<p><strong>ಬಾಗಲಕೋಟೆ:</strong> ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿಲ್ಲ. ನುಡಿದಂತೆ ನಡೆಯದ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರಷ್ಟು ಮಹಾಮೋಸಗಾರ ಯಾರೂ ಇಲ್ಲ. ಹೊಸಪೇಟೆಯಿಂದ ಕೂಡಲಸಂಗಮವರೆಗೆ ಪಾದಯಾತ್ರೆ ಮಾಡಿ, ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುತ್ತೇನೆ ಎಂದಿದ್ದರು. ಅಧಿಕಾರ ಬಂದ ಮೇಲೆ ಏನೂ ಮಾಡಲಿಲ್ಲ. ಈ ಬಾರಿಯೂ ಪ್ರತಿ ವರ್ಷ ₹40 ಸಾವಿರ ಕೋಟಿ ನೀಡುವುದಾಗಿ ಹೇಳಿದ್ದರು. ಈಗಲೂ ನೀಡಲಿಲ್ಲ ಎಂದು ಟೀಕಿಸಿದರು.</p>.<p>2014–15ರಲ್ಲಿ ಘೋಷಣೆ ಮಾಡಿದ್ದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಚುನಾವಣೆ ಬಂದಿದೆ ಎಂದು ಈಗ ಶಂಕುಸ್ಥಾಪನೆ ಮಾಡಲಾಗಿದೆ. ಅವರಿಗೆ ಬದ್ಧತೆ ಇದ್ದರೆ, ಇಷ್ಟೊತ್ತಿಗೆ ಉದ್ಘಾಟನೆಯಾಗಬೇಕಿತ್ತು. ಇದೊಂದು ಚುನಾವಣೆ ಗಿಮಿಕ್ ಎಂದು ವಾಗ್ದಾಳಿ ನಡೆಸಿದರು.</p>.<p>ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕಿತ್ತು. ಆದರೆ, ಈ ವಿಷಯವಲ್ಲಿ ಕೋರ್ಟ್ನಲ್ಲಿ ವಾದ ಮಾಡದೇ ತಡೆಯಾಜ್ಞೆ ಸಿಗುವಂತೆ ಸರ್ಕಾರ ನೋಡಿಕೊಂಡಿತು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿಯೇ ಮುಳುಗಿದ್ದಾರೆ. ಸಿ.ಎಂ ಅವರದು ಒಂದು ಗುಂಪಾದರೆ, ಡಿಸಿಎಂ ಅವರದ್ದು ಮತ್ತೊಂದು ಗುಂಪು, ಪರಮೇಶ್ವರ, ಮುನಿಯಪ್ಪನವರದ್ದೂ ಮಗದೊಂದು ಗುಂಪಾಗಿದೆ ಎಂದು ಟೀಕಿಸಿದರು.</p>.<p>ನವನಗರದ ಅಭಿವೃದ್ಧಿಗೆ ವೀರಣ್ಣ ಚರಂತಿಮಠ ₹3 ಸಾವಿರ ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡಿದ್ದಾರೆ. ಮೂರು ವರ್ಷಗಳಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ. ಬಾಗಲಕೋಟೆ ಜನರಿಗೆ ಕಾಂಗ್ರೆಸ್ ಗೆಲ್ಲಿಸಿ ಮೋಸ ಹೋಗಿರುವುದು ಅರಿವಾಗಿದೆ. ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ ಎಂದರು.</p>.<p>ಸಣ್ಣಪುಟ್ಟ ಕಾರಣಗಳಿಗೆ ಪಕ್ಷ ಬಿಟ್ಟವರು, ಮನೆಯಲ್ಲಿ ಕುಳಿತವರು ಮತ್ತೇ ಪಕ್ಷಕ್ಕೆ ಬಂದು ಬಲ ತುಂಬುವಂತೆ ವಿನಂತಿ ಮಾಡಲಾಗುವುದು ಎಂದು ಹೇಳಿದರು.</p>.<p>ಚುನಾವಣಾ ಉಸ್ತುವಾರಿ ಅರುಣ ಶಹಾಪುರ ಮಾತನಾಡಿ, ಅನಿವಾರ್ಯ ಕಾರಣಗಳಿಂದ ಪಕ್ಷ ಬಿಟ್ಟು ಹೋದವರನ್ನು ಮತ್ತೇ ಪಕ್ಷಕ್ಕೆ ತರುವ ಕೆಲಸವನ್ನು ಮಾಡಲಾಗುತ್ತಿದೆ. ಕಟ್ಟಿ ಕಲ್ಲನ್ನು ಕಟ್ಟಿಗೆ ಹೊಂದಿಸಲಾಗುತ್ತಿದೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260321-19-760145656</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿಲ್ಲ. ನುಡಿದಂತೆ ನಡೆಯದ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರಷ್ಟು ಮಹಾಮೋಸಗಾರ ಯಾರೂ ಇಲ್ಲ. ಹೊಸಪೇಟೆಯಿಂದ ಕೂಡಲಸಂಗಮವರೆಗೆ ಪಾದಯಾತ್ರೆ ಮಾಡಿ, ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುತ್ತೇನೆ ಎಂದಿದ್ದರು. ಅಧಿಕಾರ ಬಂದ ಮೇಲೆ ಏನೂ ಮಾಡಲಿಲ್ಲ. ಈ ಬಾರಿಯೂ ಪ್ರತಿ ವರ್ಷ ₹40 ಸಾವಿರ ಕೋಟಿ ನೀಡುವುದಾಗಿ ಹೇಳಿದ್ದರು. ಈಗಲೂ ನೀಡಲಿಲ್ಲ ಎಂದು ಟೀಕಿಸಿದರು.</p>.<p>2014–15ರಲ್ಲಿ ಘೋಷಣೆ ಮಾಡಿದ್ದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಚುನಾವಣೆ ಬಂದಿದೆ ಎಂದು ಈಗ ಶಂಕುಸ್ಥಾಪನೆ ಮಾಡಲಾಗಿದೆ. ಅವರಿಗೆ ಬದ್ಧತೆ ಇದ್ದರೆ, ಇಷ್ಟೊತ್ತಿಗೆ ಉದ್ಘಾಟನೆಯಾಗಬೇಕಿತ್ತು. ಇದೊಂದು ಚುನಾವಣೆ ಗಿಮಿಕ್ ಎಂದು ವಾಗ್ದಾಳಿ ನಡೆಸಿದರು.</p>.<p>ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕಿತ್ತು. ಆದರೆ, ಈ ವಿಷಯವಲ್ಲಿ ಕೋರ್ಟ್ನಲ್ಲಿ ವಾದ ಮಾಡದೇ ತಡೆಯಾಜ್ಞೆ ಸಿಗುವಂತೆ ಸರ್ಕಾರ ನೋಡಿಕೊಂಡಿತು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿಯೇ ಮುಳುಗಿದ್ದಾರೆ. ಸಿ.ಎಂ ಅವರದು ಒಂದು ಗುಂಪಾದರೆ, ಡಿಸಿಎಂ ಅವರದ್ದು ಮತ್ತೊಂದು ಗುಂಪು, ಪರಮೇಶ್ವರ, ಮುನಿಯಪ್ಪನವರದ್ದೂ ಮಗದೊಂದು ಗುಂಪಾಗಿದೆ ಎಂದು ಟೀಕಿಸಿದರು.</p>.<p>ನವನಗರದ ಅಭಿವೃದ್ಧಿಗೆ ವೀರಣ್ಣ ಚರಂತಿಮಠ ₹3 ಸಾವಿರ ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡಿದ್ದಾರೆ. ಮೂರು ವರ್ಷಗಳಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ. ಬಾಗಲಕೋಟೆ ಜನರಿಗೆ ಕಾಂಗ್ರೆಸ್ ಗೆಲ್ಲಿಸಿ ಮೋಸ ಹೋಗಿರುವುದು ಅರಿವಾಗಿದೆ. ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ ಎಂದರು.</p>.<p>ಸಣ್ಣಪುಟ್ಟ ಕಾರಣಗಳಿಗೆ ಪಕ್ಷ ಬಿಟ್ಟವರು, ಮನೆಯಲ್ಲಿ ಕುಳಿತವರು ಮತ್ತೇ ಪಕ್ಷಕ್ಕೆ ಬಂದು ಬಲ ತುಂಬುವಂತೆ ವಿನಂತಿ ಮಾಡಲಾಗುವುದು ಎಂದು ಹೇಳಿದರು.</p>.<p>ಚುನಾವಣಾ ಉಸ್ತುವಾರಿ ಅರುಣ ಶಹಾಪುರ ಮಾತನಾಡಿ, ಅನಿವಾರ್ಯ ಕಾರಣಗಳಿಂದ ಪಕ್ಷ ಬಿಟ್ಟು ಹೋದವರನ್ನು ಮತ್ತೇ ಪಕ್ಷಕ್ಕೆ ತರುವ ಕೆಲಸವನ್ನು ಮಾಡಲಾಗುತ್ತಿದೆ. ಕಟ್ಟಿ ಕಲ್ಲನ್ನು ಕಟ್ಟಿಗೆ ಹೊಂದಿಸಲಾಗುತ್ತಿದೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260321-19-760145656</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>