<p>ಬೀಳಗಿ: ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಾತಿಗಳನ್ನು ಮೀರಿದಾಕೆ. ಹೆಣ್ಣುಕುಲದ ಆದಿಶಕ್ತಿ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ತುಮ್ಮರಮಟ್ಟಿ ಗ್ರಾಮದಲ್ಲಿ ಬುಧವಾರ ಹೇಮರಡ್ಡಿ ಮಲ್ಲಮ್ಮ ಸೇವಾ ಸಮಿತಿ ಹಾಗೂ ಗ್ರಾಮದ ಹಿರಿಯರ ಸಂಯುಕ್ತ ಆಶ್ರಯದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ದೇವಸ್ಥಾನ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಅಡಿಗಲ್ಲು ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಎಸ್.ಆರ್.ಪಾಟೀಲ ಕುಟುಂಬದ ಈ ಸಮುದಾಯ ಭವನ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಭರಿಸಲಿದೆ ಎಂದರು.</p>.<p>ಸ್ವಾಮಿ ವಿವೇಕನಂದ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎನ್.ಪಾಟೀಲ ಮಾತನಾಡಿ, ದೇವಸ್ಥಾನ ನಿರ್ಮಾಣಕ್ಕೆ ಭೂ ದಾನ ಹಾಗೂ ಮೂರ್ತಿ ಧಾನ ಮಾಡಿದ ಉಮಾದೇವಿ ಶಿವನಗೌಡ ಪಾಟೀಲ ಹಾಗೂ ದಿ. ಬಸನಗೌಡ ನಾಗನಗೌಡ ಪಾಟೀಲ ಕುಟುಂಬದವರ ಕಾರ್ಯ ಶ್ಲಾಘನೀಯ ಎಂದರು.</p>.<p>ಹರಿಹರ ರಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ಮಾತನಾಡಿದರು. ಗಿರಿಸಾಗರದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ. ಕುಂದರಗಿಯ ವೀರಸಂಗಮೇಶ್ವರ ಸ್ವಾಮೀಜಿ, ಶ್ರೀಮತಿ ಉಮಾದೇವಿ ಎಸ್.ಪಾಟೀಲ, ಬೀಳಗಿ ಶುಗರ್ಸ್ ನಿರ್ದೇಶಕ ಸುರೇಶಗೌಡ ಪಾಟೀಲ, ಪ್ರಥಮ ದರ್ಜೆ ಗುತ್ತಿಗೆದಾರ ಬಿ.ಎನ್.ನಾಗನಗೌಡರ, ಚಂದ್ರಶೇಖರ ಚನ್ನಪ್ಪನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-19-1910626925</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀಳಗಿ: ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಾತಿಗಳನ್ನು ಮೀರಿದಾಕೆ. ಹೆಣ್ಣುಕುಲದ ಆದಿಶಕ್ತಿ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ತುಮ್ಮರಮಟ್ಟಿ ಗ್ರಾಮದಲ್ಲಿ ಬುಧವಾರ ಹೇಮರಡ್ಡಿ ಮಲ್ಲಮ್ಮ ಸೇವಾ ಸಮಿತಿ ಹಾಗೂ ಗ್ರಾಮದ ಹಿರಿಯರ ಸಂಯುಕ್ತ ಆಶ್ರಯದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ದೇವಸ್ಥಾನ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಅಡಿಗಲ್ಲು ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಎಸ್.ಆರ್.ಪಾಟೀಲ ಕುಟುಂಬದ ಈ ಸಮುದಾಯ ಭವನ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಭರಿಸಲಿದೆ ಎಂದರು.</p>.<p>ಸ್ವಾಮಿ ವಿವೇಕನಂದ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎನ್.ಪಾಟೀಲ ಮಾತನಾಡಿ, ದೇವಸ್ಥಾನ ನಿರ್ಮಾಣಕ್ಕೆ ಭೂ ದಾನ ಹಾಗೂ ಮೂರ್ತಿ ಧಾನ ಮಾಡಿದ ಉಮಾದೇವಿ ಶಿವನಗೌಡ ಪಾಟೀಲ ಹಾಗೂ ದಿ. ಬಸನಗೌಡ ನಾಗನಗೌಡ ಪಾಟೀಲ ಕುಟುಂಬದವರ ಕಾರ್ಯ ಶ್ಲಾಘನೀಯ ಎಂದರು.</p>.<p>ಹರಿಹರ ರಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ಮಾತನಾಡಿದರು. ಗಿರಿಸಾಗರದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ. ಕುಂದರಗಿಯ ವೀರಸಂಗಮೇಶ್ವರ ಸ್ವಾಮೀಜಿ, ಶ್ರೀಮತಿ ಉಮಾದೇವಿ ಎಸ್.ಪಾಟೀಲ, ಬೀಳಗಿ ಶುಗರ್ಸ್ ನಿರ್ದೇಶಕ ಸುರೇಶಗೌಡ ಪಾಟೀಲ, ಪ್ರಥಮ ದರ್ಜೆ ಗುತ್ತಿಗೆದಾರ ಬಿ.ಎನ್.ನಾಗನಗೌಡರ, ಚಂದ್ರಶೇಖರ ಚನ್ನಪ್ಪನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-19-1910626925</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>