<p><strong>ಬಾಗಲಕೋಟೆ:</strong> ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಲು ಕಾರಣಗಳೇನು ಎಂಬ ಕುರಿತು ಬೆಂಗಳೂರಿನಲ್ಲಿ ಗುರುವಾರ ಸತ್ಯಶೋಧನಾ ಸಮಿತಿ ಮಧುಸೂದನ್ ಮೇಸ್ತ್ರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆ ಜಿಲ್ಲಾ ನಾಯಕರ ಎದೆ ಬಡಿತ ಜೋರಾಗಿಸಿದೆ.</p>.<p>ಐದು ಗ್ಯಾರಂಟಿಗಳನ್ನೂ ನೀಡಿದ ನಂತರವೂ ನಿರೀಕ್ಷಿತ ಫಲಿತಾಂಶ ಬರದಿರುವುದರಿಂದ ಹೈಕಮಾಂಡ್ ಲೋಕಸಭಾ ಚುನಾವಣಾಯಲ್ಲಾದ ಹಿನ್ನಡೆಯನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯಲ್ಲಿ ಸಚಿವರು ಸೇರಿದಂತೆ ಐವರು ಕಾಂಗ್ರೆಸ್ ಶಾಸಕರಿದ್ದರೂ ಏಕೆ ಸೋಲಾಯಿತು ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಹೈಕಮಾಂಡ್ ಮುಂದಾಗಿದೆ.</p>.<p>ಗುರುವಾರ ಹಿರಿಯ ನಾಯಕರು, ಸಚಿವರ, ಶಾಸಕರ, ಜಿಲ್ಲಾ ಘಟಕದ ಅಧ್ಯಕ್ಷರ ಸಭೆ, ಶುಕ್ರವಾರ 2023ರ ವಿಧಾನಸಭಾ ಅಭ್ಯರ್ಥಿಗಳ, ಮುಂಚೂಣಿ ಘಟಕಗಳ ಅಧ್ಯಕ್ಷರ, ನಿಗಮ, ಮಂಡಳಿ ಅಧ್ಯಕ್ಷರೊಂದಿಗೆ ಸಮಿತಿ ನಾಯಕರು ಸಭೆ ನಡೆಸಲಿದ್ದಾರೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆಯಾಗಿತ್ತು. ಉಳಿದ ಶಾಸಕರ ಕ್ಷೇತ್ರಗಳಲ್ಲಿಯೂ ಇದೇ ಪರಿಸ್ಥಿತಿ ಎದುರಾಗಿತ್ತು. ಲೋಕಸಭಾ ಕ್ಷೇತ್ರದ ನರಗುಂದ ಹೊರತುಪಡಿಸಿದರೆ, ಬೇರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮುನ್ನಡೆ ದೊರೆತಿರಲಿಲ್ಲ.</p>.<p>2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವೀಣಾ ಕಾಶಪ್ಪನವರ ಈ ಬಾರಿಯೂ ಆಕಾಂಕ್ಷಿಯಾಗಿದ್ದರು. ಅವರು ಅಭ್ಯರ್ಥಿಯಾಗುವುದಕ್ಕೆ ವಿರೋಧಿಸಿದ್ದ ಜಿಲ್ಲಾ ಶಾಸಕರು, ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ ಅಭ್ಯರ್ಥಿಯಾಗಲು ಸಮ್ಮತಿಸಿದ್ದರು. ಒಮ್ಮತದ ಅಭ್ಯರ್ಥಿ ಕಣಕ್ಕಿಳಿದ ನಂತರವೂ ಏಕೆ ಸೋಲಾಯಿತು ಎಂಬುದರ ಚರ್ಚೆ ನಡೆಯಲಿದೆ.</p>.