<p><strong>ಬಾಗಲಕೋಟೆ</strong>: ಸಾಮಾಜಿಕ, ಶೈಕ್ಷಣಿಕ ಗಣತಿ ಆರಂಭಗೊಳ್ಳಲಿದ್ದು, ಧರ್ಮ ಕಾಲಂನಲ್ಲಿ ಹಿಂದೂ ಜಾತಿ ಕಮ್ಮಾರ, ಉಪಜಾತಿ ಕಂಬಾರ ಎಂದು ಬರೆಯಿಸಬೇಕು ಎಂದು ಜಿಲ್ಲಾ ಕಮ್ಮಾರ ಕ್ಷೇಮಾಭಿವೃದ್ಧಿ ಸಂಘದ ಮುಖಂಡ ಬಸವರಾಜ ಕಮ್ಮಾರ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣತಿಗೆ ಅಧಿಕಾರಿಗಳು ಬಂದಾಗ ಗೊಂದಲಕ್ಕೆ ಒಳಗಾಗದೇ ಸಂಘದ ನಿರ್ಧಾರ ಪ್ರಕಾರ ಸಮರ್ಪಕ ಮಾಹಿತಿ ನೀಡಬೇಕು ಎಂದರು.</p>.<p>ಜಾತಿ ಕಾಲಂನಲ್ಲಿ ಕಡ್ಡಾಯವಾಗಿ ಕಮ್ಮಾರ ಎಂದು ನಮೂದಿಸಬೇಕು. ಹೆಚ್ಚಿನ ಮಾಹಿತಿಗೆ ಆಯಾ ತಾಲ್ಲೂಕಿನ ಅಧ್ಯಕ್ಷರನ್ನು ಸಂಪರ್ಕಿಸಬಹುದು ಎಂದು ಹೇಳಿದರು.</p>.<p>ಕಮ್ಮಾರ ಸಮುದಾಯವು ಅತ್ಯಂತ ಹಿಂದುಳಿದ ಸಮಾಜವಾಗಿದೆ. ನಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಸರ್ಕಾರದ ಸೌಲಭ್ಯಗಳು ಸರಿಯಾಗಿ ಸಮುದಾಯದ ಜನರಿಗಾಗಿ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಯಲ್ಲಪ್ಪ ಕಮ್ಮಾರ, ಬಸವರಾಜ, ಗೂಳಪ್ಪ ಕಮ್ಮಾರ, ಜ್ಯೋತಿಬಾ ಕಮ್ಮಾರ, ರಮೇಶ ಕಮ್ಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಸಾಮಾಜಿಕ, ಶೈಕ್ಷಣಿಕ ಗಣತಿ ಆರಂಭಗೊಳ್ಳಲಿದ್ದು, ಧರ್ಮ ಕಾಲಂನಲ್ಲಿ ಹಿಂದೂ ಜಾತಿ ಕಮ್ಮಾರ, ಉಪಜಾತಿ ಕಂಬಾರ ಎಂದು ಬರೆಯಿಸಬೇಕು ಎಂದು ಜಿಲ್ಲಾ ಕಮ್ಮಾರ ಕ್ಷೇಮಾಭಿವೃದ್ಧಿ ಸಂಘದ ಮುಖಂಡ ಬಸವರಾಜ ಕಮ್ಮಾರ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣತಿಗೆ ಅಧಿಕಾರಿಗಳು ಬಂದಾಗ ಗೊಂದಲಕ್ಕೆ ಒಳಗಾಗದೇ ಸಂಘದ ನಿರ್ಧಾರ ಪ್ರಕಾರ ಸಮರ್ಪಕ ಮಾಹಿತಿ ನೀಡಬೇಕು ಎಂದರು.</p>.<p>ಜಾತಿ ಕಾಲಂನಲ್ಲಿ ಕಡ್ಡಾಯವಾಗಿ ಕಮ್ಮಾರ ಎಂದು ನಮೂದಿಸಬೇಕು. ಹೆಚ್ಚಿನ ಮಾಹಿತಿಗೆ ಆಯಾ ತಾಲ್ಲೂಕಿನ ಅಧ್ಯಕ್ಷರನ್ನು ಸಂಪರ್ಕಿಸಬಹುದು ಎಂದು ಹೇಳಿದರು.</p>.<p>ಕಮ್ಮಾರ ಸಮುದಾಯವು ಅತ್ಯಂತ ಹಿಂದುಳಿದ ಸಮಾಜವಾಗಿದೆ. ನಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಸರ್ಕಾರದ ಸೌಲಭ್ಯಗಳು ಸರಿಯಾಗಿ ಸಮುದಾಯದ ಜನರಿಗಾಗಿ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಯಲ್ಲಪ್ಪ ಕಮ್ಮಾರ, ಬಸವರಾಜ, ಗೂಳಪ್ಪ ಕಮ್ಮಾರ, ಜ್ಯೋತಿಬಾ ಕಮ್ಮಾರ, ರಮೇಶ ಕಮ್ಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>