<p><strong>ಬಾಗಲಕೋಟೆ: </strong>ವೀರಶೈವ ಲಿಂಗಾಯತ ನಾಯಕ ಎಸ್.ಆರ್. ಪಾಟೀಲ ಕಡೆಗಣಿಸುತ್ತಿರುವುದು ಏಕೆ ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.</p>.<p>ಮಂಗಳವಾರ ಮುಧೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಂದಾಗಲಷ್ಟೇ ಕಾಂಗ್ರೆಸ್ ನವರಿಗೆ ಲಿಂಗಾಯತರು ನೆನಪಾಗುತ್ತಾರೆ ಎಂದರು.</p>.<p>1967ರ ನಂತರ ರಾಜ್ಯದಲ್ಲಿ ಲಿಂಗಾಯತ ಮುಖ್ಯಮಂತ್ರಿ ಮಾಡಿಲ್ಲ. ವೀರೇಂದ್ರ ಪಾಟೀಲ ಅವರನ್ನು ಅವಮಾನ ಮಾಡಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಯಿತು ಎಂದು ಟೀಕಿಸಿದರು.</p>.<p><strong>ಓದಿ... <a href="https://www.prajavani.net/district/dharwad/karnataka-election-2023-hubli-dharwad-central-assembly-constituency-jagadish-shettar-mahesh-1032663.html" target="_blank">ಬಿಜೆಪಿಯಲ್ಲಿ ಒಬ್ಬ ವ್ಯಕ್ತಿ ನಿರ್ಣಾಯಕವಲ್ಲ: ಜಗದೀಶ ಶೆಟ್ಟರ್ ವಿರುದ್ಧ ಮಹೇಶ ಟೀಕೆ</a></strong></p>.<p>ಲಿಂಗಾಯತ ಸಮಾಜವನ್ನು ಒಡೆಯಲು ಹೊರಟವರಿಗೆ ಈಗ ಪ್ರೀತಿ ಉಕ್ಕಿ ಹರಿಯುತ್ತಿದೆ. 2009ರಲ್ಲಿಯೇ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದ್ದರು. ಆ ಪ್ರಸ್ತಾವವನ್ನು ಕಾಂಗ್ರೆಸ್ ಸರ್ಕಾರ ತಿರಸ್ಕರಿಸಿತ್ತು. ನಮ್ಮ ಸರ್ಕಾರ ಮೀಸಲಾತಿ ಹೆಚ್ಚಿಸಿದೆ ಎಂದರು</p>.<p>ಕಾಂಗ್ರೆಸ್ ಸರ್ಕಾರದಲ್ಲಿ ಜಿಲೇಬಿಯೇ ಎಂದು ಫೈಲ್ ಇರುತ್ತಿತ್ತು. ಕೃಷ್ಣಾ ಮೇಲ್ದಂಡೆ ಯೋಜನೆ ಹಿನ್ನಡೆಗೂ ಕಾಂಗ್ರೆಸ್ ಕಾರಣ ಎಂದು ದೂರಿದರು.</p>.<p>ಬಿಜೆಪಿ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ಕೆಲಸ ಮಾಡಿದೆ. ಜಗದೀಶ ಶೆಟ್ಟರ್ ಪಕ್ಷ ಬಿಟ್ಟಿರುವುದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅವರಿಗೆ ಟಿಕೆಟ್ ಸಿಗದಿರಲು ಬಿ.ಎಲ್. ಸಂತೋಷ ಕಾರಣ ಎಂಬ ಆರೋಪವೂ ಸರಿಯಲ್ಲ ಎಂದು ಹೇಳಿದರು</p>.<p>ಮುಧೋಳ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p>.<p><strong>ಓದಿ... <a href="https://www.prajavani.net/jagadish-shettar-attacks-on-bjp-leader-bl-santosh-politics-karnataka-assembly-elections-2023-1032644.html" target="_blank">ಪಕ್ಷದ ಅಡಿಪಾಯ ಅಲುಗಾಡಿಸಿದ ಬಿ.ಎಲ್. ಸಂತೋಷ್: ಜಗದೀಶ್ ಶೆಟ್ಟರ್ ವಾಗ್ದಾಳಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ವೀರಶೈವ ಲಿಂಗಾಯತ ನಾಯಕ ಎಸ್.