<p><strong>ಬಾದಾಮಿ:</strong> ‘ ಚಾಲುಕ್ಯ ಉತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವರು. ಉತ್ಸವವು ಯಶಸ್ವಿಯಾಗಲು ಜಿಲ್ಲೆ ಮತ್ತು ತಾಲ್ಲೂಕಿನ ಅಧಿಕಾರಿಗಳು ಸರಿಯಾಗಿ ಕಾರ್ಯವನ್ನು ನಿರ್ವಹಿಸಬೇಕು ’ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.</p>.<p>ಇಲ್ಲಿನ ಖಾಸಗಿ ಹೋಟೆಲಿನಲ್ಲಿ ಶನಿವಾರ ಚಾಲುಕ್ಯ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಡಿ 19, 20 ಮತ್ತು 21 ರಂದು ನಡೆಯುವ ಚಾಲುಕ್ಯ ಉತ್ಸವದ ವಿವಿಧ ಸಮಿತಿಗಳ ಪದಾಧಿಕಾರಿಗಳು ಜವಾಬ್ದಾರಿಯಿಂದ ಕೆಲಸವನ್ನು ಮಾಡಬೇಕು ಎಂದರು.</p>.<p>‘ವಿಶ್ವದಲ್ಲಿಯೇ ಚಾಲುಕ್ಯರ ಸ್ಮಾರಕಗಳು ಮಹತ್ವವನ್ನು ಪಡೆದಿವೆ. ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕಿದೆ. ಚಾಲುಕ್ಯರ ಇತಿಹಾಸ, ಸಂಸ್ಕೃತಿ, ಪರಂಪರೆ ವೈಭವ ಮತ್ತು ದೊರೆಗಳ ಶೌರ್ಯ ಸಾಹಸದ ಬಗ್ಗೆ ಮಾಧ್ಯಮಲ್ಲಿ ಹೆಚ್ಚು ಪ್ರಸಾರ ಮಾಡಿ ’ ಎಂದು ಮಾಧ್ಯಮದವರಿಗೆ ಹೇಳಿದರು.</p>.<p>ಚಾಲುಕ್ಯರ ಲಾಂಛನ, ಆಮಂತ್ರಣ ಪತ್ರಿಕೆ, ಅತಿಥಿಗಳ ಆಹ್ವಾನ, ಕಲಾವಿದರ ಆಯ್ಕೆ, ವೇದಿಕೆ ತಯಾರಿ, ವಸತಿ, ಕುಡಿಯುವ ನೀರು, ಸ್ವಚ್ಛತೆ, ಸಾರಿಗೆ ಸೌಲಭ್ಯ, ಮೆರವಣಿಗೆ, ಆರೋಗ್ಯ, ಕ್ರೀಡೆ, ಗೋಷ್ಠಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.</p>.<p>‘ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಸಭೆ ಸೇರಿ ವಿವಿಧ ಸಮಿತಿಗಳ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಉತ್ಸವವನ್ನು ಯಶಸ್ವಿಗೊಳಿಸಿ ಎಂದು ಹೇಳಿದರು.</p>.<p>‘ ಉತ್ಸವಕ್ಕೆ ಸರ್ಕಾರದಿಂದ ಅನುದಾನ ತರುವೆ. ಸಾರ್ವಜನಿಕರಿಂದ ಸ್ಥಳೀಯವಾಗಿ ಹಣ ಸಂಗ್ರಹಿಸಿ ಯಾರಿಗೂ ಒತ್ತಾಯ ಮಾಡಬೇಡಿ ’ ಎಂದು ಸಚಿವರು ಹೇಳಿದರು.</p>.<p>ಸಭೆಯಲ್ಲಿ ಅಧಿಕಾರಿಯೊಬ್ಬರು ಮೊಬೈಲ್ ವೀಕ್ಷಿಸುತ್ತಿರುವುದನ್ನು ನೋಡಿದ ಸಚಿವರು ‘ ಸಭೆ ಎಂದರೆ ಏನು ಹುಡುಗಾಟ ಮಾಡಿದ್ದೀರಿ ಸಭೆಯಲ್ಲಿ ಚರ್ಚೆ ನಡೆದಿದೆ ನೀವು ಮೊಬೈಲ್ ನೋಡುತ್ತಿದ್ದೀರಿ ಹೊರಗೆ ಎದ್ದು ಹೋಗಿ ’ ಎಂದು ತರಾಟೆಗೆ ತೆಗೆದುಕೊಂಡರು.</p>.