<p>ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆ ಕಾಂಗ್ರೆಸ್ ಶಾಸಕರು, ವಿಧಾನಸಭಾ ಚುನಾವಣೆಯಂತೆ ಕೆಲಸ ಮಾಡುವುದಿಲ್ಲ ಎಂಬ ಆರೋಪವಿದೆ. ಇದೇ ಕಾರಣಕ್ಕೆ ಪ್ರತಿ ಬಾರಿ ಅಭ್ಯರ್ಥಿ ಬದಲಾವಣೆ ಮಾಡಿದರೂ ಗೆಲ್ಲಲು ಸಾಧ್ಯವಾಗುತ್ತಿಲ್ಲ ಎಂಬುದು ಕಾಂಗ್ರೆಸ್ ಮುಖಂಡರ ಆರೋಪ.</p>.<p>ಪುತ್ರಿಯ ಗೆಲುವಿನ ನಿರೀಕ್ಷೆಯೊಂದಿಗೆ ಬಂದಿದ್ದ ಸಚಿವ ಶಿವಾನಂದ ಪಾಟೀಲ ಅವರಿಗೆ ನಿರಾಸೆಯಾಗಿದೆ. ಅವರು ಹಾಗೂ ಅಭ್ಯರ್ಥಿಯಾಗಿದ್ದ ಅವರ ಪುತ್ರಿ ಸಂಯುಕ್ತಾ ಪಾಟೀಲ ಜಿಲ್ಲಾ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿಲ್ಲವಾದರೂ, ಸಮಿತಿಯ ಮುಂದೆ ಏನು ಹೇಳಲಿದ್ದಾರೆ ಎಂಬ ಕುತೂಹಲ ಕಾಂಗ್ರೆಸ್ ನಾಯಕರಲ್ಲಿದೆ.</p>.<p>ಸಮಿತಿಯ ಮುಂದೆ ಯಾರು, ಯಾರು ಏನು ಹೇಳಲಿದ್ದಾರೆ ಎಂಬುದು ಶಾಸಕರನ್ನು ಚಿಂತೆಗೆ ದೂಡಿದೆ. ಹೈಕಮಾಂಡ್ ರಚಿಸಿರುವ ಸಮಿತಿಯ ಮುಂದೆ ಮುಂಚೂಣಿ ಘಟಕದ ನಾಯಕರನ್ನೇ ಕರೆದಿರುವುದರಿಂದ ಸತ್ಯ ಹೊರಬೀಳುವುದೇ ಕಾದು ನೋಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಲು ಕಾರಣಗಳೇನು ಎಂಬ ಕುರಿತು ಬೆಂಗಳೂರಿನಲ್ಲಿ ಗುರುವಾರ ಸತ್ಯಶೋಧನಾ ಸಮಿತಿ ಮಧುಸೂದನ್ ಮೇಸ್ತ್ರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆ ಜಿಲ್ಲಾ ನಾಯಕರ ಎದೆ ಬಡಿತ ಜೋರಾಗಿಸಿದೆ.</p>.<p>ಐದು ಗ್ಯಾರಂಟಿಗಳನ್ನೂ ನೀಡಿದ ನಂತರವೂ ನಿರೀಕ್ಷಿತ ಫಲಿತಾಂಶ ಬರದಿರುವುದರಿಂದ ಹೈಕಮಾಂಡ್ ಲೋಕಸಭಾ ಚುನಾವಣಾಯಲ್ಲಾದ ಹಿನ್ನಡೆಯನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯಲ್ಲಿ ಸಚಿವರು ಸೇರಿದಂತೆ ಐವರು ಕಾಂಗ್ರೆಸ್ ಶಾಸಕರಿದ್ದರೂ ಏಕೆ ಸೋಲಾಯಿತು ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಹೈಕಮಾಂಡ್ ಮುಂದಾಗಿದೆ.</p>.