ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಘವೇಂದ್ರ ನಾಗೂರ ಎಂಬುವವರು ನನ್ನ ಹೆಸರು ಹೇಳಿಕೊಂಡು ಡಿಸಿಸಿ ಬ್ಯಾಂಕ್ನಲ್ಲಿ ನೌಕರಿ ಕೊಡಿಸುವುದಾಗಿ ಹೇಳಿ ಹಣ ಪಡೆದು ಕೆಲವರಿಗೆ ವಂಚಿಸಿದ್ದಾರೆ ಎಂಬ ಆರೋಪ ಮಾಧ್ಯಮಗಳಿಂದ ತಿಳಿದುಬಂದಿದೆ. ರಾಘವೇಂದ್ರನಿಗೂ ನನಗೂ ಸಂಬಂಧವಿಲ್ಲ. ಬಿಜೆಪಿಯಲ್ಲಿ ಅವರಿಗೆ ಯಾವುದೇ ಸ್ಥಾನಮಾನ ನೀಡಿಲ್ಲ. ವಂಚನೆ ವಿಚಾರ ತಿಳಿಯುತ್ತಿದ್ದಂತೆಯೇ ಬಿಜೆಪಿ ಸಕ್ರಿಯ ಕಾರ್ಯಕರ್ತ ಸ್ಥಾನದಿಂದಲೂ ಅವರನ್ನು ಕಿತ್ತು ಹಾಕಲಾಗಿದೆ ಎಂದು ಸ್ಪಷ್ಟಪಡಿಸಿದರು.