ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಬದಲಾವಣೆ ಚರ್ಚೆ ನಡೆದಿಲ್ಲ: ಎಂ.ಟಿ.ಬಿ.ನಾಗರಾಜ್

Last Updated 29 ನವೆಂಬರ್ 2020, 8:03 IST
ಅಕ್ಷರ ಗಾತ್ರ

ಬಾಗಲಕೋಟೆ: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಚರ್ಚೆ ಎಲ್ಲೂ ನಡೆದಿಲ್ಲ. ಅವಧಿ ಮುಗಿಯುವವರೆಗೂ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಂ.ಟಿ.ಬಿ.ನಾಗರಾಜ್ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ವಲಸಿಗರು, ಮೂಲ ಎಂಬ ಪ್ರಶ್ನೆ ಇಲ್ಲ. ನಾವೆಲ್ಲ ಬಿಜೆಪಿ ಪಕ್ಷಕ್ಕೆ ಸೇರಿದ್ದೇವೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರಿಗೂ ನಮ್ಮ ಬಗ್ಗೆ ಅಭಿಮಾನ ಜಾಸ್ತಿ. ಹೀಗಾಗಿ ಕೆಲವೊಮ್ಮೆ ಅವರು ಮಾತಾಡುವಾಗ ಶಬ್ದಗಳು ತಪ್ಪಿ ಪ್ರಮಾದ ಆಗಿರುತ್ತೆ. ಆ ಬಗ್ಗೆ ನಮಗೇನು ಬೇಸರ ಇಲ್ಲ ಎಂದರು.

ಬೆಂಗಳೂರಿನಲ್ಲಿ ಶನಿವಾರ ನಾವು ಮಾಡಿದ್ದ ಸಭೆಯಲ್ಲಿ ಏನೂ ವಿಶೇಷ ಇರಲಿಲ್ಲ. ಸರ್ಕಾರದ ವಿಚಾರದ ಪ್ರಸ್ತಾಪ ಅಲ್ಲಿ ನಡೆದಿಲ್ಲ. ನಮ್ಮನ್ನು ಮಂತ್ರಿ ಮಾಡಬೇಕಿತ್ತು. ವಿಳಂಬವಾಗಿದೆ.

ಸಂಪುಟ ವಿಸ್ತರಣೆ ವಿಳಂಬ ಆಗಲಿದೆ ಎಂದು ಸಿ.ಎಂ ಯಡಿಯೂರಪ್ಪ ಅವರೇ ಹೇಳಿದ ಮೇಲೆ ಅದೇನಾಗುತ್ತೋ ಅಂತ ನಾವು ಕಾಯಬೇಕು. ಮಂತ್ರಿ ಮಾಡ್ತೇವೆ, ಮಾಡ್ತೇವೆ ಅಂದಿದ್ದಾರೆ. ಕೆಲವೇ ದಿನಗಳಲ್ಲಿ ಆ ಸಂದರ್ಭ ಒದಗಿಬರಲಿದೆ ಎಂದು ಎಂಟಿಬಿ ನಾಗರಾಜ್ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT