ಕಳೆದ ವರ್ಷ ಪ್ರವಾಹದಿಂದ ಹಾನಿಯಾಗಿದ್ದು, ಅದು ಮಾಸುವ ಮುನ್ನವೇ ಈ ವರ್ಷ ಹೆಚ್ಚಿನ ಮಳೆಗೆ ಬೆಳೆಗಳು ಹಾನಿಗೀಡಾಗಿವೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಹ ಸ್ಥಿತಿ ಎದುರಾಗಿದೆ. ಹಲವಾರು ಮನೆಗಳು ಬಿದ್ದಿದ್ದು, ಪ್ರವಾಹದಿಂದ ಹಾನಿಗೀಡಾದ ಮನೆಗಳಿಗೆ ಇನ್ನು ಸಂಪೂರ್ಣ ಪರಿಹಾರ ದೊರೆತಿಲ್ಲ. ಈಗ ಮತ್ತೆ ಮನೆಗಳು ಬೀಳುತ್ತಿರುವುದು ಸ್ಥಳೀಯರಿಗೆ ದಿಕ್ಕು ತೋಚದಂತಾಗಿದೆ.