<p>ಬಾಗಲಕೋಟೆ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರ ನಡೆ ಖಂಡಿಸಿ ಮಂಗಳವಾರ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.</p>.<p>‘ಸುಳ್ಳನ್ನೇ ನೂರು ಬಾರಿ ಹೇಳಿ ಸತ್ಯವಾಗಿಸುವ ಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಾರೆ. ಅಪಪ್ರಚಾರ ಮಾಡುವುದಲ್ಲದೇ, ವೈಯಕ್ತಿಕವಾಗಿ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕಾಂಗ್ರೆಸ್ ನಾಯಕರ ವಿರುದ್ಧ ಕೆಟ್ಟ ಶಬ್ದ ಬಳಕೆ ಮಾಡುತ್ತಿದ್ದಾರೆ. ಇದು ಬಿಜೆಪಿ ‘ಸಂಸ್ಕೃತಿಯನ್ನು ತೋರಿಸುತ್ತದೆ. ನೈತಿಕ ಅಧಃಪತನ ಹೊಂದಿದ್ದು, ಅಧಿಕಾರಕ್ಕಾಗಿ ಯಾವ ಮಟ್ಟಕ್ಕಾದರೂ ಇಳಿಯುತ್ತಿದ್ದಾರೆ’ ಎಂದು ದೂರಿದರು.</p>.<p>ಸಚಿವ ಆರ್.ಬಿ. ತಿಮ್ಮಾಪುರ ಮಾತನಾಡಿ, ‘ರಾಹುಲ್ ಗಾಂಧಿ ಅವರ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿದೆ. ಅಂತಹವರಿಗೆ ಭಯೋತ್ಪಾದಕ ಎನ್ನುತ್ತಾರೆ. ದೇಶಭಕ್ತಿಯ ಹೆಸರಿನಲ್ಲಿ ಹಸಿ ಸುಳ್ಳು ಹೇಳುತ್ತಾರೆ’ ಎಂದು ಟೀಕಿಸಿದರು.</p>.<p>ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ‘ಟೀಕೆಗೆ ಬಳಸುವ ಪದಗಳು ಅಸಂವಿಧಾನಿಕವಾಗಿರಬಾರದು. ಇತಿ–ಮಿತಿಯೊಳಗೆ ಟೀಕೆ ಮಾಡಬೇಕು. ಹಗುರವಾಗಿ ಮಾತನಾಡುವುದರಿಂದ ಮಾತನಾಡುವವರ ಗೌರವವೇ ಕಡಿಮೆಯಾಗುತ್ತದೆ’ ಎಂದರು.</p>.<p>ಶಾಸಕರಾದ ಎಚ್.ವೈ.ಮೇಟಿ, ಬಿ.ಬಿ. ಚಿಮ್ಮನಕಟ್ಟಿ, ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಎಂ.ಬಿ. ಸೌದಾಗರ, ರಕ್ಷಿತಾ ಈಟಿ, ಆನಂದ ಜಿಗಜಿನ್ನಿ, ನಾಗರಾಜ ಹದ್ಲಿ, ಚಂದ್ರಶೇಖರ ರಾಠೋಡ, ರಾಜು ಮನ್ನಿಕೇರಿ, ಎಂ.ಎನ್. ರಾಂಪೂರ, ಜಾಫರ ಬೇಪಾರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರ ನಡೆ ಖಂಡಿಸಿ ಮಂಗಳವಾರ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.</p>.<p>‘ಸುಳ್ಳನ್ನೇ ನೂರು ಬಾರಿ ಹೇಳಿ ಸತ್ಯವಾಗಿಸುವ ಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಾರೆ. ಅಪಪ್ರಚಾರ ಮಾಡುವುದಲ್ಲದೇ, ವೈಯಕ್ತಿಕವಾಗಿ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕಾಂಗ್ರೆಸ್ ನಾಯಕರ ವಿರುದ್ಧ ಕೆಟ್ಟ ಶಬ್ದ ಬಳಕೆ ಮಾಡುತ್ತಿದ್ದಾರೆ. ಇದು ಬಿಜೆಪಿ ‘ಸಂಸ್ಕೃತಿಯನ್ನು ತೋರಿಸುತ್ತದೆ. ನೈತಿಕ ಅಧಃಪತನ ಹೊಂದಿದ್ದು, ಅಧಿಕಾರಕ್ಕಾಗಿ ಯಾವ ಮಟ್ಟಕ್ಕಾದರೂ ಇಳಿಯುತ್ತಿದ್ದಾರೆ’ ಎಂದು ದೂರಿದರು.</p>.<p>ಸಚಿವ ಆರ್.ಬಿ. ತಿಮ್ಮಾಪುರ ಮಾತನಾಡಿ, ‘ರಾಹುಲ್ ಗಾಂಧಿ ಅವರ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿದೆ. ಅಂತಹವರಿಗೆ ಭಯೋತ್ಪಾದಕ ಎನ್ನುತ್ತಾರೆ. ದೇಶಭಕ್ತಿಯ ಹೆಸರಿನಲ್ಲಿ ಹಸಿ ಸುಳ್ಳು ಹೇಳುತ್ತಾರೆ’ ಎಂದು ಟೀಕಿಸಿದರು.</p>.<p>ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ‘ಟೀಕೆಗೆ ಬಳಸುವ ಪದಗಳು ಅಸಂವಿಧಾನಿಕವಾಗಿರಬಾರದು. ಇತಿ–ಮಿತಿಯೊಳಗೆ ಟೀಕೆ ಮಾಡಬೇಕು. ಹಗುರವಾಗಿ ಮಾತನಾಡುವುದರಿಂದ ಮಾತನಾಡುವವರ ಗೌರವವೇ ಕಡಿಮೆಯಾಗುತ್ತದೆ’ ಎಂದರು.</p>.<p>ಶಾಸಕರಾದ ಎಚ್.ವೈ.ಮೇಟಿ, ಬಿ.ಬಿ. ಚಿಮ್ಮನಕಟ್ಟಿ, ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಎಂ.ಬಿ. ಸೌದಾಗರ, ರಕ್ಷಿತಾ ಈಟಿ, ಆನಂದ ಜಿಗಜಿನ್ನಿ, ನಾಗರಾಜ ಹದ್ಲಿ, ಚಂದ್ರಶೇಖರ ರಾಠೋಡ, ರಾಜು ಮನ್ನಿಕೇರಿ, ಎಂ.ಎನ್. ರಾಂಪೂರ, ಜಾಫರ ಬೇಪಾರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>