<p>‘ಹಿಂದೆ ನಡೆದ ಚಾಲುಕ್ಯ ಉತ್ಸವಕ್ಕೆ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಕಲಾವಿದರು ಆಗಮಿಸಿದ್ದರು. ಬರ, ಮತ್ತು ನೆರೆ ಪ್ರವಾಹದಿಂದ ದಶಗಳಿಂದ ಸ್ಥಗಿತವಾಗಿತ್ತು. ಚಾಲುಕ್ಯ ಉತ್ಸವ ಯಶಸ್ವಿಯಾಗಿ ನಡೆಯಲಿ ’ ಎಂದು ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯಮಠ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಭೀಮಸೇನ ಚಿಮ್ಮನಕಟ್ಟಿ ಚಾಲುಕ್ಯ ಉತ್ಸವದ ರೂಪರೇಷೆ ಕುರಿತು ಮಾಹಿತಿ ನೀಡಿದರು.</p>.<p>‘ ಡಿ. 19 ಬಾದಾಮಿ, 20 ಪಟ್ಟದಕಲ್ಲು, 21 ರಂದು ಐಹೊಳೆಯಲ್ಲಿ ಚಾಲುಕ್ಯ ಉತ್ಸವ ನಡೆಯಲಿದೆ. ಎಲ್ಲ ಸಮಿತಿಗಳು ಕಾರ್ಯವನ್ನು ನಿರ್ವಹಿಸುತ್ತಿವೆ ’ ಎಂದು ಬಾಗಲಕೋಟೆ ಉಪವಿಭಾಗ ಅಧಿಕಾರಿ ಸಂತೋಷ ಜಗಲಾಸರ ಸಮಿತಿಗಳ ವಿವರಣೆ ನೀಡಿದರು.</p>.<p>ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ, ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ತಹಶೀಲ್ದಾರ್ ಕಾವ್ಯಶ್ರೀ ಎಚ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.</p>.<p>ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ:</strong> ‘ ಚಾಲುಕ್ಯ ಉತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವರು. ಉತ್ಸವವು ಯಶಸ್ವಿಯಾಗಲು ಜಿಲ್ಲೆ ಮತ್ತು ತಾಲ್ಲೂಕಿನ ಅಧಿಕಾರಿಗಳು ಸರಿಯಾಗಿ ಕಾರ್ಯವನ್ನು ನಿರ್ವಹಿಸಬೇಕು ’ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.</p>.<p>ಇಲ್ಲಿನ ಖಾಸಗಿ ಹೋಟೆಲಿನಲ್ಲಿ ಶನಿವಾರ ಚಾಲುಕ್ಯ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಡಿ 19, 20 ಮತ್ತು 21 ರಂದು ನಡೆಯುವ ಚಾಲುಕ್ಯ ಉತ್ಸವದ ವಿವಿಧ ಸಮಿತಿಗಳ ಪದಾಧಿಕಾರಿಗಳು ಜವಾಬ್ದಾರಿಯಿಂದ ಕೆಲಸವನ್ನು ಮಾಡಬೇಕು ಎಂದರು.</p>.<p>‘ವಿಶ್ವದಲ್ಲಿಯೇ ಚಾಲುಕ್ಯರ ಸ್ಮಾರಕಗಳು ಮಹತ್ವವನ್ನು ಪಡೆದಿವೆ. ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕಿದೆ. ಚಾಲುಕ್ಯರ ಇತಿಹಾಸ, ಸಂಸ್ಕೃತಿ, ಪರಂಪರೆ ವೈಭವ ಮತ್ತು ದೊರೆಗಳ ಶೌರ್ಯ ಸಾಹಸದ ಬಗ್ಗೆ ಮಾಧ್ಯಮಲ್ಲಿ ಹೆಚ್ಚು ಪ್ರಸಾರ ಮಾಡಿ ’ ಎಂದು ಮಾಧ್ಯಮದವರಿಗೆ ಹೇಳಿದರು.</p>.