<p>ಮುಧೋಳ: ‘ಕಾಂಗ್ರೆಸ್ ಪಕ್ಷ ನೇತೃತ್ವದ ರಾಜ್ಯ ಸರ್ಕಾರ ಆಡಳಿತಕ್ಕೆ ಬಂದು ಒಂದು ವರ್ಷವಾಗಿದ್ದು, ತಮ್ಮ ಆಡಳಿತದ ಸಾಧನೆಯೇ ಶ್ರೇಷ್ಠವೆಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ನಾಯಕರದ್ದು ಶೂನ್ಯ ಸಾಧನೆಯಾಗಿದೆ’ ಎಂದು ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷ ಸಂಗಣ್ಣ ಕಾತರಕಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ನಿತ್ಯ ಅತ್ಯಾಚಾರ, ಕೊಲೆಗಳು ಹೆಚ್ಚಾಗುತ್ತಿದ್ದು, ಮಹಿಳೆಯರಿಗೆ ರಕ್ಷಣೆಯೇ ಇಲ್ಲದಾಗಿದೆ. ಕಾನೂನು ಸುವವ್ಯಸ್ಥೆ ಸಂಪೂರ್ಣ ಹದಗೆಟ್ಟಿದೆ’ ಎಂದು ಆರೋಪಿಸಿದರು.</p>.<p>‘ತಾಲ್ಲೂಕಿನಲ್ಲಿ ಹಿಂದಿನ ಶಾಸಕರ ಸಾಧನೆಗಳನ್ನು ಈಗಿನ ಶಾಸಕರು ತಾವು ಮಾಡಿರುವುದಾಗಿ ಹೇಳಿಕೊಂಡು ಓಡಾಡುತ್ತಿದ್ದಾರೆ. ನಮ್ಮವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೂ ಮತಕ್ಷೇತ್ರದ ಅಭಿವೃದ್ದಿಗೆ ಬಿಡಿಗಾಸು ತಂದಿಲ್ಲ’ ಎಂದು ಸ್ಥಳೀಯ ಶಾಸಕರ ಕಾರ್ಯವೈಖರಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ನಗರದಲ್ಲಿ ಸ್ವಚ್ಛತೆ, ಕುಡಿಯುವ ನೀರು, ನೈರ್ಮಲೀಕರಣ ಹಾಳಾಗಿದ್ದು, ಮೂಲಸೌಕರ್ಯಗಳು ಮರೀಚಿಕೆಯಾಗಿವೆ. ಕೂಡಲೇ ಸಚಿವರು ಇದರತ್ತ ಗಮನ ಹರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಬಿಜೆಪಿ ಮುಖಂಡ ನಾಗಪ್ಪ ಅಂಬಿ ಮಾತನಾಡಿ, ‘ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಚುಕ್ಕಾಣಿ ಹಿಡಿದ ಮೇಲೆ ಗ್ಯಾಂಗ್ ವಾರ್, ಕೊಲೆಗಳು ಅವ್ಯಾಹತವಾಗಿ ನಡೆಯುತ್ತಿವೆ. ಗೃಹ ಇಲಾಖೆ ನಿದ್ರಾವಸ್ಥೆಯಲ್ಲಿದ್ದು ಅಪರಾಧ ಕೃತ್ಯಗಳನ್ನು ಸಂಪೂರ್ಣವಾಗಿ ತಡೆಯುವಲ್ಲಿ ವಿಫಲವಾಗಿದೆ’ ಎಂದರು.</p>.<p>‘ಅಧಿಕಾರಕ್ಕೆ ಬರುವ ಮುನ್ನ ಜನರಿಗೆ ಗ್ಯಾರಂಟಿ ಯೋಜನೆಯ ಸುಳ್ಳು ಭರವಸೆ ನೀಡಿ, ಇದೀಗ ಪ್ರತಿಯೊಂದರಲ್ಲೂ ಬೆಲೆ ಏರಿಕೆಗೆ ಮಾಡುತ್ತಾ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿದೆ’ ಎಂದು ಟೀಕಿಸಿದರು.</p>.<p>ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಡಾ.