ಬಾಗಲಕೋಟೆ: ಕೇಂದ್ರವು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಅಗ್ನಿಪಥ ಯೋಜನೆ ರದ್ದು ಮಾಡಬೇಕು ಎಂದು ಆಗ್ರಹಿಸಿ ಸೋಮವಾರ ಕಾಂಗ್ರಸ್ ಮುಖಂಡರು ತಹಶೀಲ್ದಾರ್ ಕಚೇರಿ ಮುಂದೆ ಧರಣಿ ಮಾಡಿದರು.
ನಾಲ್ಕು ವರ್ಷದ ನಂತರ ಸೇನೆಯಿಂದ ಕೈಬಿಟ್ಟರೆ ಯುವಕರು ನಿರುದ್ಯೋಗಿಗಳಾಗುತ್ತಾರೆ. ಈ ಯೋಜನೆಯುಅವೈಜ್ಞಾನಿಕವಾಗಿದೆ. ಆದ್ದರಿಂದ ಅದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.