<p><strong>ಮಹಾಲಿಂಗಪುರ:</strong> ‘ಶುಚಿತ್ವಕ್ಕೆ ಆದ್ಯತೆ ಕೊಡದೇ ಉದಾಸೀನ ಪ್ರವೃತ್ತಿ ಬೆಳೆಸಿಕೊಳ್ಳುವುದರಿಂದ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಉದ್ಯಾನದ ಶುಚಿತ್ವಕ್ಕೆ ಹೆಚ್ಚು ಮಹತ್ವ ನೀಡಿ ಆರೋಗ್ಯವಂತ ನಾಡು ನಿರ್ಮಾಣಕ್ಕೆ ಸಹಕರಿಸಬೇಕು’ ಎಂದು ಪುರಸಭೆ ಸಮುದಾಯ ಸಂಘಟನಾಧಿಕಾರಿ ಸಿ.ಎಸ್. ಮಠಪತಿ ಹೇಳಿದರು.</p>.<p>ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆಯ ಅಮೃತ ಮಿತ್ರ ಕಾರ್ಯಕ್ರಮದಡಿ ಪಟ್ಟಣದ ಪುರಸಭೆ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಪರಿಕರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪಟ್ಟಣದ ರಬಕವಿ ರಸ್ತೆ ಹಾಗೂ ಮಹಾಂತೇಶ ನಗರದಲ್ಲಿನ ತಲಾ ಎರಡು ಉದ್ಯಾನಗಳ ನಿರ್ವಹಣೆಗೆ ನಾಲ್ಕು ಮಹಿಳಾ ಸ್ವ-ಸಹಾಯ ಸಂಘಗಳನ್ನು ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಉದ್ಯಾನಗಳ ನಿರ್ವಹಣೆಗೆ ಪರಿಕರ ವಿತರಿಸಿ ಶುಚಿತ್ವಕ್ಕೆ ಆದ್ಯತೆ ನೀಡಲಾಗುತ್ತಿದೆ’ ಎಂದರು.</p>.<p>ದುರ್ಗಾದೇವಿ, ಮಹಾಲಕ್ಷ್ಮಿ, ಹುಲಿಗೆಮ್ಮ ಹಾಗೂ ಸಮೃದ್ಧಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಪರಿಕರಗಳನ್ನು ವಿತರಿಸಲಾಯಿತು. ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ, ಮುಖ್ಯಾಧಿಕಾರಿ ಎನ್.ಎ.ಲಮಾಣಿ, ಸದಸ್ಯ ಶೇಖರ ಅಂಗಡಿ, ಸುನೀಲಗೌಡ ಪಾಟೀಲ, ಎಸ್.ಎನ್.ಪಾಟೀಲ, ಎಂ.ಎಂ.ಮುಗಳಖೋಡ, ಮನೋಜ ಹಂಚಾಟೆ, ಪ್ರೀತಿ ಹುಲಕುಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ:</strong> ‘ಶುಚಿತ್ವಕ್ಕೆ ಆದ್ಯತೆ ಕೊಡದೇ ಉದಾಸೀನ ಪ್ರವೃತ್ತಿ ಬೆಳೆಸಿಕೊಳ್ಳುವುದರಿಂದ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಉದ್ಯಾನದ ಶುಚಿತ್ವಕ್ಕೆ ಹೆಚ್ಚು ಮಹತ್ವ ನೀಡಿ ಆರೋಗ್ಯವಂತ ನಾಡು ನಿರ್ಮಾಣಕ್ಕೆ ಸಹಕರಿಸಬೇಕು’ ಎಂದು ಪುರಸಭೆ ಸಮುದಾಯ ಸಂಘಟನಾಧಿಕಾರಿ ಸಿ.ಎಸ್. ಮಠಪತಿ ಹೇಳಿದರು.</p>.<p>ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆಯ ಅಮೃತ ಮಿತ್ರ ಕಾರ್ಯಕ್ರಮದಡಿ ಪಟ್ಟಣದ ಪುರಸಭೆ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಪರಿಕರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪಟ್ಟಣದ ರಬಕವಿ ರಸ್ತೆ ಹಾಗೂ ಮಹಾಂತೇಶ ನಗರದಲ್ಲಿನ ತಲಾ ಎರಡು ಉದ್ಯಾನಗಳ ನಿರ್ವಹಣೆಗೆ ನಾಲ್ಕು ಮಹಿಳಾ ಸ್ವ-ಸಹಾಯ ಸಂಘಗಳನ್ನು ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಉದ್ಯಾನಗಳ ನಿರ್ವಹಣೆಗೆ ಪರಿಕರ ವಿತರಿಸಿ ಶುಚಿತ್ವಕ್ಕೆ ಆದ್ಯತೆ ನೀಡಲಾಗುತ್ತಿದೆ’ ಎಂದರು.</p>.<p>ದುರ್ಗಾದೇವಿ, ಮಹಾಲಕ್ಷ್ಮಿ, ಹುಲಿಗೆಮ್ಮ ಹಾಗೂ ಸಮೃದ್ಧಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಪರಿಕರಗಳನ್ನು ವಿತರಿಸಲಾಯಿತು. ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ, ಮುಖ್ಯಾಧಿಕಾರಿ ಎನ್.ಎ.ಲಮಾಣಿ, ಸದಸ್ಯ ಶೇಖರ ಅಂಗಡಿ, ಸುನೀಲಗೌಡ ಪಾಟೀಲ, ಎಸ್.ಎನ್.ಪಾಟೀಲ, ಎಂ.ಎಂ.ಮುಗಳಖೋಡ, ಮನೋಜ ಹಂಚಾಟೆ, ಪ್ರೀತಿ ಹುಲಕುಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>