<p><strong>ಬಾಗಲಕೋಟೆ</strong>: ಜಿಲ್ಲೆಯಲ್ಲಿ ಐದು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುವ ಅತಿಸಾರ ಭೇದಿ ತಡೆಗೆ ಜೂನ್ 16ರಿಂದ ಜುಲೈ 31ರವರೆಗೆ ಆಂದೋಲನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು. </p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅತಿಸಾರಭೇದಿ ಮತ್ತು ದಡಾರ ಮತ್ತು ರುಬೆಲ್ಲಾ ನಿರ್ಮೂಲನೆ ಕುರಿತು ಜರುಗಿದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹುಟ್ಟಿದ ಮಗುವಿನಿಂದ ಹಿಡಿದು 5 ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುತ್ತಿದ್ದು, ಯಾವುದೇ ಮಕ್ಕಳು ಇದರಿಂದ ಮರಣ ಹೊಂದದಂತೆ ಪರಿಣಾಮಕಾರಿ ಚಿಕಿತ್ಸೆಗೆ ಓಆರ್ಎಸ್ ಮತ್ತು ಝಿಂಕ್ ಮಾತ್ರೆ ವಿತರಣೆ ಮಾಡಬೇಕು ಎಂದು ಸೂಚಿಸಿದರು.</p>.<p>ಜಿಲ್ಲೆಯಲ್ಲಿ ಲಭ್ಯವಿರುವ 83,185 ಓಆರ್ಎಸ್ ಮತ್ತು 6,52,380 ಚಿಂಕ್ ಮಾತ್ರೆಗಳನ್ನು ಆಯಾ ತಾಲ್ಲೂಕಿನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿತರಣೆಗೆ ಕ್ರಮವಹಿಸಬೇಕು. ಕುಡಿಯುವ ನೀರು ಶುದ್ಧವಾಗಿರಬೇಕು. ಆಹಾರ ಸೇವನೆ ಮುಂಚೆ ಕೈ ತೊಳೆದುಕೊಳ್ಳುವುದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.</p>.<p>ಓಆರ್ಎಸ್ ಮತ್ತು ಝಿಂಕ್ ಮಾತ್ರೆಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ದೊರೆಯಲಿವೆ. ಝಿಂಕ್ ಮಾತ್ರೆಗಳನ್ನು 14 ದಿನಗಳವರೆಗೆ ಪ್ರತಿದಿನ 1 ರಂತೆ ನೀಡುವುದರಿಂದ ಶಕ್ತಿ ಹೆಚ್ಚುತ್ತದೆ. ಇದು ಎರಡು ತಿಂಗಳಗಳವರೆಗೆ ಅತಿಸಾರ ಭೇದಿಯಿಂದ ಕಾಪಾಡುತ್ತದೆ ಎಂದು ತಿಳಿಸಿದರು. </p>.<p>ವಿಶ್ವ ಆರೋಗ್ಯ ಸಂಸ್ಥೆಯ ಸರ್ವೇಲೆನ್ಸ್ ಅಧಿಕಾರಿ ಮುಕುಂದ ಗಲಗಲಿ ಮಾತನಾಡಿ, ಎಂ.ಆರ್-1 ಮತ್ತು ಎಂ.ಆರ್-2 ಲಸಿಕಾ ವಂಚಿತ ಮಕ್ಕಳನ್ನು ಹುಡುಕಿ, ಅವರಿಗೆ ದಡಾರ ಮತ್ತು ರುಬೆಲ್ಲಾ ಲಸಿಕೆ ಹಾಕಲಾಗುತ್ತದೆ. ಜ್ವರ ಮತ್ತು ಗಂಧೆ ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ ನಾಲ್ಕು ಪ್ರಕರಣಗಳು ದೃಢಪಟ್ಟಿವೆ. ಆ ಪ್ರದೇಶದಲ್ಲಿ ವಿಶೇಷ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು. </p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ದಯಾನಂದ ಕರೆನ್ನವರ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಕುಸುಮಾ ಮಾಗಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೇಖರಯ್ಯ ಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಜಿಲ್ಲೆಯಲ್ಲಿ ಐದು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುವ ಅತಿಸಾರ ಭೇದಿ ತಡೆಗೆ ಜೂನ್ 16ರಿಂದ ಜುಲೈ 31ರವರೆಗೆ ಆಂದೋಲನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು. </p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅತಿಸಾರಭೇದಿ ಮತ್ತು ದಡಾರ ಮತ್ತು ರುಬೆಲ್ಲಾ ನಿರ್ಮೂಲನೆ ಕುರಿತು ಜರುಗಿದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹುಟ್ಟಿದ ಮಗುವಿನಿಂದ ಹಿಡಿದು 5 ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುತ್ತಿದ್ದು, ಯಾವುದೇ ಮಕ್ಕಳು ಇದರಿಂದ ಮರಣ ಹೊಂದದಂತೆ ಪರಿಣಾಮಕಾರಿ ಚಿಕಿತ್ಸೆಗೆ ಓಆರ್ಎಸ್ ಮತ್ತು ಝಿಂಕ್ ಮಾತ್ರೆ ವಿತರಣೆ ಮಾಡಬೇಕು ಎಂದು ಸೂಚಿಸಿದರು.</p>.<p>ಜಿಲ್ಲೆಯಲ್ಲಿ ಲಭ್ಯವಿರುವ 83,185 ಓಆರ್ಎಸ್ ಮತ್ತು 6,52,380 ಚಿಂಕ್ ಮಾತ್ರೆಗಳನ್ನು ಆಯಾ ತಾಲ್ಲೂಕಿನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿತರಣೆಗೆ ಕ್ರಮವಹಿಸಬೇಕು. ಕುಡಿಯುವ ನೀರು ಶುದ್ಧವಾಗಿರಬೇಕು. ಆಹಾರ ಸೇವನೆ ಮುಂಚೆ ಕೈ ತೊಳೆದುಕೊಳ್ಳುವುದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.</p>.<p>ಓಆರ್ಎಸ್ ಮತ್ತು ಝಿಂಕ್ ಮಾತ್ರೆಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ದೊರೆಯಲಿವೆ. ಝಿಂಕ್ ಮಾತ್ರೆಗಳನ್ನು 14 ದಿನಗಳವರೆಗೆ ಪ್ರತಿದಿನ 1 ರಂತೆ ನೀಡುವುದರಿಂದ ಶಕ್ತಿ ಹೆಚ್ಚುತ್ತದೆ. ಇದು ಎರಡು ತಿಂಗಳಗಳವರೆಗೆ ಅತಿಸಾರ ಭೇದಿಯಿಂದ ಕಾಪಾಡುತ್ತದೆ ಎಂದು ತಿಳಿಸಿದರು. </p>.<p>ವಿಶ್ವ ಆರೋಗ್ಯ ಸಂಸ್ಥೆಯ ಸರ್ವೇಲೆನ್ಸ್ ಅಧಿಕಾರಿ ಮುಕುಂದ ಗಲಗಲಿ ಮಾತನಾಡಿ, ಎಂ.ಆರ್-1 ಮತ್ತು ಎಂ.ಆರ್-2 ಲಸಿಕಾ ವಂಚಿತ ಮಕ್ಕಳನ್ನು ಹುಡುಕಿ, ಅವರಿಗೆ ದಡಾರ ಮತ್ತು ರುಬೆಲ್ಲಾ ಲಸಿಕೆ ಹಾಕಲಾಗುತ್ತದೆ. ಜ್ವರ ಮತ್ತು ಗಂಧೆ ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ ನಾಲ್ಕು ಪ್ರಕರಣಗಳು ದೃಢಪಟ್ಟಿವೆ. ಆ ಪ್ರದೇಶದಲ್ಲಿ ವಿಶೇಷ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು. </p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ದಯಾನಂದ ಕರೆನ್ನವರ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಕುಸುಮಾ ಮಾಗಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೇಖರಯ್ಯ ಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>