<p>ಗುರುವಾರ ಹಿರಿಯ ನಾಯಕರು, ಸಚಿವರ, ಶಾಸಕರ, ಜಿಲ್ಲಾ ಘಟಕದ ಅಧ್ಯಕ್ಷರ ಸಭೆ, ಶುಕ್ರವಾರ 2023ರ ವಿಧಾನಸಭಾ ಅಭ್ಯರ್ಥಿಗಳ, ಮುಂಚೂಣಿ ಘಟಕಗಳ ಅಧ್ಯಕ್ಷರ, ನಿಗಮ, ಮಂಡಳಿ ಅಧ್ಯಕ್ಷರೊಂದಿಗೆ ಸಮಿತಿ ನಾಯಕರು ಸಭೆ ನಡೆಸಲಿದ್ದಾರೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆಯಾಗಿತ್ತು. ಉಳಿದ ಶಾಸಕರ ಕ್ಷೇತ್ರಗಳಲ್ಲಿಯೂ ಇದೇ ಪರಿಸ್ಥಿತಿ ಎದುರಾಗಿತ್ತು. ಲೋಕಸಭಾ ಕ್ಷೇತ್ರದ ನರಗುಂದ ಹೊರತುಪಡಿಸಿದರೆ, ಬೇರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮುನ್ನಡೆ ದೊರೆತಿರಲಿಲ್ಲ.</p>.<p>2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವೀಣಾ ಕಾಶಪ್ಪನವರ ಈ ಬಾರಿಯೂ ಆಕಾಂಕ್ಷಿಯಾಗಿದ್ದರು. ಅವರು ಅಭ್ಯರ್ಥಿಯಾಗುವುದಕ್ಕೆ ವಿರೋಧಿಸಿದ್ದ ಜಿಲ್ಲಾ ಶಾಸಕರು, ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ ಅಭ್ಯರ್ಥಿಯಾಗಲು ಸಮ್ಮತಿಸಿದ್ದರು. ಒಮ್ಮತದ ಅಭ್ಯರ್ಥಿ ಕಣಕ್ಕಿಳಿದ ನಂತರವೂ ಏಕೆ ಸೋಲಾಯಿತು ಎಂಬುದರ ಚರ್ಚೆ ನಡೆಯಲಿದೆ.</p>.<p>ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆ ಕಾಂಗ್ರೆಸ್ ಶಾಸಕರು, ವಿಧಾನಸಭಾ ಚುನಾವಣೆಯಂತೆ ಕೆಲಸ ಮಾಡುವುದಿಲ್ಲ ಎಂಬ ಆರೋಪವಿದೆ. ಇದೇ ಕಾರಣಕ್ಕೆ ಪ್ರತಿ ಬಾರಿ ಅಭ್ಯರ್ಥಿ ಬದಲಾವಣೆ ಮಾಡಿದರೂ ಗೆಲ್ಲಲು ಸಾಧ್ಯವಾಗುತ್ತಿಲ್ಲ ಎಂಬುದು ಕಾಂಗ್ರೆಸ್ ಮುಖಂಡರ ಆರೋಪ.</p>.<p>ಪುತ್ರಿಯ ಗೆಲುವಿನ ನಿರೀಕ್ಷೆಯೊಂದಿಗೆ ಬಂದಿದ್ದ ಸಚಿವ ಶಿವಾನಂದ ಪಾಟೀಲ ಅವರಿಗೆ ನಿರಾಸೆಯಾಗಿದೆ. ಅವರು ಹಾಗೂ ಅಭ್ಯರ್ಥಿಯಾಗಿದ್ದ ಅವರ ಪುತ್ರಿ ಸಂಯುಕ್ತಾ ಪಾಟೀಲ ಜಿಲ್ಲಾ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿಲ್ಲವಾದರೂ, ಸಮಿತಿಯ ಮುಂದೆ ಏನು ಹೇಳಲಿದ್ದಾರೆ ಎಂಬ ಕುತೂಹಲ ಕಾಂಗ್ರೆಸ್ ನಾಯಕರಲ್ಲಿದೆ.</p>.<p>ಸಮಿತಿಯ ಮುಂದೆ ಯಾರು, ಯಾರು ಏನು ಹೇಳಲಿದ್ದಾರೆ ಎಂಬುದು ಶಾಸಕರನ್ನು ಚಿಂತೆಗೆ ದೂಡಿದೆ. ಹೈಕಮಾಂಡ್ ರಚಿಸಿರುವ ಸಮಿತಿಯ ಮುಂದೆ ಮುಂಚೂಣಿ ಘಟಕದ ನಾಯಕರನ್ನೇ ಕರೆದಿರುವುದರಿಂದ ಸತ್ಯ ಹೊರಬೀಳುವುದೇ ಕಾದು ನೋಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>