<p><strong>ಬಾಗಲಕೋಟೆ: </strong>ಒಂದು ವರ್ಷದ ಹೆಣ್ಣು ಮಗು ಸೇರಿದಂತೆ ಜಿಲ್ಲೆಯಲ್ಲಿ ಆರು ಮಂದಿ ಕೋವಿಡ್–19 ಸೋಂಕಿನಿಂದ ಗುಣಮುಖರಾಗಿ ಸೋಮವಾರ ಮನೆಗೆ ತೆರಳಿದರು.</p>.<p>ಇವರಲ್ಲಿ ಮುಧೋಳ ನಗರದ 21 ವರ್ಷದ ಮಹಿಳೆ, ಆಕೆಯ ಒಂದು ವರ್ಷದ ಹೆಣ್ಣು ಮಗು, 35 ವರ್ಷದ ಪುರುಷ, 17 ವರ್ಷದ ಬಾಲಕ ಸೇರಿದಂತೆ ನಾಲ್ವರು, ತಾಲ್ಲೂಕಿನ ತಿಮ್ಮಾಪುರದ 34 ವರ್ಷದ ಪುರುಷರು ಹಾಗೂ ಗುಳೇದಗುಡ್ಡದ 20 ವರ್ಷದ ಯುವತಿ ಸೇರಿದ್ದಾರೆ. ಎಲ್ಲರೂ ಕೋವಿಡ್–19 ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.</p>.<p>ಆಸ್ಪತ್ರೆಯಿಂದ ಮನೆಗೆ ತೆರಳಿದವರಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಪ್ರಮಾಣ ಪತ್ರ ವಿತರಿಸಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟರು.</p>.<p>ಇದರೊಂದಿಗೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ 93 ಮಂದಿಗೆ ಸೋಂಕು ದೃಢಪಟ್ಟಿದೆ. ಅವರಲ್ಲಿ 82 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 75 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದಾರೆ. 10 ಪ್ರಕರಣ ಸಕ್ರಿಯವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಒಂದು ವರ್ಷದ ಹೆಣ್ಣು ಮಗು ಸೇರಿದಂತೆ ಜಿಲ್ಲೆಯಲ್ಲಿ ಆರು ಮಂದಿ ಕೋವಿಡ್–19 ಸೋಂಕಿನಿಂದ ಗುಣಮುಖರಾಗಿ ಸೋಮವಾರ ಮನೆಗೆ ತೆರಳಿದರು.</p>.<p>ಇವರಲ್ಲಿ ಮುಧೋಳ ನಗರದ 21 ವರ್ಷದ ಮಹಿಳೆ, ಆಕೆಯ ಒಂದು ವರ್ಷದ ಹೆಣ್ಣು ಮಗು, 35 ವರ್ಷದ ಪುರುಷ, 17 ವರ್ಷದ ಬಾಲಕ ಸೇರಿದಂತೆ ನಾಲ್ವರು, ತಾಲ್ಲೂಕಿನ ತಿಮ್ಮಾಪುರದ 34 ವರ್ಷದ ಪುರುಷರು ಹಾಗೂ ಗುಳೇದಗುಡ್ಡದ 20 ವರ್ಷದ ಯುವತಿ ಸೇರಿದ್ದಾರೆ. ಎಲ್ಲರೂ ಕೋವಿಡ್–19 ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.</p>.<p>ಆಸ್ಪತ್ರೆಯಿಂದ ಮನೆಗೆ ತೆರಳಿದವರಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಪ್ರಮಾಣ ಪತ್ರ ವಿತರಿಸಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟರು.</p>.<p>ಇದರೊಂದಿಗೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ 93 ಮಂದಿಗೆ ಸೋಂಕು ದೃಢಪಟ್ಟಿದೆ. ಅವರಲ್ಲಿ 82 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 75 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದಾರೆ. 10 ಪ್ರಕರಣ ಸಕ್ರಿಯವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>