<p><strong>ಬಾದಾಮಿ</strong>: ‘ಶರಣರ ಸಂತರ ಮತ್ತು ಮಹಾತ್ಮರ ಚರಿತ್ರೆಯ ಉಪನ್ಯಾಸ ಕೇಳಿ ಮಹಿಳೆಯರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಶಿಕ್ಷಣವನ್ನು ಕೊಡಿ’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.</p>.<p>ಬೀರಲಿಂಗೇಶ್ವರ ದೇವಸ್ಥಾನ ಮತ್ತು ಕುರುಬರ ಸಮಾಜ ಹಿತವರ್ಧಕ ಸಂಘದಿಂದ ಸೋಮವಾರ ಬೀರಲಿಂಗೇಶ್ವರ ಸಭಾ ಭವನದಲ್ಲಿ ನಡೆದ ‘ ಕನಕ ಪಂಚಮಿ’ ಉಪನ್ಯಾಸ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಜಮಖಂಡಿಯ ಉಪನ್ಯಾಸಕ ಯಶವಂತ ಕೊಕ್ಕನವರ ಅವರು ಕನಕದಾಸರ ಬದುಕು, ಶಿಕ್ಷಣ ಮತ್ತು ಬರಹ ಕುರಿತು ಮಾತನಾಡಿ, ‘ಹುಟ್ಟು-ಸಾವಿನ ನಡುವಿನ ಜೀವನ ಸಾರ್ಥಕವಾಗಲು ಸಂತ ಮಹಾಂತರ ಜೀವನ ಚರಿತ್ರೆಯನ್ನು ಆಲಿಸಬೇಕು. ಅವರ ತತ್ವಗಳನ್ನು ಅರಿತುಕೊಂಡು ವ್ಯಕ್ತಿತ್ವವನ್ನು ರೂಪಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಕನಕದಾಸರ ಚರಿತ್ರೆಯನ್ನು ಎಲ್ಲರೂ ತಿಳಿಯಬೇಕು. ಭೀಮಸೇನ ಚಿಮ್ಮನಕಟ್ಟಿ ಮುಂಬರುವ ದಿನಗಳಲ್ಲಿ ಸಚಿವರಾಗುತ್ತಾರೆ’ ಎಂದು ಶಿರೂರಿನ ಕನಕ ಭ್ರಹ್ಮವಿದ್ಯಾಶ್ರಮದ ಚಿನ್ಮಯಾನಂದ ಸ್ವಾಮೀಜಿ ಭವಿಷ್ಯ ನುಡಿದರು.</p>.<p>‘ನೂತನ ಕನಕ ಭವನ ನಿರ್ಮಾಣಕ್ಕೆ 10 ಗುಂಟೆ ನಿವೇಶನ ಗುರುತಿಸಲಾಗಿದೆ. ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರು ₹10 ಲಕ್ಷ ಮಂಜೂರು ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ನೂತನ ಭವನ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ ’ ಎಂದು ಅಧ್ಯಕ್ಷತೆ ವಹಿಸಿದ್ದ ಬೀರಲಿಂಗೇಶ್ವರ ದೇವಸ್ಥಾನ ಮತ್ತು ಕುರುಬರ ಸಮಾಜ ಹಿತರಕ್ಷಕ ಸಂಘದ ಅಧ್ಯಕ್ಷ ಮಂಜುನಾಥ ಹೊಸಮನಿ ಹೇಳಿದರು.</p>.<p>ವೈದ್ಯರು, ಪ್ರಾಧ್ಯಾಪಕರು, ಮಹಿಳೆಯರು, ಯುವಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಉಜ್ವಲ ಬಸರಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ</strong>: ‘ಶರಣರ ಸಂತರ ಮತ್ತು ಮಹಾತ್ಮರ ಚರಿತ್ರೆಯ ಉಪನ್ಯಾಸ ಕೇಳಿ ಮಹಿಳೆಯರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಶಿಕ್ಷಣವನ್ನು ಕೊಡಿ’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.</p>.<p>ಬೀರಲಿಂಗೇಶ್ವರ ದೇವಸ್ಥಾನ ಮತ್ತು ಕುರುಬರ ಸಮಾಜ ಹಿತವರ್ಧಕ ಸಂಘದಿಂದ ಸೋಮವಾರ ಬೀರಲಿಂಗೇಶ್ವರ ಸಭಾ ಭವನದಲ್ಲಿ ನಡೆದ ‘ ಕನಕ ಪಂಚಮಿ’ ಉಪನ್ಯಾಸ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಜಮಖಂಡಿಯ ಉಪನ್ಯಾಸಕ ಯಶವಂತ ಕೊಕ್ಕನವರ ಅವರು ಕನಕದಾಸರ ಬದುಕು, ಶಿಕ್ಷಣ ಮತ್ತು ಬರಹ ಕುರಿತು ಮಾತನಾಡಿ, ‘ಹುಟ್ಟು-ಸಾವಿನ ನಡುವಿನ ಜೀವನ ಸಾರ್ಥಕವಾಗಲು ಸಂತ ಮಹಾಂತರ ಜೀವನ ಚರಿತ್ರೆಯನ್ನು ಆಲಿಸಬೇಕು. ಅವರ ತತ್ವಗಳನ್ನು ಅರಿತುಕೊಂಡು ವ್ಯಕ್ತಿತ್ವವನ್ನು ರೂಪಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಕನಕದಾಸರ ಚರಿತ್ರೆಯನ್ನು ಎಲ್ಲರೂ ತಿಳಿಯಬೇಕು. ಭೀಮಸೇನ ಚಿಮ್ಮನಕಟ್ಟಿ ಮುಂಬರುವ ದಿನಗಳಲ್ಲಿ ಸಚಿವರಾಗುತ್ತಾರೆ’ ಎಂದು ಶಿರೂರಿನ ಕನಕ ಭ್ರಹ್ಮವಿದ್ಯಾಶ್ರಮದ ಚಿನ್ಮಯಾನಂದ ಸ್ವಾಮೀಜಿ ಭವಿಷ್ಯ ನುಡಿದರು.</p>.<p>‘ನೂತನ ಕನಕ ಭವನ ನಿರ್ಮಾಣಕ್ಕೆ 10 ಗುಂಟೆ ನಿವೇಶನ ಗುರುತಿಸಲಾಗಿದೆ. ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರು ₹10 ಲಕ್ಷ ಮಂಜೂರು ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ನೂತನ ಭವನ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ ’ ಎಂದು ಅಧ್ಯಕ್ಷತೆ ವಹಿಸಿದ್ದ ಬೀರಲಿಂಗೇಶ್ವರ ದೇವಸ್ಥಾನ ಮತ್ತು ಕುರುಬರ ಸಮಾಜ ಹಿತರಕ್ಷಕ ಸಂಘದ ಅಧ್ಯಕ್ಷ ಮಂಜುನಾಥ ಹೊಸಮನಿ ಹೇಳಿದರು.</p>.<p>ವೈದ್ಯರು, ಪ್ರಾಧ್ಯಾಪಕರು, ಮಹಿಳೆಯರು, ಯುವಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಉಜ್ವಲ ಬಸರಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>