<p>ಚಾಲುಕ್ಯರ ಲಾಂಛನ, ಆಮಂತ್ರಣ ಪತ್ರಿಕೆ, ಅತಿಥಿಗಳ ಆಹ್ವಾನ, ಕಲಾವಿದರ ಆಯ್ಕೆ, ವೇದಿಕೆ ತಯಾರಿ, ವಸತಿ, ಕುಡಿಯುವ ನೀರು, ಸ್ವಚ್ಛತೆ, ಸಾರಿಗೆ ಸೌಲಭ್ಯ, ಮೆರವಣಿಗೆ, ಆರೋಗ್ಯ, ಕ್ರೀಡೆ, ಗೋಷ್ಠಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.</p>.<p>‘ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಸಭೆ ಸೇರಿ ವಿವಿಧ ಸಮಿತಿಗಳ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಉತ್ಸವವನ್ನು ಯಶಸ್ವಿಗೊಳಿಸಿ ಎಂದು ಹೇಳಿದರು.</p>.<p>‘ ಉತ್ಸವಕ್ಕೆ ಸರ್ಕಾರದಿಂದ ಅನುದಾನ ತರುವೆ. ಸಾರ್ವಜನಿಕರಿಂದ ಸ್ಥಳೀಯವಾಗಿ ಹಣ ಸಂಗ್ರಹಿಸಿ ಯಾರಿಗೂ ಒತ್ತಾಯ ಮಾಡಬೇಡಿ ’ ಎಂದು ಸಚಿವರು ಹೇಳಿದರು.</p>.<p>ಸಭೆಯಲ್ಲಿ ಅಧಿಕಾರಿಯೊಬ್ಬರು ಮೊಬೈಲ್ ವೀಕ್ಷಿಸುತ್ತಿರುವುದನ್ನು ನೋಡಿದ ಸಚಿವರು ‘ ಸಭೆ ಎಂದರೆ ಏನು ಹುಡುಗಾಟ ಮಾಡಿದ್ದೀರಿ ಸಭೆಯಲ್ಲಿ ಚರ್ಚೆ ನಡೆದಿದೆ ನೀವು ಮೊಬೈಲ್ ನೋಡುತ್ತಿದ್ದೀರಿ ಹೊರಗೆ ಎದ್ದು ಹೋಗಿ ’ ಎಂದು ತರಾಟೆಗೆ ತೆಗೆದುಕೊಂಡರು.</p>.<p>‘ಹಿಂದೆ ನಡೆದ ಚಾಲುಕ್ಯ ಉತ್ಸವಕ್ಕೆ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಕಲಾವಿದರು ಆಗಮಿಸಿದ್ದರು. ಬರ, ಮತ್ತು ನೆರೆ ಪ್ರವಾಹದಿಂದ ದಶಗಳಿಂದ ಸ್ಥಗಿತವಾಗಿತ್ತು. ಚಾಲುಕ್ಯ ಉತ್ಸವ ಯಶಸ್ವಿಯಾಗಿ ನಡೆಯಲಿ ’ ಎಂದು ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯಮಠ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಭೀಮಸೇನ ಚಿಮ್ಮನಕಟ್ಟಿ ಚಾಲುಕ್ಯ ಉತ್ಸವದ ರೂಪರೇಷೆ ಕುರಿತು ಮಾಹಿತಿ ನೀಡಿದರು.</p>.<p>‘ ಡಿ. 19 ಬಾದಾಮಿ, 20 ಪಟ್ಟದಕಲ್ಲು, 21 ರಂದು ಐಹೊಳೆಯಲ್ಲಿ ಚಾಲುಕ್ಯ ಉತ್ಸವ ನಡೆಯಲಿದೆ. ಎಲ್ಲ ಸಮಿತಿಗಳು ಕಾರ್ಯವನ್ನು ನಿರ್ವಹಿಸುತ್ತಿವೆ ’ ಎಂದು ಬಾಗಲಕೋಟೆ ಉಪವಿಭಾಗ ಅಧಿಕಾರಿ ಸಂತೋಷ ಜಗಲಾಸರ ಸಮಿತಿಗಳ ವಿವರಣೆ ನೀಡಿದರು.</p>.<p>ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ, ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ತಹಶೀಲ್ದಾರ್ ಕಾವ್ಯಶ್ರೀ ಎಚ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.</p>.<p>ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>