<p><strong>ಬಾಗಲಕೋಟೆ:</strong> ಮಹಾತ್ಮ ಗಾಂಧಿ ಹೆಸರಿನ ನರೇಗಾ ಯೋಜನೆ ಹೆಸರು ಬದಲಾವಣೆ ಹಾಗೂ ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಸುಳ್ಳು ಆರೋಪ ಹೊರಿಸದ್ದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಮಾಡಿದರು.</p>.<p>ದ್ವೇಷ ಸಾಧನೆ ಮಾಡುತ್ತಿರುವ ಕೇಂದ್ರದ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಹಾತ್ಮ ಗಾಂಧಿ ಅವರ ಆಶಯಗಳಿಗೆ ಅನುಗುಣವಾಗಿ ರೂಪಿತಗೊಂಡಿದ್ದ ಯೋಜನೆಯಿಂದ ಗಾಂಧೀಜಿ ಅವರ ಹೆಸರು ಕೈಬಿಡುತ್ತಿರುವುದು ಖಂಡನೀಯ. ಕೂಡಲೇ ಮೊದಲಿನ ಹೆಸರಿನೊಂದಿಗೆ ಯೋಜನೆ ಮುಂದುವರೆಸಬೇಕು ಎಂದು ಆಗ್ರಹಿಸಿದರು.</p>.<p>ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ಯೋಜನೆ ಹೆಸರು ಬದಲಿಸಿರುವುದು ದೇಶದ ದುರ್ದೈವ. ಗಾಂಧೀಜಿ ಅವರನ್ನು ನಾತುರಾಮ ಗೋಡ್ಸೆ ಗುಂಡು ಹೊಡೆದು ಕೊಂದಿದ್ದರು. ಗಾಂಧೀಜಿ ಅವರ ಹೆಸರನ್ನು ಬಿಡುವ ಮೂಲಕ ಕೇಂದ್ರ ಸರ್ಕಾರ ಮತ್ತೊಮ್ಮೆ ಕೊಲೆ ಮಾಡಿದೆ ಎಂದು ಟೀಕಿಸಿದರು. </p>.<p>ದೇಶದ ಬಡ ಜನರಿಗೆ ಉದ್ಯೋಗ ನೀಡುವುದಕ್ಕಾಗಿ ಹಿಂದೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಯೋಜನೆ ಆರಂಭಿಸಿದ್ದರು. ಈಗ ಅದರಲ್ಲಿದ್ದ ಗಾಂಧೀಜಿ ಅವರ ಹೆಸರನ್ನು ತೆಗೆಯುವ ಮೂಲಕ ಬಿಜೆಪಿಯು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮನಿಗೆ ಅವಮಾನ ಮಾಡಿದೆ ಎಂದು ಆರೋಪಿಸಿದರು.</p>.<p>ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಷಯದಲ್ಲೂ ರಾಜಕೀಯ ಮಾಡುತ್ತಿದೆ. ಈ ವಿಷಯದಲ್ಲಿ ಕೋರ್ಟ್ ಛೀಮಾರಿ ಹಾಕಿದೆ. ಚುನಾವಣಾ ಆಯೋಗ, ಇಡಿ ಮೂಲಕ ಅಧಿಕಾರ ಹಿಡಿಯುತ್ತಿದ್ದಾರೆ. ಇದಕ್ಕೆ ಅಂತ್ಯ ಹಾಡಲೇಬೇಕಿದೆ ಎಂದರು.</p>.<p>ಕೆಪಿಸಿಸಿ ಕಾರ್ಯದರ್ಶಿ ಎಂ.ಬಿ. ಸೌದಾಗಾರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿ ಹೆಸರು ಅಳಿಸಲು ಬಿಜೆಪಿ ಮುಂದಾಗಿದೆ. ಹಿಂದೂ–ಮುಸ್ಲಿಂ ನಡುವೆ ಜಗಳ ಹಚ್ಚಿ ಅಧಿಕಾರಕ್ಕೆ ಬಂದಿದೆ. ಎಲ್ಲರೂ ಒಗ್ಗಟ್ಟಿನಿಂದ ಬಿಜೆಪಿ ಎದುರಿಸಬೇಕಿದೆ ಎಂದು ಹೇಳಿದರು.</p>.<p>ಶಾಸಕ ಬಿ.ಬಿ. ಚಿಮ್ಮನಕಟ್ಟಿ ಮಾತನಾಡಿ, ಸರ್ಕಾರದ ವಿರುದ್ಧ ಧ್ವನಿ ಎತ್ತುವವರ ಬಿಜೆಪಿ ಸರ್ಕಾರ ದ್ವೇಷ ಸಾಧನೆ ಮಾಡುತ್ತಿದೆ. ಅವರನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದೆ. ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಇಂತಹ ವಿಷಯಗಳನ್ನು ಮುಂದೆ ಮಾಡುತ್ತಿದೆ ಎಂದು ಟೀಕಿಸಿದರು.</p>.<p>ಎಐಸಿಸಿ ಕಾರ್ಯದರ್ಶಿ ಪಳಿಯಪ್ಪನ್ ಮಾತನಾಡಿ, ಮನರೇಗಾ ಯೋಜನೆಗೆ ಪೂರ್ಣವಾಗಿ ಕೇಂದ್ರ ಸರ್ಕಾರವೇ ಅನುದಾನ ನೀಡುತ್ತಿತ್ತು. ಈಗ ರಾಜ್ಯ ಸರ್ಕಾರ ಶೇ40ರಷ್ಟು ಹಣ ನೀಡುವಂತೆ ಬದಲಾಯಿಸಲಾಗಿದೆ. ಇದರಿಂದ ಉದ್ಯೋಗಾಕಾಂಕ್ಷಿಗಳಿಗೆ ತೊಂದರೆಯಾಗಲಿದೆ ಎಂದು ತಿಳಿಸಿದರು.</p>.<p>ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸಂವಿಧಾನ ಬದಲಾವಣೆಗೆ ಯತ್ನಿಸುತ್ತಿದ್ದಾರೆ. ಮತ ಕಳವು ಮಾಡಿ ಅಧಿಕಾರಕ್ಕೆ ಬರುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಮಾಜಿ ಸಚಿವ ಅಜಯಕುಮಾರ ಸರನಾಯಕ, ಶಾಸಕ ವಿಜಯಾನಂದ ಕಾಶಪ್ಪನವರ, ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಸಿದ್ದು ಕೊಣ್ಣೂರ, ನಾಗರಾಜ ಹದ್ಲಿ, ರಾಜು ಮನ್ನಿಕೇರಿ, ಚಂದ್ರಶೇಖರ ರಾಠೋಡ, ಶ್ರೀನಿವಾಸ ಬಳ್ಳಾರಿ, ದಯಾನಂದ ಪಾಟೀಲ, ಮಲ್ಲಿಕಾರ್ಜುನ ಮೇಟಿ, ಉಮೇಶ ಮೇಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಮಹಾತ್ಮ ಗಾಂಧಿ ಹೆಸರಿನ ನರೇಗಾ ಯೋಜನೆ ಹೆಸರು ಬದಲಾವಣೆ ಹಾಗೂ ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಸುಳ್ಳು ಆರೋಪ ಹೊರಿಸದ್ದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಮಾಡಿದರು.</p>.<p>ದ್ವೇಷ ಸಾಧನೆ ಮಾಡುತ್ತಿರುವ ಕೇಂದ್ರದ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಹಾತ್ಮ ಗಾಂಧಿ ಅವರ ಆಶಯಗಳಿಗೆ ಅನುಗುಣವಾಗಿ ರೂಪಿತಗೊಂಡಿದ್ದ ಯೋಜನೆಯಿಂದ ಗಾಂಧೀಜಿ ಅವರ ಹೆಸರು ಕೈಬಿಡುತ್ತಿರುವುದು ಖಂಡನೀಯ. ಕೂಡಲೇ ಮೊದಲಿನ ಹೆಸರಿನೊಂದಿಗೆ ಯೋಜನೆ ಮುಂದುವರೆಸಬೇಕು ಎಂದು ಆಗ್ರಹಿಸಿದರು.</p>.<p>ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ಯೋಜನೆ ಹೆಸರು ಬದಲಿಸಿರುವುದು ದೇಶದ ದುರ್ದೈವ. ಗಾಂಧೀಜಿ ಅವರನ್ನು ನಾತುರಾಮ ಗೋಡ್ಸೆ ಗುಂಡು ಹೊಡೆದು ಕೊಂದಿದ್ದರು. ಗಾಂಧೀಜಿ ಅವರ ಹೆಸರನ್ನು ಬಿಡುವ ಮೂಲಕ ಕೇಂದ್ರ ಸರ್ಕಾರ ಮತ್ತೊಮ್ಮೆ ಕೊಲೆ ಮಾಡಿದೆ ಎಂದು ಟೀಕಿಸಿದರು. </p>.