ಆರ್. ಪಾಟೀಲ ಕಡೆಗಣಿಸುತ್ತಿರುವುದು ಏಕೆ ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.</p>.<p>ಮಂಗಳವಾರ ಮುಧೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಂದಾಗಲಷ್ಟೇ ಕಾಂಗ್ರೆಸ್ ನವರಿಗೆ ಲಿಂಗಾಯತರು ನೆನಪಾಗುತ್ತಾರೆ ಎಂದರು.</p>.<p>1967ರ ನಂತರ ರಾಜ್ಯದಲ್ಲಿ ಲಿಂಗಾಯತ ಮುಖ್ಯಮಂತ್ರಿ ಮಾಡಿಲ್ಲ. ವೀರೇಂದ್ರ ಪಾಟೀಲ ಅವರನ್ನು ಅವಮಾನ ಮಾಡಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಯಿತು ಎಂದು ಟೀಕಿಸಿದರು.</p>.<p><strong>ಓದಿ... <a href="https://www.prajavani.net/district/dharwad/karnataka-election-2023-hubli-dharwad-central-assembly-constituency-jagadish-shettar-mahesh-1032663.html" target="_blank">ಬಿಜೆಪಿಯಲ್ಲಿ ಒಬ್ಬ ವ್ಯಕ್ತಿ ನಿರ್ಣಾಯಕವಲ್ಲ: ಜಗದೀಶ ಶೆಟ್ಟರ್ ವಿರುದ್ಧ ಮಹೇಶ ಟೀಕೆ</a></strong></p>.<p>ಲಿಂಗಾಯತ ಸಮಾಜವನ್ನು ಒಡೆಯಲು ಹೊರಟವರಿಗೆ ಈಗ ಪ್ರೀತಿ ಉಕ್ಕಿ ಹರಿಯುತ್ತಿದೆ. 2009ರಲ್ಲಿಯೇ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದ್ದರು. ಆ ಪ್ರಸ್ತಾವವನ್ನು ಕಾಂಗ್ರೆಸ್ ಸರ್ಕಾರ ತಿರಸ್ಕರಿಸಿತ್ತು. ನಮ್ಮ ಸರ್ಕಾರ ಮೀಸಲಾತಿ ಹೆಚ್ಚಿಸಿದೆ ಎಂದರು</p>.<p>ಕಾಂಗ್ರೆಸ್ ಸರ್ಕಾರದಲ್ಲಿ ಜಿಲೇಬಿಯೇ ಎಂದು ಫೈಲ್ ಇರುತ್ತಿತ್ತು. ಕೃಷ್ಣಾ ಮೇಲ್ದಂಡೆ ಯೋಜನೆ ಹಿನ್ನಡೆಗೂ ಕಾಂಗ್ರೆಸ್ ಕಾರಣ ಎಂದು ದೂರಿದರು.</p>.<p>ಬಿಜೆಪಿ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ಕೆಲಸ ಮಾಡಿದೆ. ಜಗದೀಶ ಶೆಟ್ಟರ್ ಪಕ್ಷ ಬಿಟ್ಟಿರುವುದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅವರಿಗೆ ಟಿಕೆಟ್ ಸಿಗದಿರಲು ಬಿ.ಎಲ್. ಸಂತೋಷ ಕಾರಣ ಎಂಬ ಆರೋಪವೂ ಸರಿಯಲ್ಲ ಎಂದು ಹೇಳಿದರು</p>.<p>ಮುಧೋಳ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p>.<p><strong>ಓದಿ... <a href="https://www.prajavani.net/jagadish-shettar-attacks-on-bjp-leader-bl-santosh-politics-karnataka-assembly-elections-2023-1032644.html" target="_blank">ಪಕ್ಷದ ಅಡಿಪಾಯ ಅಲುಗಾಡಿಸಿದ ಬಿ.ಎಲ್. ಸಂತೋಷ್: ಜಗದೀಶ್ ಶೆಟ್ಟರ್ ವಾಗ್ದಾಳಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>