ಬಾಗಲಕೋಟೆ: ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೇಗನೆ ಗುಣಮುಖರಾಗಲಿ ಎಂದು ಹಾರೈಸಿ ಸೋಮವಾರ ಬೀಳಗಿಯಲ್ಲಿ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಬೀಳಗಿ ಪಟ್ಟಣದ ಸಿದ್ದೇಶ್ವರ ದೇವಸ್ಥಾನದ ಎದುರು ನೆರೆದ ಶಾಸಕ ಮುರುಗೇಶ ನಿರಾಣಿ ಬೆಂಬಲಿಗರು ಅಮಿತ್ ಶಾ ಹಾಗೂ ಯಡಿಯೂರಪ್ಪ ಹೆಸರಿನಲ್ಲಿ ಪೂಜೆ ಸಲ್ಲಿಸಿದರು.
ಕೊರೋನಾ ಹರಡುವಿಕೆ ಭೀತಿ ಹಿನ್ನೆಲೆಯಲ್ಲಿ ದೇವಾಲಯದ ಒಳಗೆ ಪ್ರವೇಶಕ್ಕೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಹೊರಗಡೆಯೇ ಪೂಜೆ ಸಲ್ಲಿಸಿದರು.