<p><strong>ಜಮಖಂಡಿ</strong>: ನಗರದ ಬಸ್ ನಿಲ್ದಾಣಕ್ಕೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.</p>.<p>ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಪ್ರಜಾವಾಣಿ ಶುಕ್ರವಾರ ’ಗಬ್ಬೆದ್ದು ನಾರುತ್ತಿದೆ ಬಸ್ ನಿಲ್ದಾಣ’ ಎಂಬ ಸುದ್ದಿ ಪ್ರಕಟಿಸಿತ್ತು.</p>.<p> ಬಸ್ ನಿಲ್ದಾಣದ ಶೌಚಾಲಯಗಳನ್ನು ನಿತ್ಯ ಸ್ವಚ್ಛಗೊಳಿಸಬೇಕು. ನಿಲ್ದಾಣದಲ್ಲಿ ಬೆಳೆದಿರುವ ಕಸ–ಕಡ್ಡಿ, ಪ್ಲಾಸ್ಟಿಕ್, ಕಾಗದ ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ತಕ್ಷಣ ವಿಲೇವಾರಿ ಮಾಡಬೇಕು ಎಂದು ಘಟಕ ವ್ಯವಸ್ಥಾಪಕ ಎಸ್.ಬಿ. ಗಸ್ತಿ ಅವರಿಗೆ ಸೂಚಿಸಿದರು.</p>.<p>ಆಲಂಕಾರಿಕ ಗಿಡಗಳನ್ನು ಹಚ್ಚಲು ಬಸ್ ನಿಲ್ದಾಣದ ಒಳಗೆ ಎರಡು ಕಡೆ ಖಾಲಿ ಸ್ಥಳ ಬಿಟ್ಟಿದ್ದು, ಅಲ್ಲಿ ನೀರು ನಿಂತು ಗಬ್ಬೆದ್ದು ನಾರುವುದನ್ನು ಗಮನಿಸಿ ನಗರಸಭೆ ಕಾರ್ಮಿಕರಿಂದ ಆ ಜಾಗವನನ್ನು ತ್ವರಿತವಾಗಿ ಸ್ವಚ್ಛತೆ ಮಾಡಿಸುವಂತೆ ಸೂಚಿಸಿದರು. ಒಂದು ಬಾರಿ ನಗರಸಭೆ ಸಿಬ್ಬಂದಿ ಸ್ವಚ್ಛ ಮಾಡುತ್ತಾರೆ. ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದೂ ತಾಕೀತು ಮಾಡಿದರು.</p>.<p>‘ಈ ರೀತಿ ಕೊಳಚೆ ನಿರ್ಮಾಣವಾದರೆ ಸೊಳ್ಳೆಗಳಾಗುತ್ತವೆ. ನಿತ್ಯ ಇಲ್ಲಿ ಸಾವಿರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಂದು ಹೋಗುತ್ತಾರೆ ಇದರಿಂದ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಹೀಗಾಗಿ ಸ್ವಚ್ಛತೆಗೆ ಆದ್ಯತೆ ನೀಡಿ’ ಎಂದು ಹೇಳಿದರು.</p>.<p>ತಹಶೀಲ್ದಾರ್ ಅನಿಲ ಬಡಿಗೇರ, ತಾಲ್ಲೂಕು ವೈದ್ಯಾಧಿಕಾರಿ ಜಿ.ಎಸ್. ಗಲಗಲಿ, ನಗರಸಭೆಯ ಕುಸುಮಾ ಸಪ್ಪಡ್ಲಾ, ಸಾರಿಗೆ ನಿಯಂತ್ರಕ ವಿಠ್ಠಲ ಕಾಂಬಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ</strong>: ನಗರದ ಬಸ್ ನಿಲ್ದಾಣಕ್ಕೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.</p>.<p>ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಪ್ರಜಾವಾಣಿ ಶುಕ್ರವಾರ ’ಗಬ್ಬೆದ್ದು ನಾರುತ್ತಿದೆ ಬಸ್ ನಿಲ್ದಾಣ’ ಎಂಬ ಸುದ್ದಿ ಪ್ರಕಟಿಸಿತ್ತು.</p>.<p> ಬಸ್ ನಿಲ್ದಾಣದ ಶೌಚಾಲಯಗಳನ್ನು ನಿತ್ಯ ಸ್ವಚ್ಛಗೊಳಿಸಬೇಕು. ನಿಲ್ದಾಣದಲ್ಲಿ ಬೆಳೆದಿರುವ ಕಸ–ಕಡ್ಡಿ, ಪ್ಲಾಸ್ಟಿಕ್, ಕಾಗದ ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ತಕ್ಷಣ ವಿಲೇವಾರಿ ಮಾಡಬೇಕು ಎಂದು ಘಟಕ ವ್ಯವಸ್ಥಾಪಕ ಎಸ್.ಬಿ. ಗಸ್ತಿ ಅವರಿಗೆ ಸೂಚಿಸಿದರು.</p>.<p>ಆಲಂಕಾರಿಕ ಗಿಡಗಳನ್ನು ಹಚ್ಚಲು ಬಸ್ ನಿಲ್ದಾಣದ ಒಳಗೆ ಎರಡು ಕಡೆ ಖಾಲಿ ಸ್ಥಳ ಬಿಟ್ಟಿದ್ದು, ಅಲ್ಲಿ ನೀರು ನಿಂತು ಗಬ್ಬೆದ್ದು ನಾರುವುದನ್ನು ಗಮನಿಸಿ ನಗರಸಭೆ ಕಾರ್ಮಿಕರಿಂದ ಆ ಜಾಗವನನ್ನು ತ್ವರಿತವಾಗಿ ಸ್ವಚ್ಛತೆ ಮಾಡಿಸುವಂತೆ ಸೂಚಿಸಿದರು. ಒಂದು ಬಾರಿ ನಗರಸಭೆ ಸಿಬ್ಬಂದಿ ಸ್ವಚ್ಛ ಮಾಡುತ್ತಾರೆ. ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದೂ ತಾಕೀತು ಮಾಡಿದರು.</p>.<p>‘ಈ ರೀತಿ ಕೊಳಚೆ ನಿರ್ಮಾಣವಾದರೆ ಸೊಳ್ಳೆಗಳಾಗುತ್ತವೆ. ನಿತ್ಯ ಇಲ್ಲಿ ಸಾವಿರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಂದು ಹೋಗುತ್ತಾರೆ ಇದರಿಂದ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಹೀಗಾಗಿ ಸ್ವಚ್ಛತೆಗೆ ಆದ್ಯತೆ ನೀಡಿ’ ಎಂದು ಹೇಳಿದರು.</p>.<p>ತಹಶೀಲ್ದಾರ್ ಅನಿಲ ಬಡಿಗೇರ, ತಾಲ್ಲೂಕು ವೈದ್ಯಾಧಿಕಾರಿ ಜಿ.ಎಸ್. ಗಲಗಲಿ, ನಗರಸಭೆಯ ಕುಸುಮಾ ಸಪ್ಪಡ್ಲಾ, ಸಾರಿಗೆ ನಿಯಂತ್ರಕ ವಿಠ್ಠಲ ಕಾಂಬಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>