<p>ಬೀಳಗಿ: ‘ಮನೆ, ಕುಟುಂಬ, ಸುಖ– ಸಂತೋಷ ತ್ಯಾಗ ಮಾಡಿ, ಗಡಿಯಲ್ಲಿ ದೇಶ ಕಾಯುವ ಯೋಧರ ತ್ಯಾಗ, ದೇಶಪ್ರೇಮವು ಸದಾ ಸ್ಮರಣೀಯ’ ಎಂದು ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯರು ಹೇಳಿದರು.</p>.<p>22 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಪಡೆದು ಸ್ವಗ್ರಾಮವಾದ ತಾಲ್ಲೂಕಿನ ಇನಾಂಹಂಚಿನಾಳ ಗ್ರಾಮಕ್ಕೆ ಆಗಮಿಸಿದ ಯಲ್ಲಪ್ಪ ಗುಂಡಪ್ಪ ಬಬಲೇಶ್ವರ ಅವರ ಸ್ವಾಗತ ಹಾಗೂ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಭಾರತವು ಜಗತ್ತಿನ ಬಲಿಷ್ಠ ರಾಷ್ಟ್ರವಾಗಿ ರೂಪುಗೊಳ್ಳಲು ಯೋಧರ ಪರಿಶ್ರಮವಿದೆ. ಯುವಜನರು ದುಶ್ಚಟಗಳಿಗೆ ದಾಸರಾಗದೆ ದೇಶ, ಸಮಾಜ ಸೇವೆಯಲ್ಲಿ ನಿರತರಾಗಬೇಕು’ ಎಂದು ಹೇಳಿದರು.</p>.<p>‘ನಿವೃತ್ತ ಯೋಧರು ಮುಂದೆಯೂ ಗ್ರಾಮದಲ್ಲಿ ಪರಿಸರ ಸಂರಕ್ಷಣೆ, ಸ್ವಚ್ಛತೆ, ಶಿಕ್ಷಣದ ಕಾಳಜಿ ಬೆಳೆಸಿಕೊಂಡು ಗ್ರಾಮದ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಬದಲಾವಣೆ ತರಬೇಕು’ ಎಂದು ತಿಳಿಸಿದರು.</p>.<p>ಯುವ ಮುಖಂಡ ಲಕ್ಷ್ಮಣ ನಿರಾಣಿ ಮಾತನಾಡಿ, ‘ಸೈನಿಕರು ಹಗಲು ರಾತ್ರಿಯೆನ್ನದೆ ದೇಶದ ಗಡಿ ಕಾಯುತ್ತಿರುವುದರಿಂದ ನಾವೆಲ್ಲರೂ ದೇಶದೊಳಗೆ ಸುರಕ್ಷಿತವಾಗಿದ್ದೇವೆ. ಯೋಧರ ಸೇವೆ ಅವಿಸ್ಮರಣೀಯ. ಅಂತಹ ಯೋಧರನ್ನು ತವರಿನಲ್ಲಿ ಗೌರವಿಸುವುದು ಹೆಮ್ಮೆಯ ವಿಷಯ’ ಎಂದರು.</p>.<p>ತಾಲ್ಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಂ.ಸಿ. ಕೊಮಾರದೇಸಾಯಿ ಮಾತನಾಡಿದರು. ಮುಖಂಡರಾದ ರುದ್ರಪ್ಪ ನಿರಾಣಿ, ಈರಪ್ಪ ಕೋಟಿ, ಗುಂಡಪ್ಪ ತಂಬಾಕದ, ರಮೇಶ ಹಳ್ಳಿ, ರುದ್ರಪ್ಪ ತಂಬಾಕದ, ಪುಂಡಲೀಕ ಗಾಣಿಗೇರ ಇದ್ದರು. ಶೇಖರ ಗೊಳಸಂಗಿ, ಎಸ್.