ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಪರಿಹಾರ ನಿಧಿ: ಬಿ.ವಿ.ವಿ ಸಂಘದಿಂದ ₹2 ಕೋಟಿ ದೇಣಿಗೆ

Last Updated 27 ಮಾರ್ಚ್ 2020, 14:12 IST
ಅಕ್ಷರ ಗಾತ್ರ

ಬಾಗಲಕೋಟೆ: ಕೊರೋನಾ ವೈರಸ್ ಹರಡುವಿಕೆ ವಿರುದ್ಧದ ಹೋರಾಟಕ್ಕೆ ಕೈಜೋಡಿಸಲು ಇಲ್ಲಿನ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ (ಬಿ.ವಿ.ವಿ ಸಂಘ) ಮುಖ್ಯಮಂತ್ರಿ ಪರಿಹಾರ ನಿಧಿಗೆ ₹2 ಕೋಟಿ ದೇಣಿಗೆ ನೀಡಿದೆ. ಸಂಘದ ಕಾರ್ಯಾಧ್ಯಕ್ಷರೂ ಆದ ಶಾಸಕ ವೀರಣ್ಣ ಚರಂತಿಮಠ ವೈಯಕ್ತಿಕವಾಗಿ ₹5 ಲಕ್ಷ ನೀಡಿದ್ದಾರೆ.

ಶೀಘ್ರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ₹2.05 ಕೋಟಿ ಮೊತ್ತದ ಚೆಕ್ ನೀಡುವುದಾಗಿ ವೀರಣ್ಣ ಚರಂತಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

₹50 ಲಕ್ಷ ದೇಣಿಗೆ: ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿ.ಸಿ.ಸಿ) ಕೂಡ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹50 ಲಕ್ಷ ನೀಡುವುದಾಗಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT