<p><strong>ಹೆಬ್ಬಳ್ಳಿ (ಬಾದಾಮಿ):</strong> ಗ್ರಾಮದ ಬಿಎಸ್ಎಫ್ ಯೋಧ ಮನೆಯಲ್ಲಿ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ಹನುಮಂತ ನೆರಳೆ ತಿಳಿಸಿದರು.</p>.<p>ಮಲ್ಲಯ್ಯ ಬಸಯ್ಯ ರೇಷ್ಮಿ (38) ಮೃತ ಯೋಧ. ರಜೆಯ ಮೇಲೆ ಊರಿಗೆ ಬಂದಿದ್ದರು. ಮಿಜೋರಾಂ ಗಡಿ ಪ್ರದೇಶದ ಐಜ್ವಾಲಾದ ಬಿ.ಎಸ್.ಎಫ್. ಯೋಧರಾಗಿ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. </p>.<p>ಜೀವನದಲ್ಲಿ ಜಿಗುಪ್ಸೆ ಮೂಡಿದ್ದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ತಂದೆ, ತಾಯಿ ಇದ್ದಾರೆ.</p>.<p>ಮೃತ ಯೋಧನ ನಿಧನದಿಂದ ಗ್ರಾಮದಲ್ಲಿ ಮೌನ ಅವರಿಸಿತ್ತು. ಕುಟುಂಬದ ಸದಸ್ಯರು ದುಃಖಿಸುವುದು ಮನ ಮಿಡಿಯುವಂತಿತ್ತು. ಯೋಧನ ಪತ್ನಿ, ಪುತ್ರಿಯರು ಮತ್ತು ಪೋಷಕರು ಅಳುವುದನ್ನು ಕಂಡು ಸಾರ್ವಜನಿಕರಿಗೂ ಕಣ್ಣಂಚಿನಲ್ಲಿ ನೀರು ತುಂಬಿತ್ತು.</p>.<p>ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಯೋಧನ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಗಣ್ಯರು, ಅಧಿಕಾರಿಗಳು ಮತ್ತು ಸಾರ್ವಜನಿಕರು ಪುಷ್ಪ ಅರ್ಪಿಸಿ ಅಂತಿಮ ನಮನ ಸಲ್ಲಿಸಿದರು.</p>.<p>ಪೊಲೀಸರು ಮೂರು ಸುತ್ತು ಗುಂಡು ಹಾರಿಸಿದರು. ಯುವಕರು ಯೋಧನಿಗೆ ಜೈಕಾರ ಹಾಕಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಗ್ರಾಮದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿಯಿತು.</p>.<p>ತಹಶೀಲ್ದಾರ್ ಶಿವಾನಂದ ಬೊಮ್ಮನ್ನವರ, ಪೊಲೀಸ್ ಅಧಿಕಾರಿಗಳು, ಗಣ್ಯರು ಮತ್ತು ಗ್ರಾಮಸ್ಥರು ಅಂತಿಮ ಗೌರವ ನಮನ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ಬಳ್ಳಿ (ಬಾದಾಮಿ):</strong> ಗ್ರಾಮದ ಬಿಎಸ್ಎಫ್ ಯೋಧ ಮನೆಯಲ್ಲಿ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ಹನುಮಂತ ನೆರಳೆ ತಿಳಿಸಿದರು.</p>.<p>ಮಲ್ಲಯ್ಯ ಬಸಯ್ಯ ರೇಷ್ಮಿ (38) ಮೃತ ಯೋಧ. ರಜೆಯ ಮೇಲೆ ಊರಿಗೆ ಬಂದಿದ್ದರು. ಮಿಜೋರಾಂ ಗಡಿ ಪ್ರದೇಶದ ಐಜ್ವಾಲಾದ ಬಿ.ಎಸ್.ಎಫ್. ಯೋಧರಾಗಿ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. </p>.<p>ಜೀವನದಲ್ಲಿ ಜಿಗುಪ್ಸೆ ಮೂಡಿದ್ದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ತಂದೆ, ತಾಯಿ ಇದ್ದಾರೆ.</p>.<p>ಮೃತ ಯೋಧನ ನಿಧನದಿಂದ ಗ್ರಾಮದಲ್ಲಿ ಮೌನ ಅವರಿಸಿತ್ತು. ಕುಟುಂಬದ ಸದಸ್ಯರು ದುಃಖಿಸುವುದು ಮನ ಮಿಡಿಯುವಂತಿತ್ತು. ಯೋಧನ ಪತ್ನಿ, ಪುತ್ರಿಯರು ಮತ್ತು ಪೋಷಕರು ಅಳುವುದನ್ನು ಕಂಡು ಸಾರ್ವಜನಿಕರಿಗೂ ಕಣ್ಣಂಚಿನಲ್ಲಿ ನೀರು ತುಂಬಿತ್ತು.</p>.<p>ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಯೋಧನ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಗಣ್ಯರು, ಅಧಿಕಾರಿಗಳು ಮತ್ತು ಸಾರ್ವಜನಿಕರು ಪುಷ್ಪ ಅರ್ಪಿಸಿ ಅಂತಿಮ ನಮನ ಸಲ್ಲಿಸಿದರು.</p>.<p>ಪೊಲೀಸರು ಮೂರು ಸುತ್ತು ಗುಂಡು ಹಾರಿಸಿದರು. ಯುವಕರು ಯೋಧನಿಗೆ ಜೈಕಾರ ಹಾಕಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಗ್ರಾಮದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿಯಿತು.</p>.<p>ತಹಶೀಲ್ದಾರ್ ಶಿವಾನಂದ ಬೊಮ್ಮನ್ನವರ, ಪೊಲೀಸ್ ಅಧಿಕಾರಿಗಳು, ಗಣ್ಯರು ಮತ್ತು ಗ್ರಾಮಸ್ಥರು ಅಂತಿಮ ಗೌರವ ನಮನ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>