<p><strong>ಜಮಖಂಡಿ:</strong> ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತ ಸಂಪೂರ್ಣ ಹದಗೆಟ್ಟಿದೆ, ಆರ್ಥಿಕತೆಯಲ್ಲಿ ಮುಗ್ಗರಿಸಿ ಅಭಿವೃದ್ಧಿ ಶೂನ್ಯವಾಗಿದೆ, ಸಾಮಾನ್ಯ ಜನರ ಬದುಕು ಪರದಾಡುವಂತಾಗಿ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.</p>.<p>ಇಲ್ಲಿನ ಮುಧೋಳ ರಸ್ತೆಯಲ್ಲಿ ಬುಧವಾರ ಬಿಜೆಪಿ ಪಕ್ಷದಿಂದ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟಿಸಿದರು.</p>.<p>ಬೆಂಗಳೂರು ಹಿಡಿದು ರಾಜ್ಯದ ಎಲ್ಲ ನಗರ, ಪಟ್ಟಣಗಳ ಹಾಗೂ ಹಳ್ಳಿಗಳ ರಸ್ತೆಗಳು ಪೂರ್ತಿಯಾಗಿ ಹದಗೆಟ್ಟಿದ್ದು, ವಾಹನಗಳು ಓಡಾಡುವದು ಬಿಡಿ ಅಲ್ಲಿ ನಡೆದುಕೊಂಡು ಹೋಗಲೂ ಅಸಾಧ್ಯವಾಗಿದೆ ಎಂದರು.</p>.<p>ಈ ಹಿಂದೆ ಗುತ್ತಿಗೆದಾರರು ಮಾಡಿರುವ ಕಾಮಗಾರಿಗಳಿಗೆ ಎರಡು ವರ್ಷ ಕಳೆದರೂ ಬಿಲ್ ಪಾವತಿಯಾಗುತ್ತಿಲ್ಲ, ಬಿಲ್ ಪಡೆಯಲು ಅಧಿಕಾರಿಗಳು ಶೇ.60 ರಷ್ಟು ಕಮಿಶನ್ ಕೇಳುತ್ತಿದ್ದಾರೆ. ಹೀಗಾಗಿ ಯಾರೂ ಸರ್ಕಾರಿ ಕೆಲಸ ಮಾಡಲು ಮುಂದೆ ಬರುತ್ತಿಲ್ಲ. ಹೊಸ ರಸ್ತೆಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಹರಿಹಾಯ್ದರು.</p>.<p>ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಹಣ ಸಂಪೂರ್ಣವಾಗಿ ಖಾಲಿಯಾಗಿದೆ, ಸರ್ಕಾರ ನಡೆಸುವದಕ್ಕಿಂತ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದರು.</p>.<p>ಡಾ. ವಿಜಯಲಕ್ಷ್ಮೀ ತುಂಗಳ, ಅಜಯ ಕಡಪಟ್ಟಿ, ಮಲ್ಲು ದಾನಗೌಡ, ಸಿ.ಟಿ.ಉಪಾಧ್ಯ, ಧರೆಪ್ಪ ಗುಗ್ಗರಿ, ಪ್ರಶಾಂತ ಗಾಯಕವಾಡ, ಸುರೇಶಗೌಡ ಪಾಟೀಲ, ಕಾಶಿನಾಥ ಚನವೀರ, ಹಣಮಂತ ಲಿಗಾಡೆ, ಯಮನೂರ ಮೂಲಂಗಿ, ಶಂಕರ ಕಾಳೆ, ಶ್ರೀಧರ ಕಂಬಿ, ಕುಷಾಲ ವಾಘಮೊರೆ, ರಾಜು ಕಡಕೋಳ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ:</strong> ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತ ಸಂಪೂರ್ಣ ಹದಗೆಟ್ಟಿದೆ, ಆರ್ಥಿಕತೆಯಲ್ಲಿ ಮುಗ್ಗರಿಸಿ ಅಭಿವೃದ್ಧಿ ಶೂನ್ಯವಾಗಿದೆ, ಸಾಮಾನ್ಯ ಜನರ ಬದುಕು ಪರದಾಡುವಂತಾಗಿ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.</p>.<p>ಇಲ್ಲಿನ ಮುಧೋಳ ರಸ್ತೆಯಲ್ಲಿ ಬುಧವಾರ ಬಿಜೆಪಿ ಪಕ್ಷದಿಂದ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟಿಸಿದರು.</p>.<p>ಬೆಂಗಳೂರು ಹಿಡಿದು ರಾಜ್ಯದ ಎಲ್ಲ ನಗರ, ಪಟ್ಟಣಗಳ ಹಾಗೂ ಹಳ್ಳಿಗಳ ರಸ್ತೆಗಳು ಪೂರ್ತಿಯಾಗಿ ಹದಗೆಟ್ಟಿದ್ದು, ವಾಹನಗಳು ಓಡಾಡುವದು ಬಿಡಿ ಅಲ್ಲಿ ನಡೆದುಕೊಂಡು ಹೋಗಲೂ ಅಸಾಧ್ಯವಾಗಿದೆ ಎಂದರು.</p>.<p>ಈ ಹಿಂದೆ ಗುತ್ತಿಗೆದಾರರು ಮಾಡಿರುವ ಕಾಮಗಾರಿಗಳಿಗೆ ಎರಡು ವರ್ಷ ಕಳೆದರೂ ಬಿಲ್ ಪಾವತಿಯಾಗುತ್ತಿಲ್ಲ, ಬಿಲ್ ಪಡೆಯಲು ಅಧಿಕಾರಿಗಳು ಶೇ.60 ರಷ್ಟು ಕಮಿಶನ್ ಕೇಳುತ್ತಿದ್ದಾರೆ. ಹೀಗಾಗಿ ಯಾರೂ ಸರ್ಕಾರಿ ಕೆಲಸ ಮಾಡಲು ಮುಂದೆ ಬರುತ್ತಿಲ್ಲ. ಹೊಸ ರಸ್ತೆಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಹರಿಹಾಯ್ದರು.</p>.<p>ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಹಣ ಸಂಪೂರ್ಣವಾಗಿ ಖಾಲಿಯಾಗಿದೆ, ಸರ್ಕಾರ ನಡೆಸುವದಕ್ಕಿಂತ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದರು.</p>.<p>ಡಾ. ವಿಜಯಲಕ್ಷ್ಮೀ ತುಂಗಳ, ಅಜಯ ಕಡಪಟ್ಟಿ, ಮಲ್ಲು ದಾನಗೌಡ, ಸಿ.ಟಿ.ಉಪಾಧ್ಯ, ಧರೆಪ್ಪ ಗುಗ್ಗರಿ, ಪ್ರಶಾಂತ ಗಾಯಕವಾಡ, ಸುರೇಶಗೌಡ ಪಾಟೀಲ, ಕಾಶಿನಾಥ ಚನವೀರ, ಹಣಮಂತ ಲಿಗಾಡೆ, ಯಮನೂರ ಮೂಲಂಗಿ, ಶಂಕರ ಕಾಳೆ, ಶ್ರೀಧರ ಕಂಬಿ, ಕುಷಾಲ ವಾಘಮೊರೆ, ರಾಜು ಕಡಕೋಳ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>