<p><strong>ಬಾಗಲಕೋಟೆ</strong>: ‘ತಾನು ಎಲ್ಲರಿಗಾಗಿ, ಎಲ್ಲರೂ ತನಗಾಗಿ ಎಂಬ ಧ್ಯೇಯದ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಪ್ರಾಮಾಣಿಕವಾದ ಪರಿಶ್ರಮ ಅಗತ್ಯವಾಗಿದೆ’ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು.</p>.<p>ಅಂಬೇಡ್ಕರ್ ಭವನದಲ್ಲಿ ಭಾನುವಾರ ಜರುಗಿದ ಜಿಲ್ಲಾ ರೆಡ್ಡಿ ನೌಕರರ ಪತ್ತಿನ ಸಹಕಾರ ಸಂಘದ 10ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ಪಡೆದ ಸಾಲವನ್ನು ಸದ್ವಿನಿಯೋಗ ಮಾಡಿಕೊಂಡು ನಿಗದಿತ ಸಮಯದಲ್ಲಿ ಮರುಪಾವತಿ ಮಾಡಬೇಕು’ ಎಂದರು.</p>.<p>ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಮಾತನಾಡಿ, ‘ಸಂಘವು ಸಮಾಜದ ನೌಕರರ ಅಭಿವೃದ್ಧಿಗೆ ಸಹಕಾರಿಯಾಗಲಿ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿರಲಿ’ ಎಂದು ಹೇಳಿದರು.</p>.<p>ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಬಾಲಾಜಿ ಶುಗರ್ಸ್ ಅಧ್ಯಕ್ಷ ಎಚ್.ಎಲ್.ಪಾಟೀಲ ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ವೈ. ಮೇಟಿ ಮಾತನಾಡಿ, ‘ಸಹಕಾರಿ ರಂಗದ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ’ ಎಂದು ಹೇಳಿದರು.</p>.<p>ಸಂಘದ ಅಧ್ಯಕ್ಷ ಆರ್.ಎಸ್.ಪಾಟೀಲ, ‘ಮಾರ್ಚ್ ಅಂತ್ಯಕ್ಕೆ ₹17.22 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ12 ರಷ್ಟು ಲಾಭಾಂಶ ಹಂಚಿಕೆ ಮಾಡಲಾಗುವುದು’ ಎಂದರು.</p>.<p>ಆಧ್ಯಾತ್ಮ ಚಿಂತಕ ಪ್ರದೀಪ ಗುರೂಜಿ ಅಧ್ಯಕ್ಷತೆ ವಹಿಸಿದ್ದರು. ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಶೇ90 ಕ್ಕಿಂತ ಹೆಚ್ಚು ಅಂಕ ಗಳಿಸಿದವರನ್ನು, ಸಮಾಜದ ನಿವೃತ್ತ ನೌಕರರು, ದಾನಿಗಳನ್ನು ಸನ್ಮಾನಿಸಲಾಯಿತು.</p>.<p>ಸಂಘದ ನಿರ್ದೇಶಕ ಅಶೋಕ ಎಮ್ಮಿ ಸ್ವಾಗತಿಸಿದರು. ನಿರ್ದೇಶಕ ಎಸ್.ಬಿ.