<p><strong>ಬಾಗಲಕೋಟೆ</strong>: ಸರ್ಕಾರ ಸತ್ತ ಹೆಣವಾಗಿದ್ದು, ಇವರು ರಣಹದ್ದುಗಳಂತೆ ಭ್ರಷ್ಟಾಚಾರ ಮಾಡಿ ಹರಿದುಕೊಂಡು ತಿನ್ನುತ್ತಿದ್ದಾರೆ ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಟೀಕಿಸಿದರು.</p>.<p>ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಸಚಿವರು, ಶಾಸಕರು ಡಿನ್ನರ್ ಪಾರ್ಟಿಯಲ್ಲಿ ಮುಳುಗಿದ್ದಾರೆ. ಅಧಿಕಾರಕ್ಕಾಗಿ ರಣಹದ್ದುಗಳಂತೆ ಕಚ್ಚಾಡುತ್ತಿದ್ದಾರೆ ಎಂದು ವಿಶ್ಲೇಷಿಸಿದರು.</p>.<p>ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿ ಮುಂದುವರೆಯಬೇಕೆಂದು ಅವರ ಬೆಂಬಲಿಗರು ಹೇಳಿದರೆ, ದಲಿತರು ಮುಖ್ಯಮಂತ್ರಿ ಆಗಬೇಕು ಪರಮೇಶ್ವರ ಮನೆಯಲ್ಲಿ ಸಭೆ ನಡೆಸುತ್ತಾರೆ. ಸತೀಶ್ ಜಾರಕಿಹೊಳಿ ಮನೆಯಲ್ಲಿಯೂ ಮೀಟಿಂಗ್ ಮಾಡುತ್ತಿದ್ದಾರೆ ಎಂದು ಟೀಕಿಸಿದರು.</p>.<p>ಲಿಂಗಾಯತರು ಪ್ರತ್ಯೇಕವಾಗಿ ಸಭೆ ಮಾಡಬೇಕು ಎಂದು ಆಲೋಚನೆ ಮಾಡಿದ್ದೇವೆ ಎನ್ನುತ್ತಿದ್ದಾರೆ. ಈ ರೀತಿ ಗೌಡರು ಒಂದು ಕಡೆಗೆ, ಲಿಂಗಾಯತರು ಮತ್ತೊಂದು ಕಡೆಗೆ, ದಲಿತರು ಮಗದೊಂದು ಕಡೆ ಎನ್ನುವಂತೆ ಮೂರು ಗುಂಪುಗಳಾಗಿ ಖುರ್ಚಿಗಾಗಿ ಬಡಿದಾಡುತ್ತಿದ್ದಾರೆ. ಆಡಳಿತ ಸುಗಮವಾಗಿ ನಡೆಯುತ್ತಿಲ್ಲ. ಆಡಳಿತದ ಕಡೆಗೆ ಯಾರದ್ದು ಮನಸ್ಸಿಲ್ಲ ಎಂದು ಟೀಕಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಸರ್ಕಾರ ಸತ್ತ ಹೆಣವಾಗಿದ್ದು, ಇವರು ರಣಹದ್ದುಗಳಂತೆ ಭ್ರಷ್ಟಾಚಾರ ಮಾಡಿ ಹರಿದುಕೊಂಡು ತಿನ್ನುತ್ತಿದ್ದಾರೆ ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಟೀಕಿಸಿದರು.</p>.<p>ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಸಚಿವರು, ಶಾಸಕರು ಡಿನ್ನರ್ ಪಾರ್ಟಿಯಲ್ಲಿ ಮುಳುಗಿದ್ದಾರೆ. ಅಧಿಕಾರಕ್ಕಾಗಿ ರಣಹದ್ದುಗಳಂತೆ ಕಚ್ಚಾಡುತ್ತಿದ್ದಾರೆ ಎಂದು ವಿಶ್ಲೇಷಿಸಿದರು.</p>.<p>ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿ ಮುಂದುವರೆಯಬೇಕೆಂದು ಅವರ ಬೆಂಬಲಿಗರು ಹೇಳಿದರೆ, ದಲಿತರು ಮುಖ್ಯಮಂತ್ರಿ ಆಗಬೇಕು ಪರಮೇಶ್ವರ ಮನೆಯಲ್ಲಿ ಸಭೆ ನಡೆಸುತ್ತಾರೆ. ಸತೀಶ್ ಜಾರಕಿಹೊಳಿ ಮನೆಯಲ್ಲಿಯೂ ಮೀಟಿಂಗ್ ಮಾಡುತ್ತಿದ್ದಾರೆ ಎಂದು ಟೀಕಿಸಿದರು.</p>.<p>ಲಿಂಗಾಯತರು ಪ್ರತ್ಯೇಕವಾಗಿ ಸಭೆ ಮಾಡಬೇಕು ಎಂದು ಆಲೋಚನೆ ಮಾಡಿದ್ದೇವೆ ಎನ್ನುತ್ತಿದ್ದಾರೆ. ಈ ರೀತಿ ಗೌಡರು ಒಂದು ಕಡೆಗೆ, ಲಿಂಗಾಯತರು ಮತ್ತೊಂದು ಕಡೆಗೆ, ದಲಿತರು ಮಗದೊಂದು ಕಡೆ ಎನ್ನುವಂತೆ ಮೂರು ಗುಂಪುಗಳಾಗಿ ಖುರ್ಚಿಗಾಗಿ ಬಡಿದಾಡುತ್ತಿದ್ದಾರೆ. ಆಡಳಿತ ಸುಗಮವಾಗಿ ನಡೆಯುತ್ತಿಲ್ಲ. ಆಡಳಿತದ ಕಡೆಗೆ ಯಾರದ್ದು ಮನಸ್ಸಿಲ್ಲ ಎಂದು ಟೀಕಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>