಳಿದರು.</p>.<p>ಸ್ಥಳೀಯ ಸಿದ್ದೇಶ್ವರ ನಗರದಲ್ಲಿರುವ ಕಾಳಿಕಾಕಮಠೇಶ್ವರ ದೇವಸ್ಥಾನದ ದಶಮಾನೋತ್ಸವ ಹಾಗೂ ಯುಗಾದಿ ಸಂಭ್ರಮ ಸಮಾರಂಭದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಕೆಪಿಸಿಸಿ ಮಹಿಳಾ ಕಾರ್ಯದರ್ಶಿ ಡಾ.ವಸಂತ ಮುರಳಿ ಮಾತನಾಡಿ, ವಿಶ್ವಕರ್ಮ ಸಮಾಜದಿಂದ ನಿರ್ಮಾಣ ಮಾಡುವ ಸಮುದಾಯ ಭವನಕ್ಕೆ ₹5 ಲಕ್ಷ ಕೊಡುವುದಾಗಿ ವಾಗ್ದಾನ ಮಾಡಿದರು.</p>.<p>ಮುಖಂಡರಾದ ಕೆ.ಎನ್. ಬಡಿಗೇರ, ವಿ.ಎಸ್.ಪತ್ತಾರ, ಈರಣ್ಣ ಪತ್ತಾರ, ಶಂಕರ ಬಡಿಗೇರ, ಎಂ. ಆರ್. ಪತ್ತಾರ, ಗುರುನಾಥ ಪತ್ತಾರ ಭಾಗವಹಿಸಿದ್ದರು. ಶಿಕ್ಷಕ ಎಸ್. ಎಸ್. ಬಡಿಗೇರ ನಿರೂಪಿಸಿದರು. ನಾಗರಾಜ ಟಂಕಸಾಲಿ, ಚಂದ್ರಕಾಂತ ಪತ್ತಾರ, ಮನೋಹರ ಪತ್ತಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-19-146886840</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>