<p><strong>ಇಳಕಲ್</strong>: ‘ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ಶರಣಾಗುವಂತೆ ಮಾಡಿದ್ದು ಪ್ರಧಾನಿ ಮೋದಿ. ಅವರು ಸರೆಂಡರ್ ಆಗಿದ್ದಾರೆ ಎಂಬ ಕಾಂಗ್ರೆಸ್ ಟೀಕೆಯಲ್ಲಿ ಅರ್ಥವಿಲ್ಲ’ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.</p>.<p>ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 11 ವರ್ಷ ಪೂರೈಸಿದ ಅಂಗವಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ, ಹಿತೈಷಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಭಾರತದ ಅಭಿವೃದ್ಧಿ, ರಕ್ಷಣೆ ಹಾಗೂ ಗೌರವ ವೃದ್ಧಿಯು ಪ್ರಧಾನಿ ಮೋದಿ ಅವರಿಂದ ಮಾತ್ರ ಸಾಧ್ಯ. ಅವರ 11 ವರ್ಷದ ಆಳ್ವಿಕೆಯಲ್ಲಿ ಭಾರತವು ವಿಶ್ವದ ಪ್ರಮುಖ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾಗಿದೆ’ ಎಂದರು.</p>.<p>‘ಇಲ್ಲಿಯ ಶಾಸಕರು, ತೊಂಡಿಹಾಳ, ದಾಸಬಾಳ ಹತ್ತಿರ ಹೋದರೆ ಅಕ್ರಮ ಮರಳು ಸಾಗಣೆ ಕಾಣಬಹುದು. ಇಳಕಲ್ ಡಿಪೊ ಹಿಂಭಾಗದಲ್ಲಿ ಜೂಜು ಅಡ್ಡಯನ್ನೂ ನೋಡಬಹುದು. ಆದರೆ, ಯಾವ ಅಕ್ರಮಗಳೂ ನಡೆಯುತ್ತಿಲ್ಲ ಎಂಬುದಾಗಿ ಸುಳ್ಳು ಹೇಳುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>‘ಕಂದಗಲ್ ರಸ್ತೆಯ ನೇಕಾರ ಕಾಲೊನಿ, ಹೆದ್ದಾರಿ ಪಕ್ಕದ 500 ಮನೆಗಳನ್ನು ಯಾರು ಕಟ್ಟಿದ್ದು ಎಂದು ಕೇಳಿದರೆ, ಅಲ್ಲಿಯ ನಿವಾಸಿಗಳೇ ನಿಜ ಹೇಳುತ್ತಾರೆ. ಎಲ್ಲವನ್ನೂ ನಾನೇ ಮಾಡಿದ್ದು ಎಂಬುದಾಗಿ ಹೇಳಿಕೊಳ್ಳುವುದು ಶಾಸಕರಿಗೆ ಅಭ್ಯಾಸವಾಗಿದೆ’ ಎಂದರು.</p>.<p>ಪಕ್ಷದ ಜಿಲ್ಲಾ ಸಹ ಸಂಚಾಲಕ ಬಸವರಾಜ, ಮಹಾಂತಗೌಡ ತೊಂಡಿಹಾಳ, ಅರವಿಂದ ಮಂಗಳೂರ, ಮಲ್ಲಿಕಾರ್ಜುನ ಗಡಿಯಣ್ಣವರ, ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಮೂಗನುರಮಠ, ಮಹಾಂತೇಶ ಕಡಪಟ್ಟಿˌ ಸುಗೂರೇಶ ನಾಗಲೋಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಳಕಲ್</strong>: ‘ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ಶರಣಾಗುವಂತೆ ಮಾಡಿದ್ದು ಪ್ರಧಾನಿ ಮೋದಿ. ಅವರು ಸರೆಂಡರ್ ಆಗಿದ್ದಾರೆ ಎಂಬ ಕಾಂಗ್ರೆಸ್ ಟೀಕೆಯಲ್ಲಿ ಅರ್ಥವಿಲ್ಲ’ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.</p>.<p>ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 11 ವರ್ಷ ಪೂರೈಸಿದ ಅಂಗವಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ, ಹಿತೈಷಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಭಾರತದ ಅಭಿವೃದ್ಧಿ, ರಕ್ಷಣೆ ಹಾಗೂ ಗೌರವ ವೃದ್ಧಿಯು ಪ್ರಧಾನಿ ಮೋದಿ ಅವರಿಂದ ಮಾತ್ರ ಸಾಧ್ಯ. ಅವರ 11 ವರ್ಷದ ಆಳ್ವಿಕೆಯಲ್ಲಿ ಭಾರತವು ವಿಶ್ವದ ಪ್ರಮುಖ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾಗಿದೆ’ ಎಂದರು.</p>.<p>‘ಇಲ್ಲಿಯ ಶಾಸಕರು, ತೊಂಡಿಹಾಳ, ದಾಸಬಾಳ ಹತ್ತಿರ ಹೋದರೆ ಅಕ್ರಮ ಮರಳು ಸಾಗಣೆ ಕಾಣಬಹುದು. ಇಳಕಲ್ ಡಿಪೊ ಹಿಂಭಾಗದಲ್ಲಿ ಜೂಜು ಅಡ್ಡಯನ್ನೂ ನೋಡಬಹುದು. ಆದರೆ, ಯಾವ ಅಕ್ರಮಗಳೂ ನಡೆಯುತ್ತಿಲ್ಲ ಎಂಬುದಾಗಿ ಸುಳ್ಳು ಹೇಳುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>‘ಕಂದಗಲ್ ರಸ್ತೆಯ ನೇಕಾರ ಕಾಲೊನಿ, ಹೆದ್ದಾರಿ ಪಕ್ಕದ 500 ಮನೆಗಳನ್ನು ಯಾರು ಕಟ್ಟಿದ್ದು ಎಂದು ಕೇಳಿದರೆ, ಅಲ್ಲಿಯ ನಿವಾಸಿಗಳೇ ನಿಜ ಹೇಳುತ್ತಾರೆ. ಎಲ್ಲವನ್ನೂ ನಾನೇ ಮಾಡಿದ್ದು ಎಂಬುದಾಗಿ ಹೇಳಿಕೊಳ್ಳುವುದು ಶಾಸಕರಿಗೆ ಅಭ್ಯಾಸವಾಗಿದೆ’ ಎಂದರು.</p>.<p>ಪಕ್ಷದ ಜಿಲ್ಲಾ ಸಹ ಸಂಚಾಲಕ ಬಸವರಾಜ, ಮಹಾಂತಗೌಡ ತೊಂಡಿಹಾಳ, ಅರವಿಂದ ಮಂಗಳೂರ, ಮಲ್ಲಿಕಾರ್ಜುನ ಗಡಿಯಣ್ಣವರ, ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಮೂಗನುರಮಠ, ಮಹಾಂತೇಶ ಕಡಪಟ್ಟಿˌ ಸುಗೂರೇಶ ನಾಗಲೋಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>