<p><strong>ಬಾಗಲಕೋಟೆ</strong>: ‘ಕಾಂಗ್ರೆಸ್ನವರಿಗೆ ಕೇಸರಿ, ಹಿಂದೂಗಳನ್ನು ಕಂಡರೂ ಆಗಲ್ಲ. ದೇಶದಲ್ಲಿ ರಾಮನ ಸುನಾಮಿ ಎದ್ದಿದ್ದು ನೋಡಲಾಗುತ್ತಿಲ್ಲ. ತುಷ್ಟೀಕರಣಕ್ಕೆ ಕೆರಗೋಡಿನಲ್ಲಿ ಹನುಮನ ಧ್ವಜ ತೆಗೆದಿದ್ದಾರೆ’ ಎಂದು ಶ್ರೀರಾಮ ಸೇನೆ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ ಮುತಾಲಿಕ್ ಆರೋಪಿಸಿದರು.</p>.<p>‘ಯಾರೊಬ್ಬರೂ ಆಕ್ಷೇಪಿಸಿ, ದೂರು ಕೊಡದಿದ್ದರೂ ಧ್ವಜ ತೆಗೆಯಲಾಗಿದೆ. ಕೂಡಲೇ ಅದೇ ಸ್ಥಳದಲ್ಲಿ ಹನುಮನ ಧ್ವಜ ಹಾರಿಸಬೇಕು’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಅಯೋಧ್ಯೆ, ಮಥುರಾ, ಕಾಶಿಯಲ್ಲಿನ ದೇವಸ್ಥಾನಗಳಿದ್ದ ಜಾಗ ನೀಡುವಂತೆ ಕೋರಲಾಗಿತ್ತು. ಹೋರಾಟ ಮಾಡಿ ಅಯೋಧ್ಯೆ ಪಡೆದಿದ್ದೇವೆ. ಮುಂದಿನ ದಿನಗಳಲ್ಲಿ ಮಥುರಾ, ಕಾಶಿಯನ್ನೂ ಪಡೆಯುತ್ತೇವೆ. ಮುಸ್ಲಿಮರನ್ನು ಕಾಂಗ್ರೆಸ್ ಒಪ್ಪಿಸಿದರೆ, ಸೌಹಾರ್ದ ಉಳಿಯುತ್ತದೆ. ಇಲ್ಲದಿದ್ದರೆ, ಮತ್ತೆ ಹೋರಾಟಕ್ಕೆ ಸಿದ್ಧ’ ಎಂದರು.</p>.<p>‘ನಾನು ರಾಜಕೀಯ ಮಾಡಲ್ಲ, ಚುನಾವಣೆಗೂ ನಿಲ್ಲಲ್ಲ. ಆದರೆ, ‘ಮೋದಿ ಗೆಲ್ಲಿಸಿ ಭಾರತ ಉಳಿಸಿ’ ಅಭಿಯಾನ ಆರಂಭಿಸಿದ್ದೇವೆ. ತುಷ್ಟೀಕರಣ, ಗ್ಯಾರಂಟಿಯಿಂದ ದೇಶ ಹಾಳಾಗುತ್ತದೆ ಎಂಬ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಕಾಂಗ್ರೆಸ್ನವರಿಗೆ ಕೇಸರಿ, ಹಿಂದೂಗಳನ್ನು ಕಂಡರೂ ಆಗಲ್ಲ. ದೇಶದಲ್ಲಿ ರಾಮನ ಸುನಾಮಿ ಎದ್ದಿದ್ದು ನೋಡಲಾಗುತ್ತಿಲ್ಲ. ತುಷ್ಟೀಕರಣಕ್ಕೆ ಕೆರಗೋಡಿನಲ್ಲಿ ಹನುಮನ ಧ್ವಜ ತೆಗೆದಿದ್ದಾರೆ’ ಎಂದು ಶ್ರೀರಾಮ ಸೇನೆ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ ಮುತಾಲಿಕ್ ಆರೋಪಿಸಿದರು.</p>.<p>‘ಯಾರೊಬ್ಬರೂ ಆಕ್ಷೇಪಿಸಿ, ದೂರು ಕೊಡದಿದ್ದರೂ ಧ್ವಜ ತೆಗೆಯಲಾಗಿದೆ. ಕೂಡಲೇ ಅದೇ ಸ್ಥಳದಲ್ಲಿ ಹನುಮನ ಧ್ವಜ ಹಾರಿಸಬೇಕು’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಅಯೋಧ್ಯೆ, ಮಥುರಾ, ಕಾಶಿಯಲ್ಲಿನ ದೇವಸ್ಥಾನಗಳಿದ್ದ ಜಾಗ ನೀಡುವಂತೆ ಕೋರಲಾಗಿತ್ತು. ಹೋರಾಟ ಮಾಡಿ ಅಯೋಧ್ಯೆ ಪಡೆದಿದ್ದೇವೆ. ಮುಂದಿನ ದಿನಗಳಲ್ಲಿ ಮಥುರಾ, ಕಾಶಿಯನ್ನೂ ಪಡೆಯುತ್ತೇವೆ. ಮುಸ್ಲಿಮರನ್ನು ಕಾಂಗ್ರೆಸ್ ಒಪ್ಪಿಸಿದರೆ, ಸೌಹಾರ್ದ ಉಳಿಯುತ್ತದೆ. ಇಲ್ಲದಿದ್ದರೆ, ಮತ್ತೆ ಹೋರಾಟಕ್ಕೆ ಸಿದ್ಧ’ ಎಂದರು.</p>.<p>‘ನಾನು ರಾಜಕೀಯ ಮಾಡಲ್ಲ, ಚುನಾವಣೆಗೂ ನಿಲ್ಲಲ್ಲ. ಆದರೆ, ‘ಮೋದಿ ಗೆಲ್ಲಿಸಿ ಭಾರತ ಉಳಿಸಿ’ ಅಭಿಯಾನ ಆರಂಭಿಸಿದ್ದೇವೆ. ತುಷ್ಟೀಕರಣ, ಗ್ಯಾರಂಟಿಯಿಂದ ದೇಶ ಹಾಳಾಗುತ್ತದೆ ಎಂಬ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>