ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿನಸಿ ಅಂಗಡಿ ಮುಂದೆ ಮಾರ್ಕಿಂಗ್ ಮಾಡಿ ಕೊಳ್ಳಲು ಅವಕಾಶ

Last Updated 25 ಮಾರ್ಚ್ 2020, 9:56 IST
ಅಕ್ಷರ ಗಾತ್ರ

ಬಾಗಲಕೋಟೆ: ದಿನಸಿ ಅಂಗಡಿಗಳಲ್ಲಿ ನೂಕು ನುಗ್ಗಲು ತಡೆದು ಗ್ರಾಹಕರಲ್ಲಿ ನಿಗದಿತ ಅಂತರ ಕಾಯ್ದುಕೊಳ್ಳಲು ಗುರುತು ಹಾಕುವ ಮೂಲಕ ಹುನಗುಂದ ಪಟ್ಟಣದಲ್ಲಿ ಬುಧವಾರ ಅಧಿಕಾರಿಗಳು ಮಾದರಿ ಕಾರ್ಯಕ್ಕೆ ಮುನ್ನುಡಿ ಬರೆದರು.

ಉಪವಿಭಾಗಾಧಿಕಾರಿ ಕೆ.ಗಂಗಪ್ಪ ನೇತೃತ್ವದಲ್ಲಿ ಅಧಿಕಾರಿಗಳು ಪಟ್ಟಣದ ನಿವಾಸಿಗಳಲ್ಲಿ ಧ್ವನಿವರ್ಧಕದ ಮೂಲಕ ಕೊರೊನಾ ವೈರಸ್ ಹರಡುವಿಕೆ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ನಂತರ ಪ್ರತಿ ಜನವಸತಿ ಪ್ರದೇಶದಲ್ಲಿ ಒಂದೊಂದು ದಿನಸಿ (ಕಿರಾಣಿ) ಅಂಗಡಿ ಗುರುತಿಸಿ ಅದರ ಎದುರು ಸುಣ್ಣದಲ್ಲಿ ಮಾರ್ಕ್ ಮಾಡಿ ಗ್ರಾಹಕರು ನಿಂತುಕೊಳ್ಳಬೇಕಾದ ಜಾಗ ಗುರುತಿಸಿದರು. ನಂತರ ಅದು ಪಾಲನೆಯಾಗುವಂತೆ ನೋಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT