ಸೋಂಕಿತ ವ್ಯಕ್ತಿ ಇತ್ತೀಚೆಗೆ ಹೊರಗೆ ಎಲ್ಲಿಗೂ ಪ್ರಯಾಣಿಸಿರಲಿಲ್ಲ. ಅವರ ಪುತ್ರ ಹಾಗೂ ಪುತ್ರಿ ಇಬ್ಬರೂ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಾರೆ. ಲಾಕ್ಡೌನ್ ಘೋಷಣೆಯಾದ ನಂತರ ಅವರು ಬಾಗಲಕೋಟೆಗೆ ಮರಳಿದ್ದರು. ಅವರಿಂದ ಕೋವಿಡ್–19 ಸೊಂಕು ತಗುಲಿರಬಹುದು ಎಂದು ಶಂಕಿಸಿದ್ದ ಜಿಲ್ಲಾಡಳಿತ ವೃದ್ಧನ ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಅವರ ಪತ್ನಿಯಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಬೆಂಗಳೂರಿಗೆ ಪರೀಕ್ಷೆಗೆ ಕಳುಹಿಸಿದ್ದರು.