ಬಾಗಲಕೋಟೆ: ಕೊರೋನಾ ವೈರಸ್ ಹರಡುವಿಕೆ ವಿರುದ್ಧದ ಹೋರಾಟಕ್ಕೆ ಕೈಜೋಡಿಸಲು ಇಲ್ಲಿನ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ (ಬಿ.ವಿ.ವಿ ಸಂಘ) ಮುಖ್ಯಮಂತ್ರಿ ಪರಿಹಾರ ನಿಧಿಗೆ ₹2 ಕೋಟಿ ದೇಣಿಗೆ ನೀಡಿದೆ. ಸಂಘದ ಕಾರ್ಯಾಧ್ಯಕ್ಷರೂ ಆದ ಶಾಸಕ ವೀರಣ್ಣ ಚರಂತಿಮಠ ವೈಯಕ್ತಿಕವಾಗಿ ₹5 ಲಕ್ಷ ನೀಡಿದ್ದಾರೆ.
ಶೀಘ್ರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ₹2.05 ಕೋಟಿ ಮೊತ್ತದ ಚೆಕ್ ನೀಡುವುದಾಗಿ ವೀರಣ್ಣ ಚರಂತಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
₹50 ಲಕ್ಷ ದೇಣಿಗೆ: ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿ.ಸಿ.ಸಿ) ಕೂಡ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹50 ಲಕ್ಷ ನೀಡುವುದಾಗಿ ತಿಳಿಸಿದೆ.