ನಮಗೆ ಪಾಸಿಟಿವ್ ಆಗಿತ್ತು ಎಂದು ಮಗ್ಗುಲಿನ ಕಿರಾಣಿ ಅಂಗಡಿಯವರು ಸಾಮಗ್ರಿ ಸೇರಿದಂತೆ ನಮಗೆ ಏನೂ ಕೊಡೊಲ್ಲ. ನಮ್ಮ ಮನೆಯ ಮಾಲೀಕರಿಗೆ ಹೇಳಿ, ಓಣಿಯ ಎಲ್ಲರಿಗೂ ತಿಳಿಸಿ ಮನವರಿಕೆ ಮಾಡುವಂತೆ ಅವರು ಕೋರಿಕೊಂಡಾಗ ಆಕೆಯನ್ನು ಬೀಳ್ಕೊಡಲು ನಿಂತಿದ್ದ ವೈದ್ಯರು ಭಾವುಕರಾದರು. ಈ ವೇಳೆ ಡಾ.ಚಂದ್ರಕಾಂತ ಜವಳಿ ಮಹಿಳೆಯನ್ನು ಸಂತೈಸಿದರು. ’ಸ್ವಲ್ಪದಿನ ಅಕ್ಕಪಕ್ಕದವರಲ್ಲಿ ಆ ಭಾವನೆ ಇರುತ್ತದೆ. ನಂತರ ಹೋಗುತ್ತದೆ. ನೀವು ಎದೆಗುಂದಬೇಡಿ‘ ಎಂದು ಸಲಹೆ ಡಾ.ಜವಳಿ ಸಲಹೆ ನೀಡಿ ಕಳುಹಿಸಿಕೊಟ್ಟರು.