ರವಿ ನಂದಗಾವಿ, ಶ್ರೀಶೈಲ ಚಿನ್ನನ್ನವರ, ರುದ್ರಪ್ಪ ಅಡವಿ, ಹನಮಂತ ತುಳಸಿಗೇರಿ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಧೋಳ: ‘ಕಾಂಗ್ರೆಸ್ ಪಕ್ಷ ನೇತೃತ್ವದ ರಾಜ್ಯ ಸರ್ಕಾರ ಆಡಳಿತಕ್ಕೆ ಬಂದು ಒಂದು ವರ್ಷವಾಗಿದ್ದು, ತಮ್ಮ ಆಡಳಿತದ ಸಾಧನೆಯೇ ಶ್ರೇಷ್ಠವೆಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ನಾಯಕರದ್ದು ಶೂನ್ಯ ಸಾಧನೆಯಾಗಿದೆ’ ಎಂದು ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷ ಸಂಗಣ್ಣ ಕಾತರಕಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ನಿತ್ಯ ಅತ್ಯಾಚಾರ, ಕೊಲೆಗಳು ಹೆಚ್ಚಾಗುತ್ತಿದ್ದು, ಮಹಿಳೆಯರಿಗೆ ರಕ್ಷಣೆಯೇ ಇಲ್ಲದಾಗಿದೆ. ಕಾನೂನು ಸುವವ್ಯಸ್ಥೆ ಸಂಪೂರ್ಣ ಹದಗೆಟ್ಟಿದೆ’ ಎಂದು ಆರೋಪಿಸಿದರು.</p>.<p>‘ತಾಲ್ಲೂಕಿನಲ್ಲಿ ಹಿಂದಿನ ಶಾಸಕರ ಸಾಧನೆಗಳನ್ನು ಈಗಿನ ಶಾಸಕರು ತಾವು ಮಾಡಿರುವುದಾಗಿ ಹೇಳಿಕೊಂಡು ಓಡಾಡುತ್ತಿದ್ದಾರೆ. ನಮ್ಮವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೂ ಮತಕ್ಷೇತ್ರದ ಅಭಿವೃದ್ದಿಗೆ ಬಿಡಿಗಾಸು ತಂದಿಲ್ಲ’ ಎಂದು ಸ್ಥಳೀಯ ಶಾಸಕರ ಕಾರ್ಯವೈಖರಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ನಗರದಲ್ಲಿ ಸ್ವಚ್ಛತೆ, ಕುಡಿಯುವ ನೀರು, ನೈರ್ಮಲೀಕರಣ ಹಾಳಾಗಿದ್ದು, ಮೂಲಸೌಕರ್ಯಗಳು ಮರೀಚಿಕೆಯಾಗಿವೆ. ಕೂಡಲೇ ಸಚಿವರು ಇದರತ್ತ ಗಮನ ಹರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಬಿಜೆಪಿ ಮುಖಂಡ ನಾಗಪ್ಪ ಅಂಬಿ ಮಾತನಾಡಿ, ‘ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಚುಕ್ಕಾಣಿ ಹಿಡಿದ ಮೇಲೆ ಗ್ಯಾಂಗ್ ವಾರ್, ಕೊಲೆಗಳು ಅವ್ಯಾಹತವಾಗಿ ನಡೆಯುತ್ತಿವೆ. ಗೃಹ ಇಲಾಖೆ ನಿದ್ರಾವಸ್ಥೆಯಲ್ಲಿದ್ದು ಅಪರಾಧ ಕೃತ್ಯಗಳನ್ನು ಸಂಪೂರ್ಣವಾಗಿ ತಡೆಯುವಲ್ಲಿ ವಿಫಲವಾಗಿದೆ’ ಎಂದರು.</p>.<p>‘ಅಧಿಕಾರಕ್ಕೆ ಬರುವ ಮುನ್ನ ಜನರಿಗೆ ಗ್ಯಾರಂಟಿ ಯೋಜನೆಯ ಸುಳ್ಳು ಭರವಸೆ ನೀಡಿ, ಇದೀಗ ಪ್ರತಿಯೊಂದರಲ್ಲೂ ಬೆಲೆ ಏರಿಕೆಗೆ ಮಾಡುತ್ತಾ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿದೆ’ ಎಂದು ಟೀಕಿಸಿದರು.</p>.<p>ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಡಾ.ರವಿ ನಂದಗಾವಿ, ಶ್ರೀಶೈಲ ಚಿನ್ನನ್ನವರ, ರುದ್ರಪ್ಪ ಅಡವಿ, ಹನಮಂತ ತುಳಸಿಗೇರಿ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>