ಮಾಚಾ ಸಂಘದ ಪ್ರಗತಿ ವಿವರಿಸಿದರು. ಸಂಜಯ ನಡುವಿನಮನಿ, ಪಾಂಡುರಂಗ ಸಣ್ಣಪ್ಪನವರ ನಿರೂಪಿಸಿದರು. ಉಮಾ ಕೆಳಗಿನಗೌಡರ ವಂದಿಸಿದರು.</p>.<h2><strong>‘₹25.37 ಲಕ್ಷ ಲಾಭ’</strong></h2><p><strong>ಹುನಗುಂದ:</strong> ‘ಇಲ್ಲಿನ ಶ್ರೀ ಕನಕದಾಸ ಸೌಹಾರ್ದ ಪತ್ತಿನ ಸಹಕಾರ ಸಂಘ ಪ್ರಸಕ್ತ ಆರ್ಥಿಕ ವರ್ಷದಲ್ಲಿ ₹25.37 ಲಕ್ಷ ನಿವ್ವಳ ಲಾಭಗಳಿಸಿದೆ’ ಎಂದು ಸಂಘದ ಅಧ್ಯಕ್ಷ ವೀರೇಶ ಉಂಡೋಡಿ ಹೇಳಿದರು.</p><p>ಪಟ್ಟಣದ ಸಂಘದ ಕಾರ್ಯಲಯದಲ್ಲಿ ಭಾನುವಾರ ನಡೆದ 16ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p><p>‘ಸಂಘವು ₹28.87 ಕೋಟಿ ದುಡಿಯುವ ಬಂಡವಾಳ ಹೊಂದಿದ್ದು, ಕಳೆದ ವರ್ಷ ₹80 ಕೋಟಿ ಆರ್ಥಿಕ ವ್ಯವಹಾರ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ₹5 ಕೋಟಿ ಠೇವಣಿ ಹೆಚ್ಚಾಗಿದ್ದು, ಇದು ಸಂಘದ ಪ್ರಗತಿಯನ್ನು ಸೂಚಿಸುತ್ತದೆ. ಠೇವಣಿದಾರರು ಹಾಗೂ ಸಿಬ್ಬಂದಿ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಸದಸ್ಯರ ಸಲಹೆಯಂತೆ ಮುಂಬರುವ ದಿನಗಳಲ್ಲಿ ಶಾಖೆಗಳನ್ನು ಆರಂಭಿಸಲಾಗುವುದು’ ಎಂದರು.</p><p>ಮುಖ್ಯಕಾರ್ಯನಿರ್ವಾಹಕ ಭರಮಣ್ಣ ರಾಮವಾಡಗಿ ವರದಿ ವಾಚಿಸಿದರು. ಉಪಾಧ್ಯಕ್ಷೆ ಅಕ್ಕಮಹಾದೇವಿ ಆಲೂರು, ನಿರ್ದೇಶಕರಾದ ಮಹಾಂತಗೌಡ ಪಾಟೀಲ, ನೀಲಪ್ಪ ತಪೇಲಿ, ನಾಗಪ್ಪ ಕಳ್ಳಿಗುಡ್ಡ, ಮಹಾಂತೇಶ ಮುಕ್ಕಣ್ಣವರ, ವಿಠ್ಠಲ ತಿಮ್ಮಾಪೂರ, ಮಲ್ಲಿಕಾರ್ಜುನ ಡಂಬಳ, ಲಕ್ಷ್ಮೀಬಾಯಿ ವಾಲಿಕಾರ, ಸಂಗಪ್ಪ ಚಿತ್ತವಾಡಗಿ ಇದ್ದರು.</p><h2><strong>‘ಶಾಸ್ತ್ರಿ ಸಂಘಕ್ಕೆ ₹8 ಲಕ್ಷ ಲಾಭ’</strong></h2>.<p><strong>ಗುಳೇದಗುಡ್ಡ</strong>: ‘ಪಟ್ಟಣದ ಲಾಲ್ಬಹದ್ದೂರ್ ಶಾಸ್ತ್ರಿ ಪತ್ತಿನ ಸೌಹಾರ್ದ ಸಹಕಾರ ಸಂಘ ಆರ್ಥಿಕ ಕ್ಷೇತ್ರವಾಗಿದ್ದೂ, ಪ್ರತಿವರ್ಷ ಹಲವು ಬಗೆಯ ಸಮಾಜಮುಖಿ ಕಾರ್ಯ ಮಾಡುತ್ತಿದೆ. ಪ್ರಸಕ್ತ ವರ್ಷ ಸಂಘ ₹8 ಲಕ್ಷ ಲಾಭ ಗಳಿಸಿ ಉತ್ತಮ ಪ್ರಗತಿ ಸಾಧಿಸಿದೆ’ ಎಂದು ಅಧ್ಯಕ್ಷ ಬಾಲಮುಕ್ಕುಂದ ತಾಪಡಿಯಾ ಹೇಳಿದರು.