<p><strong>ಬೀಳಗಿ</strong>: ಪಟ್ಟಣದ ಸಿದ್ದೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ 1999- 2000ನೇ ಸಾಲಿನ ವಿದ್ಯಾರ್ಥಿಗಳು ಭಾನುವಾರ ಕಾಲೇಜಿನಲ್ಲಿ ಗುರುವಂದನೆ ಹಾಗೂ ಸ್ನೇಹಸಮ್ಮಿಲನ ಹಮ್ಮಿಕೊಂಡಿದ್ದರು.</p>.<p>ಪುಷ್ಪಮಳೆಗರೆಯುವ ಮೂಲಕ ಎಲ್ಲ ಶಿಕ್ಷಕರನ್ನು ಕಾರ್ಯಕ್ರಮಕ್ಕೆ ಬರ ಮಾಡಿಕೊಳ್ಳಲಾಯಿತು. ವಿದ್ಯಾರ್ಥಿಗಳು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.</p>.<p>ಸಾನ್ನಿಧ್ಯ ವಹಿಸಿದ ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಹಳೆ ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ನೆನಪಿಸಿಕೊಂಡು ಗುರು ವಂದನೆ ಕಾರ್ಯಕ್ರಮ ಮಾಡಿರುವುದು ಅವರಲ್ಲಿರುವ ಸಂಸ್ಕಾರಕ್ಕೆ ಸಾಕ್ಷಿಯಾಗಿದೆ. ಇಲ್ಲಿ ಕಲಿತವರು ಇತರರಿಗೆ ಮಾದರಿಯಾಗಿದ್ದಾರೆ’ ಎಂದು ಹೇಳಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತ ಪ್ರಾಚಾರ್ಯ ಎಚ್.ಬಿ. ಧರ್ಮಣ್ಣವರ ಮಾತನಾಡಿದರು. ನಿವೃತ್ತ ಉಪಪ್ರಾಚಾರ್ಯ ವಿ.ಎಸ್.ತಳಕೇರಿ, ನಿವೃತ್ತ ಶಿಕ್ಷಕ ಎಸ್.ಎಚ್.ಚೌಧರಿ ಮಾತನಾಡಿದರು. ಪರಶುರಾಮ ಮಾದರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಕಲಾ ಗೋಕಾವಿ ನಿರೂಪಿಸಿದರು.</p>.<p>ಪ್ರಾಚಾರ್ಯ ರವೀಂದ್ರ ನಾಯಕ, ನಿವೃತ್ತ ಶಿಕ್ಷಕರಾದ ವಿ.ಟಿ.ಲಮಾಣಿ, ವಿದ್ಯಾ ಮಳಖೇಡ, ಡಿ.ಐ. ಬಡನ್ನಬರ ಪ್ರೇಮಾ ಸಿಂಗಾರಿ, ಎ.ಎನ್. ಹುಸೆನನಾಯಕ, ಎಸ್.ಎಚ್.ಚೌದರಿ, ಸಿದ್ದು ಬಾಗಶೆಟ್ಟಿ, ಸಿ.ಎಫ್.ಕುಂಬಾರ, ಲಕ್ಷ್ಮೀಕಾಂತ ಮಮದಾಪೂರ, ಕೇಶವ ಕುಲಕರ್ಣಿ, ಬಿ.ಬಿ. ಕೋರಿ, ಎಸ್.ವಿ.ಸಜ್ಜನ, ಉಮೇಶ ಮಠಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ</strong>: ಪಟ್ಟಣದ ಸಿದ್ದೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ 1999- 2000ನೇ ಸಾಲಿನ ವಿದ್ಯಾರ್ಥಿಗಳು ಭಾನುವಾರ ಕಾಲೇಜಿನಲ್ಲಿ ಗುರುವಂದನೆ ಹಾಗೂ ಸ್ನೇಹಸಮ್ಮಿಲನ ಹಮ್ಮಿಕೊಂಡಿದ್ದರು.</p>.<p>ಪುಷ್ಪಮಳೆಗರೆಯುವ ಮೂಲಕ ಎಲ್ಲ ಶಿಕ್ಷಕರನ್ನು ಕಾರ್ಯಕ್ರಮಕ್ಕೆ ಬರ ಮಾಡಿಕೊಳ್ಳಲಾಯಿತು. ವಿದ್ಯಾರ್ಥಿಗಳು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.</p>.<p>ಸಾನ್ನಿಧ್ಯ ವಹಿಸಿದ ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಹಳೆ ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ನೆನಪಿಸಿಕೊಂಡು ಗುರು ವಂದನೆ ಕಾರ್ಯಕ್ರಮ ಮಾಡಿರುವುದು ಅವರಲ್ಲಿರುವ ಸಂಸ್ಕಾರಕ್ಕೆ ಸಾಕ್ಷಿಯಾಗಿದೆ. ಇಲ್ಲಿ ಕಲಿತವರು ಇತರರಿಗೆ ಮಾದರಿಯಾಗಿದ್ದಾರೆ’ ಎಂದು ಹೇಳಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತ ಪ್ರಾಚಾರ್ಯ ಎಚ್.ಬಿ. ಧರ್ಮಣ್ಣವರ ಮಾತನಾಡಿದರು. ನಿವೃತ್ತ ಉಪಪ್ರಾಚಾರ್ಯ ವಿ.ಎಸ್.ತಳಕೇರಿ, ನಿವೃತ್ತ ಶಿಕ್ಷಕ ಎಸ್.ಎಚ್.ಚೌಧರಿ ಮಾತನಾಡಿದರು. ಪರಶುರಾಮ ಮಾದರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಕಲಾ ಗೋಕಾವಿ ನಿರೂಪಿಸಿದರು.</p>.<p>ಪ್ರಾಚಾರ್ಯ ರವೀಂದ್ರ ನಾಯಕ, ನಿವೃತ್ತ ಶಿಕ್ಷಕರಾದ ವಿ.ಟಿ.ಲಮಾಣಿ, ವಿದ್ಯಾ ಮಳಖೇಡ, ಡಿ.ಐ. ಬಡನ್ನಬರ ಪ್ರೇಮಾ ಸಿಂಗಾರಿ, ಎ.ಎನ್. ಹುಸೆನನಾಯಕ, ಎಸ್.ಎಚ್.ಚೌದರಿ, ಸಿದ್ದು ಬಾಗಶೆಟ್ಟಿ, ಸಿ.ಎಫ್.ಕುಂಬಾರ, ಲಕ್ಷ್ಮೀಕಾಂತ ಮಮದಾಪೂರ, ಕೇಶವ ಕುಲಕರ್ಣಿ, ಬಿ.ಬಿ. ಕೋರಿ, ಎಸ್.ವಿ.ಸಜ್ಜನ, ಉಮೇಶ ಮಠಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>