ಎಂ. ನಾಗನೂರು ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-19-177072875</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀಳಗಿ: ‘ಮನೆ, ಕುಟುಂಬ, ಸುಖ– ಸಂತೋಷ ತ್ಯಾಗ ಮಾಡಿ, ಗಡಿಯಲ್ಲಿ ದೇಶ ಕಾಯುವ ಯೋಧರ ತ್ಯಾಗ, ದೇಶಪ್ರೇಮವು ಸದಾ ಸ್ಮರಣೀಯ’ ಎಂದು ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯರು ಹೇಳಿದರು.</p>.<p>22 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಪಡೆದು ಸ್ವಗ್ರಾಮವಾದ ತಾಲ್ಲೂಕಿನ ಇನಾಂಹಂಚಿನಾಳ ಗ್ರಾಮಕ್ಕೆ ಆಗಮಿಸಿದ ಯಲ್ಲಪ್ಪ ಗುಂಡಪ್ಪ ಬಬಲೇಶ್ವರ ಅವರ ಸ್ವಾಗತ ಹಾಗೂ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಭಾರತವು ಜಗತ್ತಿನ ಬಲಿಷ್ಠ ರಾಷ್ಟ್ರವಾಗಿ ರೂಪುಗೊಳ್ಳಲು ಯೋಧರ ಪರಿಶ್ರಮವಿದೆ. ಯುವಜನರು ದುಶ್ಚಟಗಳಿಗೆ ದಾಸರಾಗದೆ ದೇಶ, ಸಮಾಜ ಸೇವೆಯಲ್ಲಿ ನಿರತರಾಗಬೇಕು’ ಎಂದು ಹೇಳಿದರು.</p>.<p>‘ನಿವೃತ್ತ ಯೋಧರು ಮುಂದೆಯೂ ಗ್ರಾಮದಲ್ಲಿ ಪರಿಸರ ಸಂರಕ್ಷಣೆ, ಸ್ವಚ್ಛತೆ, ಶಿಕ್ಷಣದ ಕಾಳಜಿ ಬೆಳೆಸಿಕೊಂಡು ಗ್ರಾಮದ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಬದಲಾವಣೆ ತರಬೇಕು’ ಎಂದು ತಿಳಿಸಿದರು.</p>.<p>ಯುವ ಮುಖಂಡ ಲಕ್ಷ್ಮಣ ನಿರಾಣಿ ಮಾತನಾಡಿ, ‘ಸೈನಿಕರು ಹಗಲು ರಾತ್ರಿಯೆನ್ನದೆ ದೇಶದ ಗಡಿ ಕಾಯುತ್ತಿರುವುದರಿಂದ ನಾವೆಲ್ಲರೂ ದೇಶದೊಳಗೆ ಸುರಕ್ಷಿತವಾಗಿದ್ದೇವೆ. ಯೋಧರ ಸೇವೆ ಅವಿಸ್ಮರಣೀಯ. ಅಂತಹ ಯೋಧರನ್ನು ತವರಿನಲ್ಲಿ ಗೌರವಿಸುವುದು ಹೆಮ್ಮೆಯ ವಿಷಯ’ ಎಂದರು.</p>.<p>ತಾಲ್ಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಂ.ಸಿ. ಕೊಮಾರದೇಸಾಯಿ ಮಾತನಾಡಿದರು. ಮುಖಂಡರಾದ ರುದ್ರಪ್ಪ ನಿರಾಣಿ, ಈರಪ್ಪ ಕೋಟಿ, ಗುಂಡಪ್ಪ ತಂಬಾಕದ, ರಮೇಶ ಹಳ್ಳಿ, ರುದ್ರಪ್ಪ ತಂಬಾಕದ, ಪುಂಡಲೀಕ ಗಾಣಿಗೇರ ಇದ್ದರು. ಶೇಖರ ಗೊಳಸಂಗಿ, ಎಸ್.ಎಂ. ನಾಗನೂರು ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-19-177072875</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>