</p><p>ಅವರು ಪಟ್ಟಣದ ಲಾಲ್ಬಹದ್ದೂರ್ ಶಾಸ್ತ್ರಿ ಪತ್ತಿನ ಸೌಹಾರ್ದ ಸಹಕಾರ ಸಂಘದ 10ನೇ ವರ್ಷದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ರಾಮಮಂದಿರ ಉದ್ಘಾಟನೆ ದಿನದಂದು ಜನಿಸಿದ ಮಗುವಿಗೆ ಸಂಘ ₹5 ಸಾವಿರ ಠೇವಣಿ ಇಟ್ಟಿದ್ದು, ಅದು 18 ವರ್ಷ ತುಂಬಿದ ಬಳಿಕ ಮಗುವಿಗೆ ₹25 ಸಾವಿರ ಲಭಿಸಲಿದೆ’ ಎಂದರು.</p><p>ಸಂಘದ ಉಪಾಧ್ಯಕ್ಷ ಪ್ರಶಾಂತ ಜವಳಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿಶೇಷ ಠೇವು ಯೋಜನೆಗಳ ಬಿಡುಗಡೆ, ಉತ್ತಮ ಗ್ರಾಹಕರಿಗೆ ಹಾಗೂ ಸಹಕಾರ ಸಂಘದ ಶೇರುದಾರರ ಮಕ್ಕಳಿಗೆ ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಯಲ್ಲಿ ಶೇ90 ರಷ್ಟು ಅಂಕಗಳನ್ನು ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p><p>ಮರಡಿಮಠದ ಅಭಿನವ ಕಾಡಸಿದ್ಧೇಶ್ವರ ಶ್ರೀ, ಸಂಘದ ಎಲ್ಲ ನಿದೇಶಕರು ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ತಾನು ಎಲ್ಲರಿಗಾಗಿ, ಎಲ್ಲರೂ ತನಗಾಗಿ ಎಂಬ ಧ್ಯೇಯದ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಪ್ರಾಮಾಣಿಕವಾದ ಪರಿಶ್ರಮ ಅಗತ್ಯವಾಗಿದೆ’ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು.</p>.<p>ಅಂಬೇಡ್ಕರ್ ಭವನದಲ್ಲಿ ಭಾನುವಾರ ಜರುಗಿದ ಜಿಲ್ಲಾ ರೆಡ್ಡಿ ನೌಕರರ ಪತ್ತಿನ ಸಹಕಾರ ಸಂಘದ 10ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ಪಡೆದ ಸಾಲವನ್ನು ಸದ್ವಿನಿಯೋಗ ಮಾಡಿಕೊಂಡು ನಿಗದಿತ ಸಮಯದಲ್ಲಿ ಮರುಪಾವತಿ ಮಾಡಬೇಕು’ ಎಂದರು.</p>.<p>ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಮಾತನಾಡಿ, ‘ಸಂಘವು ಸಮಾಜದ ನೌಕರರ ಅಭಿವೃದ್ಧಿಗೆ ಸಹಕಾರಿಯಾಗಲಿ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿರಲಿ’ ಎಂದು ಹೇಳಿದರು.</p>.<p>ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಬಾಲಾಜಿ ಶುಗರ್ಸ್ ಅಧ್ಯಕ್ಷ ಎಚ್.