<p>ಪ<strong>ಟ್ಟದಕಲ್ಲು (ಬಾದಾಮಿ) :</strong> ‘ ಚಾಲುಕ್ಯರು ಇನ್ನೂರ ಐವತ್ತು ವರ್ಷಗಳ ಕಾಲ ಆಳ್ವಿಕೆಯಿಂದ ವೈಭವದ ಸಾಮ್ರಾಜ್ಯವನ್ನು ಕಟ್ಟಿದರು. ಚಾಲುಕ್ಯರು ನಿರ್ಮಿಸಿದ ಸ್ಮಾರಕಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಣೆ ಮಾಡಬೇಕು. ವಿದ್ಯಾರ್ಥಿಗಳು ಚಾಲುಕ್ಯರ ಇತಿಹಾಸ ಪರಂಪರೆಯ ಅಧ್ಯಯನ ಮಾಡಬೇಕು ’ ಎಂದು ನಿವೃತ್ತ ಪ್ರಾಚಾರ್ಯ ರವೀಂದ್ರ ಮೂಲಿಮನಿ ಹೇಳಿದರು.</p>.<p>ವಿಶ್ವ ಪರಂಪರೆ ತಾಣವಾದ ಪಟ್ಟದಕಲ್ಲಿನ ಸ್ಮಾರಕಗಳ ಎದುರಿಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಧಾರವಾಡ ವಲಯದಿಂದ ಬುಧವಾರ ಹಮ್ಮಿಕೊಂಡ ವಿಶ್ವ ಪರಂಪರಾ ಸಪ್ತಾಹ ಸಮಾರಂಭಕ್ಕೆ ಅವರು ಚಾಲನೆ ನೀಡಿದರು.</p>.<p>‘ಬಾದಾಮಿ, ಪಟ್ಟದಕಲ್ಲು, ಐಹೊಳೆ, ಮಹಾಕೂಟ, ನಾಗನಾಥಕೊಳ್ಳ, ಹುಲಿಗೆಮ್ಮನಕೊಳ್ಳದಲ್ಲಿ ಚಾಲುಕ್ಯರ ಶಿಲ್ಪ ಕಲಾವಿದರು ವೈವಿಧ್ಯಮಯ ಸ್ಮಾರಕಗಳನ್ನು ನಿರ್ಮಿಸಿ ವಿಶ್ವಕ್ಕೆ ಶಿಲ್ಪಕಲೆಯ ಶ್ರೀಮಂತಿಕೆಯನ್ನು ಕೊಟ್ಟಿದ್ದಾರೆ. ಸ್ಮಾರಕಗಳನ್ನು ವೀಕ್ಷಿಸಬೇಕು’ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.</p>.<p>ಧಾರವಾಡ ವಲಯದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಉಪ ಅಧೀಕ್ಷಕ ಶ್ರೀಗುರು ಬಾಗಿ, ಸಹಾಯಕ ಅಧೀಕ್ಷಕ ಪ್ರಸನ್ನ, ಸಹಾಯಕ ಸಂರಕ್ಷಣಾ ಅಧಿಕಾರಿಗಳಾದ ಪ್ರಶಾಂತ ಕುಲಕರ್ಣಿ, ರಾಜಾರಾಮನ್ ಗ್ರಾಮ ಪಂಚಾಯ್ತಿ ಸದಸ್ಯ ಶ್ರೀಶೈಲ ತೋಟಗೇರ ಇದ್ದರು.</p>.<p>ಸಪ್ತಾಹದ ಅಂಗವಾಗಿ ವಿದ್ಯಾರ್ಥಿನಿಯರಿಗೆ ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ<strong>ಟ್ಟದಕಲ್ಲು (ಬಾದಾಮಿ) :</strong> ‘ ಚಾಲುಕ್ಯರು ಇನ್ನೂರ ಐವತ್ತು ವರ್ಷಗಳ ಕಾಲ ಆಳ್ವಿಕೆಯಿಂದ ವೈಭವದ ಸಾಮ್ರಾಜ್ಯವನ್ನು ಕಟ್ಟಿದರು. ಚಾಲುಕ್ಯರು ನಿರ್ಮಿಸಿದ ಸ್ಮಾರಕಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಣೆ ಮಾಡಬೇಕು. ವಿದ್ಯಾರ್ಥಿಗಳು ಚಾಲುಕ್ಯರ ಇತಿಹಾಸ ಪರಂಪರೆಯ ಅಧ್ಯಯನ ಮಾಡಬೇಕು ’ ಎಂದು ನಿವೃತ್ತ ಪ್ರಾಚಾರ್ಯ ರವೀಂದ್ರ ಮೂಲಿಮನಿ ಹೇಳಿದರು.</p>.<p>ವಿಶ್ವ ಪರಂಪರೆ ತಾಣವಾದ ಪಟ್ಟದಕಲ್ಲಿನ ಸ್ಮಾರಕಗಳ ಎದುರಿಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಧಾರವಾಡ ವಲಯದಿಂದ ಬುಧವಾರ ಹಮ್ಮಿಕೊಂಡ ವಿಶ್ವ ಪರಂಪರಾ ಸಪ್ತಾಹ ಸಮಾರಂಭಕ್ಕೆ ಅವರು ಚಾಲನೆ ನೀಡಿದರು.</p>.<p>‘ಬಾದಾಮಿ, ಪಟ್ಟದಕಲ್ಲು, ಐಹೊಳೆ, ಮಹಾಕೂಟ, ನಾಗನಾಥಕೊಳ್ಳ, ಹುಲಿಗೆಮ್ಮನಕೊಳ್ಳದಲ್ಲಿ ಚಾಲುಕ್ಯರ ಶಿಲ್ಪ ಕಲಾವಿದರು ವೈವಿಧ್ಯಮಯ ಸ್ಮಾರಕಗಳನ್ನು ನಿರ್ಮಿಸಿ ವಿಶ್ವಕ್ಕೆ ಶಿಲ್ಪಕಲೆಯ ಶ್ರೀಮಂತಿಕೆಯನ್ನು ಕೊಟ್ಟಿದ್ದಾರೆ. ಸ್ಮಾರಕಗಳನ್ನು ವೀಕ್ಷಿಸಬೇಕು’ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.</p>.<p>ಧಾರವಾಡ ವಲಯದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಉಪ ಅಧೀಕ್ಷಕ ಶ್ರೀಗುರು ಬಾಗಿ, ಸಹಾಯಕ ಅಧೀಕ್ಷಕ ಪ್ರಸನ್ನ, ಸಹಾಯಕ ಸಂರಕ್ಷಣಾ ಅಧಿಕಾರಿಗಳಾದ ಪ್ರಶಾಂತ ಕುಲಕರ್ಣಿ, ರಾಜಾರಾಮನ್ ಗ್ರಾಮ ಪಂಚಾಯ್ತಿ ಸದಸ್ಯ ಶ್ರೀಶೈಲ ತೋಟಗೇರ ಇದ್ದರು.</p>.<p>ಸಪ್ತಾಹದ ಅಂಗವಾಗಿ ವಿದ್ಯಾರ್ಥಿನಿಯರಿಗೆ ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>