<p>ದೇಶದ ಬಡ ಜನರಿಗೆ ಉದ್ಯೋಗ ನೀಡುವುದಕ್ಕಾಗಿ ಹಿಂದೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಯೋಜನೆ ಆರಂಭಿಸಿದ್ದರು. ಈಗ ಅದರಲ್ಲಿದ್ದ ಗಾಂಧೀಜಿ ಅವರ ಹೆಸರನ್ನು ತೆಗೆಯುವ ಮೂಲಕ ಬಿಜೆಪಿಯು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮನಿಗೆ ಅವಮಾನ ಮಾಡಿದೆ ಎಂದು ಆರೋಪಿಸಿದರು.</p>.<p>ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಷಯದಲ್ಲೂ ರಾಜಕೀಯ ಮಾಡುತ್ತಿದೆ. ಈ ವಿಷಯದಲ್ಲಿ ಕೋರ್ಟ್ ಛೀಮಾರಿ ಹಾಕಿದೆ. ಚುನಾವಣಾ ಆಯೋಗ, ಇಡಿ ಮೂಲಕ ಅಧಿಕಾರ ಹಿಡಿಯುತ್ತಿದ್ದಾರೆ. ಇದಕ್ಕೆ ಅಂತ್ಯ ಹಾಡಲೇಬೇಕಿದೆ ಎಂದರು.</p>.<p>ಕೆಪಿಸಿಸಿ ಕಾರ್ಯದರ್ಶಿ ಎಂ.ಬಿ. ಸೌದಾಗಾರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿ ಹೆಸರು ಅಳಿಸಲು ಬಿಜೆಪಿ ಮುಂದಾಗಿದೆ. ಹಿಂದೂ–ಮುಸ್ಲಿಂ ನಡುವೆ ಜಗಳ ಹಚ್ಚಿ ಅಧಿಕಾರಕ್ಕೆ ಬಂದಿದೆ. ಎಲ್ಲರೂ ಒಗ್ಗಟ್ಟಿನಿಂದ ಬಿಜೆಪಿ ಎದುರಿಸಬೇಕಿದೆ ಎಂದು ಹೇಳಿದರು.</p>.<p>ಶಾಸಕ ಬಿ.ಬಿ. ಚಿಮ್ಮನಕಟ್ಟಿ ಮಾತನಾಡಿ, ಸರ್ಕಾರದ ವಿರುದ್ಧ ಧ್ವನಿ ಎತ್ತುವವರ ಬಿಜೆಪಿ ಸರ್ಕಾರ ದ್ವೇಷ ಸಾಧನೆ ಮಾಡುತ್ತಿದೆ. ಅವರನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದೆ. ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಇಂತಹ ವಿಷಯಗಳನ್ನು ಮುಂದೆ ಮಾಡುತ್ತಿದೆ ಎಂದು ಟೀಕಿಸಿದರು.</p>.<p>ಎಐಸಿಸಿ ಕಾರ್ಯದರ್ಶಿ ಪಳಿಯಪ್ಪನ್ ಮಾತನಾಡಿ, ಮನರೇಗಾ ಯೋಜನೆಗೆ ಪೂರ್ಣವಾಗಿ ಕೇಂದ್ರ ಸರ್ಕಾರವೇ ಅನುದಾನ ನೀಡುತ್ತಿತ್ತು. ಈಗ ರಾಜ್ಯ ಸರ್ಕಾರ ಶೇ40ರಷ್ಟು ಹಣ ನೀಡುವಂತೆ ಬದಲಾಯಿಸಲಾಗಿದೆ. ಇದರಿಂದ ಉದ್ಯೋಗಾಕಾಂಕ್ಷಿಗಳಿಗೆ ತೊಂದರೆಯಾಗಲಿದೆ ಎಂದು ತಿಳಿಸಿದರು.</p>.<p>ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸಂವಿಧಾನ ಬದಲಾವಣೆಗೆ ಯತ್ನಿಸುತ್ತಿದ್ದಾರೆ. ಮತ ಕಳವು ಮಾಡಿ ಅಧಿಕಾರಕ್ಕೆ ಬರುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಮಾಜಿ ಸಚಿವ ಅಜಯಕುಮಾರ ಸರನಾಯಕ, ಶಾಸಕ ವಿಜಯಾನಂದ ಕಾಶಪ್ಪನವರ, ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಸಿದ್ದು ಕೊಣ್ಣೂರ, ನಾಗರಾಜ ಹದ್ಲಿ, ರಾಜು ಮನ್ನಿಕೇರಿ, ಚಂದ್ರಶೇಖರ ರಾಠೋಡ, ಶ್ರೀನಿವಾಸ ಬಳ್ಳಾರಿ, ದಯಾನಂದ ಪಾಟೀಲ, ಮಲ್ಲಿಕಾರ್ಜುನ ಮೇಟಿ, ಉಮೇಶ ಮೇಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>