ಬಾಗಲಕೋಟೆ: ಕೊರೊನಾ ವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವ್ಯಾಪಕ ಕಟ್ಟೆಚ್ಚರ ವಹಿಸಿದ್ದು, ಹೊರಗಿನಿಂದ ಜಿಲ್ಲೆಗೆ ಪ್ರವೇಶಿಸುವ ಎಲ್ಲರನ್ನೂ ತಪಾಸಣೆಗೊಳಪಡಿಸಿ ಬಿಡಲಾಗುತ್ತಿದೆ. ಇದಕ್ಕಾಗಿ ಶನಿವಾರ ರಾತ್ರಿ ಜಿಲ್ಲೆಯ ಗಡಿಗಳಾದ ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್, ಇಳಕಲ್ ಸಮೀಪದ ಹನುಮನಾಳ, ಮುಧೋಳ ತಾಲ್ಲೂಕು ಲೋಕಾಪುರದಲ್ಲಿ ಚೆಕ್ಪೋಸ್ಟ್ಗಳನ್ನು ಆರಂಭಿಸಲಾಗಿದೆ.