<p><strong>ಮಹಾಲಿಂಗಪುರ:</strong> ವಿದ್ಯಾರ್ಥಿಗಳಲ್ಲಿ ವ್ಯಾಪಾರ ಮನೋಭಾವ, ವ್ಯವಹಾರಿಕ ಜೀವನ ನಿರ್ವಹಣೆ ಮಹತ್ವ ತಿಳಿಸುವ ಉದ್ದೇಶದಿಂದ ಸಮೀಪದ ನಾಗರಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಮಕ್ಕಳ ಸಂತೆ ಗಮನ ಸೆಳೆಯಿತು.</p>.<p>ಓದು ಆಟ-ಪಾಠಕ್ಕೆ ಮೀಸಲಾಗಿದ್ದ ಶಾಲಾ ಆವರಣ ಸಂತೆಯ ರೀತಿ ಮಾರ್ಪಾಡಾಗಿತ್ತು. 1 ರಿಂದ 7ನೇ ತರಗತಿ ವಿದ್ಯಾರ್ಥಿಗಳು ತಮ್ಮ ಮನೆ, ತೋಟದಿಂದ ತಂದ ಬಗೆ ಬಗೆಯ ತಾಜಾ ತರಕಾರಿ, ಹೂವು, ಸೊಪ್ಪು, ಹಣ್ಣು-ಹಂಪಲು ಹಾಗೂ ತಿಂಡಿ ತಿನಿಸುಗಳು ಸಂತೆಯಲ್ಲಿದ್ದವು. ಸಂತೆ ಸ್ಥಳದಲ್ಲೇ ಭಜ್ಜಿ ತಯಾರಿಸಿದ್ದು ವಿಶೇಷವಾಗಿತ್ತು. ಮೊದಲೇ ಹಳ್ಳಿ ಮಕ್ಕಳಾಗಿದ್ದರಿಂದ ಪೈಪೋಟಿಗೆ ಬಿದ್ದವರಂತೆ ಭರ್ಜರಿ ವ್ಯಾಪಾರ ಮಾಡಿದರು.</p>.<p>ಶಿಕ್ಷಕರು, ಪೋಷಕರೇ ಗ್ರಾಹಕರಾಗಿ ತಮಗಿಷ್ಟವಾದ ವಸ್ತುಗಳನ್ನು ಖರೀದಿಸಿದರು. </p>.<p>ಮೋಘಸಿದ್ಧೇಶ್ವರ ದೇವಸ್ಥಾನದ ಅರ್ಚಕ ಸದಾಶಿವ ಒಡೆಯರ ಮಕ್ಕಳ ಸಂತೆಗೆ ಚಾಲನೆ ನೀಡಿ ಮಾತನಾಡಿ, ‘ಮಕ್ಕಳಿಗೆ ಪಠ್ಯ ಚಟುವಟಿಕೆಗಳ ಜತೆಗೆ ಸಹಪಠ್ಯ ಚಟುವಟಿಕೆಗಳನ್ನು ನಡೆಸುವುದರಿಂದ ಅವರ ಬೌದ್ಧಿಕ ಜ್ಞಾನ ವಿಕಾಸ ಮತ್ತು ವ್ಯಕ್ತಿತ್ವ ರೂಪುಗೊಳ್ಳುವುದಕ್ಕೆ ಸಹಕಾರಿಯಾಗುತ್ತದೆ’ ಎಂದರು.</p>.<p>ಎಸ್ಡಿಎಂಸಿ ಅಧ್ಯಕ್ಷ ದುಂಡಪ್ಪ ಕೈಪಾಳಿ, ಮುಖ್ಯಶಿಕ್ಷಕ ವಿಠ್ಠಲ ರೋಡಕರ, ದುಂಡಪ್ಪ ಜೈನಾಪುರ, ಶ್ರೀಶೈಲಗೌಡ ಪಾಟೀಲ, ಸುಭಾಷ ಕತ್ತಿ, ಶಂಕರಗೌಡ ಪಾಟೀಲ, ಯಲ್ಲಪ್ಪ ಸೂರ್ಯವಂಶಿ, ಶ್ರೀನಿವಾಸ ಪಾಟೀಲ, ಸಿದ್ದಪ್ಪ ಗಿರೆವ್ವಗೋಳ, ಸಿದ್ದಪ್ಪ ರಡರಟ್ಟಿ, ಲೋಕಣ್ಣ ಕತ್ತಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ:</strong> ವಿದ್ಯಾರ್ಥಿಗಳಲ್ಲಿ ವ್ಯಾಪಾರ ಮನೋಭಾವ, ವ್ಯವಹಾರಿಕ ಜೀವನ ನಿರ್ವಹಣೆ ಮಹತ್ವ ತಿಳಿಸುವ ಉದ್ದೇಶದಿಂದ ಸಮೀಪದ ನಾಗರಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಮಕ್ಕಳ ಸಂತೆ ಗಮನ ಸೆಳೆಯಿತು.</p>.<p>ಓದು ಆಟ-ಪಾಠಕ್ಕೆ ಮೀಸಲಾಗಿದ್ದ ಶಾಲಾ ಆವರಣ ಸಂತೆಯ ರೀತಿ ಮಾರ್ಪಾಡಾಗಿತ್ತು. 1 ರಿಂದ 7ನೇ ತರಗತಿ ವಿದ್ಯಾರ್ಥಿಗಳು ತಮ್ಮ ಮನೆ, ತೋಟದಿಂದ ತಂದ ಬಗೆ ಬಗೆಯ ತಾಜಾ ತರಕಾರಿ, ಹೂವು, ಸೊಪ್ಪು, ಹಣ್ಣು-ಹಂಪಲು ಹಾಗೂ ತಿಂಡಿ ತಿನಿಸುಗಳು ಸಂತೆಯಲ್ಲಿದ್ದವು. ಸಂತೆ ಸ್ಥಳದಲ್ಲೇ ಭಜ್ಜಿ ತಯಾರಿಸಿದ್ದು ವಿಶೇಷವಾಗಿತ್ತು. ಮೊದಲೇ ಹಳ್ಳಿ ಮಕ್ಕಳಾಗಿದ್ದರಿಂದ ಪೈಪೋಟಿಗೆ ಬಿದ್ದವರಂತೆ ಭರ್ಜರಿ ವ್ಯಾಪಾರ ಮಾಡಿದರು.</p>.<p>ಶಿಕ್ಷಕರು, ಪೋಷಕರೇ ಗ್ರಾಹಕರಾಗಿ ತಮಗಿಷ್ಟವಾದ ವಸ್ತುಗಳನ್ನು ಖರೀದಿಸಿದರು. </p>.<p>ಮೋಘಸಿದ್ಧೇಶ್ವರ ದೇವಸ್ಥಾನದ ಅರ್ಚಕ ಸದಾಶಿವ ಒಡೆಯರ ಮಕ್ಕಳ ಸಂತೆಗೆ ಚಾಲನೆ ನೀಡಿ ಮಾತನಾಡಿ, ‘ಮಕ್ಕಳಿಗೆ ಪಠ್ಯ ಚಟುವಟಿಕೆಗಳ ಜತೆಗೆ ಸಹಪಠ್ಯ ಚಟುವಟಿಕೆಗಳನ್ನು ನಡೆಸುವುದರಿಂದ ಅವರ ಬೌದ್ಧಿಕ ಜ್ಞಾನ ವಿಕಾಸ ಮತ್ತು ವ್ಯಕ್ತಿತ್ವ ರೂಪುಗೊಳ್ಳುವುದಕ್ಕೆ ಸಹಕಾರಿಯಾಗುತ್ತದೆ’ ಎಂದರು.</p>.<p>ಎಸ್ಡಿಎಂಸಿ ಅಧ್ಯಕ್ಷ ದುಂಡಪ್ಪ ಕೈಪಾಳಿ, ಮುಖ್ಯಶಿಕ್ಷಕ ವಿಠ್ಠಲ ರೋಡಕರ, ದುಂಡಪ್ಪ ಜೈನಾಪುರ, ಶ್ರೀಶೈಲಗೌಡ ಪಾಟೀಲ, ಸುಭಾಷ ಕತ್ತಿ, ಶಂಕರಗೌಡ ಪಾಟೀಲ, ಯಲ್ಲಪ್ಪ ಸೂರ್ಯವಂಶಿ, ಶ್ರೀನಿವಾಸ ಪಾಟೀಲ, ಸಿದ್ದಪ್ಪ ಗಿರೆವ್ವಗೋಳ, ಸಿದ್ದಪ್ಪ ರಡರಟ್ಟಿ, ಲೋಕಣ್ಣ ಕತ್ತಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>