<p><strong>ಬಾದಾಮಿ</strong>: ರಾಜ್ಯ ಸರ್ಕಾರವು ಜನೌಷಧ ಕೇಂದ್ರಗಳನ್ನು ಮುಚ್ಚಲು ಹೊರಟಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ತಾಲ್ಲೂಕು ಬಿಜೆಪಿ ಮಂಡಲದಿಂದ ಪ್ರತಿಭಟನೆ ನಡೆಸಲಾಯಿತು.</p>.<p>ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಎದುರು ಮೌನ ಪ್ರತಿಭಟನೆ ನಡೆಸಿದರು.</p>.<p>ಬಾಗಲಕೋಟೆ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ‘ರಾಜ್ಯ ಸರ್ಕಾರದಿಂದ ಜನವಿರೋಧಿ ನೀತಿ ಇದೇ ರೀತಿ ಮುಂದುವರಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವನಗೌಡ ಸುಂಕದ, ತಾಲ್ಲೂಕು ಮಂಡಲ ಅಧ್ಯಕ್ಷ ನಾಗರಾಜ ಕಾಚಟ್ಟಿ, ಮುತ್ತು ಉಳ್ಳಾಗಡ್ಡಿ, ಹುಚ್ಚಪ್ಪ ಬೆಳ್ಳಿಗುಂಡಿ, ಭೀಮನಗೌಡ ಪಾಟೀಲ, ಹೊನ್ನಯ್ಯ ಹಿರೇಮಠ, ಬೇಲೂರಪ್ಪ ವಡ್ಡರ, ಸವಿತಾ ಜಾನಕಿ, ರೆಹಮಾನ ಕೆರಕಲಮಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ</strong>: ರಾಜ್ಯ ಸರ್ಕಾರವು ಜನೌಷಧ ಕೇಂದ್ರಗಳನ್ನು ಮುಚ್ಚಲು ಹೊರಟಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ತಾಲ್ಲೂಕು ಬಿಜೆಪಿ ಮಂಡಲದಿಂದ ಪ್ರತಿಭಟನೆ ನಡೆಸಲಾಯಿತು.</p>.<p>ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಎದುರು ಮೌನ ಪ್ರತಿಭಟನೆ ನಡೆಸಿದರು.</p>.<p>ಬಾಗಲಕೋಟೆ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ‘ರಾಜ್ಯ ಸರ್ಕಾರದಿಂದ ಜನವಿರೋಧಿ ನೀತಿ ಇದೇ ರೀತಿ ಮುಂದುವರಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವನಗೌಡ ಸುಂಕದ, ತಾಲ್ಲೂಕು ಮಂಡಲ ಅಧ್ಯಕ್ಷ ನಾಗರಾಜ ಕಾಚಟ್ಟಿ, ಮುತ್ತು ಉಳ್ಳಾಗಡ್ಡಿ, ಹುಚ್ಚಪ್ಪ ಬೆಳ್ಳಿಗುಂಡಿ, ಭೀಮನಗೌಡ ಪಾಟೀಲ, ಹೊನ್ನಯ್ಯ ಹಿರೇಮಠ, ಬೇಲೂರಪ್ಪ ವಡ್ಡರ, ಸವಿತಾ ಜಾನಕಿ, ರೆಹಮಾನ ಕೆರಕಲಮಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>