<p><strong>ಬಾದಾಮಿ:</strong> ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕು ಘಟಕದ ಬಿಜೆಪಿ ಮಂಡಲ ಆಶ್ರಯದಲ್ಲಿ ಸೋಮವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಟ್ಟಣದ ಮುಖ್ಯ ಬೀದಿಯಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ರಾಜ್ಯದ ಖಜಾನೆ ಖಾಲಿಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ಬೆಲೆ ಏರಿಸಿ ಜನ ಸಾಮಾನ್ಯರ ಮೇಲೆ ಹೊರೆ ಬೀಳುವಂತೆ ಮಾಡಿದ್ದಾರೆ. ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.</p>.<p>‘ಅಧಿಕಾರಕ್ಕೆ ಬಂದ ವರ್ಷದಲ್ಲಿಯೇ ಮುದ್ರಾಂಕ ನೋಂದಣಿ, ಸ್ಥಿರಾಸ್ತಿಗಳ ಮಾರ್ಗಸೂಚಿ ದರ, ಮೋಟಾರ್ ವಾಹನಗಳ ನೋಂದಣಿ ಶುಲ್ಕ, ವಾಣಿಜ್ಯ ವಿದ್ಯುತ್ ದರ, ಹಾಲಿನ ಬೆಲೆ ಮತ್ತು ರೈತರಿಗೆ ಬಿತ್ತನೆ ಬೀಜ ದರದ ಏರಿಕೆಯಿಂದ ಜನತೆಗೆ ತೊಂದರೆಯಾಗಿದೆ’ ಎಂದು ಆರೋಪಿಸಿದ್ದಾರೆ.</p>.<p>‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮತಾಂಧರು ಮತ್ತು ಸಮಾಜ ದ್ರೋಹಿಗಳು ವಿಜ್ರಂಭಿಸುವಂತಾಗಿದೆ. ಗೃಹ ಸಚಿವರು ರಾಜೀನಾಮೆ ಕೊಡಬೇಕು’ ಎಂದು ಬಾಗಲಕೋಟೆ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಆಗ್ರಹಿಸಿದರು.</p>.<p>ತಾಲ್ಲೂಕು ಘಟಕದ ಬಿಜೆಪಿ ಅಧ್ಯಕ್ಷ ನಾಗರಾಜ ಕಾಚಟ್ಟಿ, ಬಿ.ಪಿ. ಹಳ್ಳೂರ, ಶಜಾಜಿ ಪವಾರ, ಹೊನ್ನಯ್ಯ ಹಿರೇಮಠ, ಬೇಲೂರಪ್ಪ ವಡ್ಡರ, ರಮೇಶ ಹಾದಿಮನಿ, ಮಹಿಳಾ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ:</strong> ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕು ಘಟಕದ ಬಿಜೆಪಿ ಮಂಡಲ ಆಶ್ರಯದಲ್ಲಿ ಸೋಮವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಟ್ಟಣದ ಮುಖ್ಯ ಬೀದಿಯಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ರಾಜ್ಯದ ಖಜಾನೆ ಖಾಲಿಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ಬೆಲೆ ಏರಿಸಿ ಜನ ಸಾಮಾನ್ಯರ ಮೇಲೆ ಹೊರೆ ಬೀಳುವಂತೆ ಮಾಡಿದ್ದಾರೆ. ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.</p>.<p>‘ಅಧಿಕಾರಕ್ಕೆ ಬಂದ ವರ್ಷದಲ್ಲಿಯೇ ಮುದ್ರಾಂಕ ನೋಂದಣಿ, ಸ್ಥಿರಾಸ್ತಿಗಳ ಮಾರ್ಗಸೂಚಿ ದರ, ಮೋಟಾರ್ ವಾಹನಗಳ ನೋಂದಣಿ ಶುಲ್ಕ, ವಾಣಿಜ್ಯ ವಿದ್ಯುತ್ ದರ, ಹಾಲಿನ ಬೆಲೆ ಮತ್ತು ರೈತರಿಗೆ ಬಿತ್ತನೆ ಬೀಜ ದರದ ಏರಿಕೆಯಿಂದ ಜನತೆಗೆ ತೊಂದರೆಯಾಗಿದೆ’ ಎಂದು ಆರೋಪಿಸಿದ್ದಾರೆ.</p>.<p>‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮತಾಂಧರು ಮತ್ತು ಸಮಾಜ ದ್ರೋಹಿಗಳು ವಿಜ್ರಂಭಿಸುವಂತಾಗಿದೆ. ಗೃಹ ಸಚಿವರು ರಾಜೀನಾಮೆ ಕೊಡಬೇಕು’ ಎಂದು ಬಾಗಲಕೋಟೆ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಆಗ್ರಹಿಸಿದರು.</p>.<p>ತಾಲ್ಲೂಕು ಘಟಕದ ಬಿಜೆಪಿ ಅಧ್ಯಕ್ಷ ನಾಗರಾಜ ಕಾಚಟ್ಟಿ, ಬಿ.ಪಿ. ಹಳ್ಳೂರ, ಶಜಾಜಿ ಪವಾರ, ಹೊನ್ನಯ್ಯ ಹಿರೇಮಠ, ಬೇಲೂರಪ್ಪ ವಡ್ಡರ, ರಮೇಶ ಹಾದಿಮನಿ, ಮಹಿಳಾ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>