ಎಲ್.ಪಾಟೀಲ ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ವೈ. ಮೇಟಿ ಮಾತನಾಡಿ, ‘ಸಹಕಾರಿ ರಂಗದ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ’ ಎಂದು ಹೇಳಿದರು.</p>.<p>ಸಂಘದ ಅಧ್ಯಕ್ಷ ಆರ್.ಎಸ್.ಪಾಟೀಲ, ‘ಮಾರ್ಚ್ ಅಂತ್ಯಕ್ಕೆ ₹17.22 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ12 ರಷ್ಟು ಲಾಭಾಂಶ ಹಂಚಿಕೆ ಮಾಡಲಾಗುವುದು’ ಎಂದರು.</p>.<p>ಆಧ್ಯಾತ್ಮ ಚಿಂತಕ ಪ್ರದೀಪ ಗುರೂಜಿ ಅಧ್ಯಕ್ಷತೆ ವಹಿಸಿದ್ದರು. ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಶೇ90 ಕ್ಕಿಂತ ಹೆಚ್ಚು ಅಂಕ ಗಳಿಸಿದವರನ್ನು, ಸಮಾಜದ ನಿವೃತ್ತ ನೌಕರರು, ದಾನಿಗಳನ್ನು ಸನ್ಮಾನಿಸಲಾಯಿತು.</p>.<p>ಸಂಘದ ನಿರ್ದೇಶಕ ಅಶೋಕ ಎಮ್ಮಿ ಸ್ವಾಗತಿಸಿದರು. ನಿರ್ದೇಶಕ ಎಸ್.ಬಿ.ಮಾಚಾ ಸಂಘದ ಪ್ರಗತಿ ವಿವರಿಸಿದರು. ಸಂಜಯ ನಡುವಿನಮನಿ, ಪಾಂಡುರಂಗ ಸಣ್ಣಪ್ಪನವರ ನಿರೂಪಿಸಿದರು. ಉಮಾ ಕೆಳಗಿನಗೌಡರ ವಂದಿಸಿದರು.</p>.<h2><strong>‘₹25.37 ಲಕ್ಷ ಲಾಭ’</strong></h2><p><strong>ಹುನಗುಂದ:</strong> ‘ಇಲ್ಲಿನ ಶ್ರೀ ಕನಕದಾಸ ಸೌಹಾರ್ದ ಪತ್ತಿನ ಸಹಕಾರ ಸಂಘ ಪ್ರಸಕ್ತ ಆರ್ಥಿಕ ವರ್ಷದಲ್ಲಿ ₹25.37 ಲಕ್ಷ ನಿವ್ವಳ ಲಾಭಗಳಿಸಿದೆ’ ಎಂದು ಸಂಘದ ಅಧ್ಯಕ್ಷ ವೀರೇಶ ಉಂಡೋಡಿ ಹೇಳಿದರು.</p><p>ಪಟ್ಟಣದ ಸಂಘದ ಕಾರ್ಯಲಯದಲ್ಲಿ ಭಾನುವಾರ ನಡೆದ 16ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p><p>‘ಸಂಘವು ₹28.87 ಕೋಟಿ ದುಡಿಯುವ ಬಂಡವಾಳ ಹೊಂದಿದ್ದು, ಕಳೆದ ವರ್ಷ ₹80 ಕೋಟಿ ಆರ್ಥಿಕ ವ್ಯವಹಾರ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ₹5 ಕೋಟಿ ಠೇವಣಿ ಹೆಚ್ಚಾಗಿದ್ದು, ಇದು ಸಂಘದ ಪ್ರಗತಿಯನ್ನು ಸೂಚಿಸುತ್ತದೆ. ಠೇವಣಿದಾರರು ಹಾಗೂ ಸಿಬ್ಬಂದಿ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಸದಸ್ಯರ ಸಲಹೆಯಂತೆ ಮುಂಬರುವ ದಿನಗಳಲ್ಲಿ ಶಾಖೆಗಳನ್ನು ಆರಂಭಿಸಲಾಗುವುದು’ ಎಂದರು.</p><p>ಮುಖ್ಯಕಾರ್ಯನಿರ್ವಾಹಕ ಭರಮಣ್ಣ ರಾಮವಾಡಗಿ ವರದಿ ವಾಚಿಸಿದರು. ಉಪಾಧ್ಯಕ್ಷೆ ಅಕ್ಕಮಹಾದೇವಿ ಆಲೂರು, ನಿರ್ದೇಶಕರಾದ ಮಹಾಂತಗೌಡ ಪಾಟೀಲ, ನೀಲಪ್ಪ ತಪೇಲಿ, ನಾಗಪ್ಪ ಕಳ್ಳಿಗುಡ್ಡ, ಮಹಾಂತೇಶ ಮುಕ್ಕಣ್ಣವರ, ವಿಠ್ಠಲ ತಿಮ್ಮಾಪೂರ, ಮಲ್ಲಿಕಾರ್ಜುನ ಡಂಬಳ, ಲಕ್ಷ್ಮೀಬಾಯಿ ವಾಲಿಕಾರ, ಸಂಗಪ್ಪ ಚಿತ್ತವಾಡಗಿ ಇದ್ದರು.</p><h2><strong>‘ಶಾಸ್ತ್ರಿ ಸಂಘಕ್ಕೆ ₹8 ಲಕ್ಷ ಲಾಭ’</strong></h2>.<p><strong>ಗುಳೇದಗುಡ್ಡ</strong>: ‘ಪಟ್ಟಣದ ಲಾಲ್ಬಹದ್ದೂರ್ ಶಾಸ್ತ್ರಿ ಪತ್ತಿನ ಸೌಹಾರ್ದ ಸಹಕಾರ ಸಂಘ ಆರ್ಥಿಕ ಕ್ಷೇತ್ರವಾಗಿದ್ದೂ, ಪ್ರತಿವರ್ಷ ಹಲವು ಬಗೆಯ ಸಮಾಜಮುಖಿ ಕಾರ್ಯ ಮಾಡುತ್ತಿದೆ. ಪ್ರಸಕ್ತ ವರ್ಷ ಸಂಘ ₹8 ಲಕ್ಷ ಲಾಭ ಗಳಿಸಿ ಉತ್ತಮ ಪ್ರಗತಿ ಸಾಧಿಸಿದೆ’ ಎಂದು ಅಧ್ಯಕ್ಷ ಬಾಲಮುಕ್ಕುಂದ ತಾಪಡಿಯಾ ಹೇಳಿದರು.</p><p>ಅವರು ಪಟ್ಟಣದ ಲಾಲ್ಬಹದ್ದೂರ್ ಶಾಸ್ತ್ರಿ ಪತ್ತಿನ ಸೌಹಾರ್ದ ಸಹಕಾರ ಸಂಘದ 10ನೇ ವರ್ಷದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ರಾಮಮಂದಿರ ಉದ್ಘಾಟನೆ ದಿನದಂದು ಜನಿಸಿದ ಮಗುವಿಗೆ ಸಂಘ ₹5 ಸಾವಿರ ಠೇವಣಿ ಇಟ್ಟಿದ್ದು, ಅದು 18 ವರ್ಷ ತುಂಬಿದ ಬಳಿಕ ಮಗುವಿಗೆ ₹25 ಸಾವಿರ ಲಭಿಸಲಿದೆ’ ಎಂದರು.</p><p>ಸಂಘದ ಉಪಾಧ್ಯಕ್ಷ ಪ್ರಶಾಂತ ಜವಳಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿಶೇಷ ಠೇವು ಯೋಜನೆಗಳ ಬಿಡುಗಡೆ, ಉತ್ತಮ ಗ್ರಾಹಕರಿಗೆ ಹಾಗೂ ಸಹಕಾರ ಸಂಘದ ಶೇರುದಾರರ ಮಕ್ಕಳಿಗೆ ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಯಲ್ಲಿ ಶೇ90 ರಷ್ಟು ಅಂಕಗಳನ್ನು ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p><p>ಮರಡಿಮಠದ ಅಭಿನವ ಕಾಡಸಿದ್ಧೇಶ್ವರ ಶ್ರೀ, ಸಂಘದ ಎಲ್ಲ ನಿದೇಶಕರು ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>