<p><strong>ಬಾಗಲಕೋಟೆ:</strong> ‘ಸಣ್ಣ ಕೆಲಸಕ್ಕೂ ಸಾರ್ವಜನಿಕರು ಪದೇ ಪದೇ ಅಲೆದಾಡುವುದು ತಪ್ಪಿಸಿ, ಸುಗಮವಾಗಿ ಕೆಲಸ ಮಾಡಿಕೊಡಬೇಕು’ ಎಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಜರುಗಿದ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಜನನ, ಮರಣ ಪ್ರಮಾಣ ಪತ್ರ, ಕಟ್ಟಡ ಪರವಾನಗಿ, ಖಾತೆ ಬದಲಾವಣೆಗೆ ಸಂಬಂಧಿಸಿದ ಕೆಲಸಗಳಿಗೆ ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಬೇಕು. ನಿಗದಿತ ಅವಧಿಯಲ್ಲಿ ಅವರ ಕೆಲಸಗಳು ಆಗಬೇಕು. ಯಾವುದೇ ರೀತಿಯ ಕಿರುಕುಳ, ಒತ್ತಡ ಹೇರುವಂತಿಲ್ಲ’ ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.</p>.<p>‘ಕೆಲಸಗಳಿಗಾಗಿ ಕಚೇರಿಗೆ ಬಂದ ಸಾರ್ವಜನಿಕರ ಮೇಲೆ ವಿನಾಕಾರಣ ಒತ್ತಡ ಹೇರುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅದು ಸರಿಯಲ್ಲ. ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ವಿನಿಯೋಗವಾಗಬೇಕು. ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳ್ಳಬೇಕು. ಸರ್ಕಾರಕ್ಕೆ ಅನುದಾನ ವಾಪಸ್ ಹೋಗದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ನಗರಸಭೆ ಆಯುಕ್ತ ಮುನಿಸ್ವಾಮಪ್ಪ ಮಾತನಾಡಿ, ನಗರಸಭೆಯಲ್ಲಿ ವಿವಿಧ ಯೋಜನೆಗಳ ಅಡಿ ಬಿಡುಗಡೆಯಾದ ಅನುದಾನದ ವಿವರಗಳನ್ನು ಸಭೆಗೆ ತಿಳಿಸಿದರು. ಪ್ರಸಕ್ತ ಸಾಲಿನಲ್ಲಿ ₹1.79 ಕೋಟಿ ಕರ ವಸೂಲಾತಿ ಬೇಡಿಕೆ ಇದ್ದು, ಈ ಪೈಕಿ ಒಟ್ಟು ₹40.82 ಲಕ್ಷ ವಸೂಲಿ ಆಗಿರುತ್ತದೆ ಎಂದು ತಿಳಿಸಿದರು.</p>.<p>ಸಭೆಯಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಯಶವಂತ ಗುರಿಕಾರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ಸಣ್ಣ ಕೆಲಸಕ್ಕೂ ಸಾರ್ವಜನಿಕರು ಪದೇ ಪದೇ ಅಲೆದಾಡುವುದು ತಪ್ಪಿಸಿ, ಸುಗಮವಾಗಿ ಕೆಲಸ ಮಾಡಿಕೊಡಬೇಕು’ ಎಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಜರುಗಿದ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಜನನ, ಮರಣ ಪ್ರಮಾಣ ಪತ್ರ, ಕಟ್ಟಡ ಪರವಾನಗಿ, ಖಾತೆ ಬದಲಾವಣೆಗೆ ಸಂಬಂಧಿಸಿದ ಕೆಲಸಗಳಿಗೆ ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಬೇಕು. ನಿಗದಿತ ಅವಧಿಯಲ್ಲಿ ಅವರ ಕೆಲಸಗಳು ಆಗಬೇಕು. ಯಾವುದೇ ರೀತಿಯ ಕಿರುಕುಳ, ಒತ್ತಡ ಹೇರುವಂತಿಲ್ಲ’ ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.</p>.<p>‘ಕೆಲಸಗಳಿಗಾಗಿ ಕಚೇರಿಗೆ ಬಂದ ಸಾರ್ವಜನಿಕರ ಮೇಲೆ ವಿನಾಕಾರಣ ಒತ್ತಡ ಹೇರುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅದು ಸರಿಯಲ್ಲ. ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ವಿನಿಯೋಗವಾಗಬೇಕು. ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳ್ಳಬೇಕು. ಸರ್ಕಾರಕ್ಕೆ ಅನುದಾನ ವಾಪಸ್ ಹೋಗದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ನಗರಸಭೆ ಆಯುಕ್ತ ಮುನಿಸ್ವಾಮಪ್ಪ ಮಾತನಾಡಿ, ನಗರಸಭೆಯಲ್ಲಿ ವಿವಿಧ ಯೋಜನೆಗಳ ಅಡಿ ಬಿಡುಗಡೆಯಾದ ಅನುದಾನದ ವಿವರಗಳನ್ನು ಸಭೆಗೆ ತಿಳಿಸಿದರು. ಪ್ರಸಕ್ತ ಸಾಲಿನಲ್ಲಿ ₹1.79 ಕೋಟಿ ಕರ ವಸೂಲಾತಿ ಬೇಡಿಕೆ ಇದ್ದು, ಈ ಪೈಕಿ ಒಟ್ಟು ₹40.82 ಲಕ್ಷ ವಸೂಲಿ ಆಗಿರುತ್ತದೆ ಎಂದು ತಿಳಿಸಿದರು.</p>.<p>ಸಭೆಯಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಯಶವಂತ ಗುರಿಕಾರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>