<p><strong>ಬಾಗಲಕೋಟೆ: </strong>ಜಿಲ್ಲೆಯಲ್ಲಿ ಕೋವಿಡ್–19 ಸೋಂಕಿನ ಲಕ್ಷಣಗಳಿಂದ ಶನಿವಾರ ಐವರು ಸಾವಿಗೀಡಾಗಿದ್ದಾರೆ. ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇನ್ನಷ್ಟೇ ಫಲಿತಾಂಶ ಬರಬೇಕಿದೆ. ಆದರೆ ಎಲ್ಲರ ಅಂತ್ಯಕ್ರಿಯೆಯನ್ನು ಕೋವಿಡ್ ನಿಯಮಾವಳಿ ಅನ್ವಯ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನಂತದೇಸಾಯಿ ತಿಳಿಸಿದ್ದಾರೆ.</p>.<p>ಬಾಗಲಕೋಟೆ ವಾರ್ಡ್ ನಂ6ರ ನಿವಾಸಿ 63 ವರ್ಷದ ಮಹಿಳೆಯನ್ನು ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತರುವಾಗ ಸಾವನ್ನಪ್ಪಿದ್ದಾರೆ. ಜಮಖಂಡಿಯ 52 ವರ್ಷದ ಪುರುಷ ಶನಿವಾರ ಅಲ್ಲಿನ ಸಾರ್ವಜನಿಕ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತ್ರೆಗೆ ಕರೆತರುವಾಗ ಮೃತಪಟ್ಟಿದ್ದಾರೆ.</p>.<p>ಬೀಳಗಿ ತಾಲ್ಲೂಕು ಅಮಲಝರಿಯ 56 ವರ್ಷದ ವ್ಯಕ್ತಿ ಮಹಾಲಿಂಗಪುರದ ಖಾಸಗಿ ಆಸ್ಪತ್ರೆಯಿಂದ ಬಾಗಲಕೋಟೆಯ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರುವಾಗ ಮೃತಪಟ್ಟಿದ್ದಾರೆ. ಇವರು ಮೊದಲಿನಿಂದಲೂ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.</p>.<p>ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯ 72 ವರ್ಷದ ವೃದ್ಧ ಜುಲೈ 11ರಂದು ತೀವ್ರ ಉಸಿರಾಟದ ತೊಂದರೆಯ ಕಾರಣ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಅವರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.</p>.<p>ಬಹು ಅಂಗಾಂಗ ವೈಫಲ್ಯ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಬಾಗಲಕೋಟೆಯ 60 ವರ್ಷದ ವೃದ್ಧೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಜಿಲ್ಲೆಯಲ್ಲಿ ಕೋವಿಡ್–19 ಸೋಂಕಿನ ಲಕ್ಷಣಗಳಿಂದ ಶನಿವಾರ ಐವರು ಸಾವಿಗೀಡಾಗಿದ್ದಾರೆ. ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇನ್ನಷ್ಟೇ ಫಲಿತಾಂಶ ಬರಬೇಕಿದೆ. ಆದರೆ ಎಲ್ಲರ ಅಂತ್ಯಕ್ರಿಯೆಯನ್ನು ಕೋವಿಡ್ ನಿಯಮಾವಳಿ ಅನ್ವಯ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನಂತದೇಸಾಯಿ ತಿಳಿಸಿದ್ದಾರೆ.</p>.<p>ಬಾಗಲಕೋಟೆ ವಾರ್ಡ್ ನಂ6ರ ನಿವಾಸಿ 63 ವರ್ಷದ ಮಹಿಳೆಯನ್ನು ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತರುವಾಗ ಸಾವನ್ನಪ್ಪಿದ್ದಾರೆ. ಜಮಖಂಡಿಯ 52 ವರ್ಷದ ಪುರುಷ ಶನಿವಾರ ಅಲ್ಲಿನ ಸಾರ್ವಜನಿಕ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತ್ರೆಗೆ ಕರೆತರುವಾಗ ಮೃತಪಟ್ಟಿದ್ದಾರೆ.</p>.<p>ಬೀಳಗಿ ತಾಲ್ಲೂಕು ಅಮಲಝರಿಯ 56 ವರ್ಷದ ವ್ಯಕ್ತಿ ಮಹಾಲಿಂಗಪುರದ ಖಾಸಗಿ ಆಸ್ಪತ್ರೆಯಿಂದ ಬಾಗಲಕೋಟೆಯ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರುವಾಗ ಮೃತಪಟ್ಟಿದ್ದಾರೆ. ಇವರು ಮೊದಲಿನಿಂದಲೂ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.</p>.<p>ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯ 72 ವರ್ಷದ ವೃದ್ಧ ಜುಲೈ 11ರಂದು ತೀವ್ರ ಉಸಿರಾಟದ ತೊಂದರೆಯ ಕಾರಣ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಅವರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.</p>.<p>ಬಹು ಅಂಗಾಂಗ ವೈಫಲ್ಯ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಬಾಗಲಕೋಟೆಯ 60 ವರ್ಷದ ವೃದ್ಧೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>