<p><strong>ಜಮಖಂಡಿ: </strong>ತಾಲ್ಲೂಕಿನಲ್ಲಿ ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆಯಿಂದ ಕಟಾವಿಗೆ ಬಂದ ಪೈರಿಗೆ ತೀವ್ರ ಹಾನಿ ಉಂಟಾಗಿದೆ. ಹಲವು ಮನೆಗಳು ನೆಲಕ್ಕುರುಳಿವೆ.</p>.<p>ಮುಂಗಾರು ಹಂಗಾಮಿನ ಬೆಳೆ ಸೋಯಾಬೀನ್, ಹೆಸರು ಕಾಳು ಕಟಾವಿನ ಹಂತಕ್ಕೆ ಬಂದಿತ್ತು. ಆಳೆತ್ತರಕ್ಕೆ ಬೆಳೆದ ಕಬ್ಬು ಎಲ್ಲವೂ ಸಂಪೂರ್ಣ ನೆಲಕಚ್ಚಿವೆ. ಅಲ್ಲಲ್ಲಿ ಮೆಕ್ಕೆಜೋಳ, ತೊಗರಿ ಹೊಲಗಳು ಜಲಾವೃತವಾಗಿರುವುದು ರೈತರನ್ನು ಚಿಂತೆಗೆ ನೂಕಿದೆ. ಮಳೆಯು ಮುಂದುವರಿಯುವ ಸಾಧ್ಯತೆಯೂ ಇರುವುದರಿಂದ ರೈತರು ಕಂಗಾಲಾಗಿದ್ದಾರೆ.</p>.<p>ಕಳೆದ ವರ್ಷ ಪ್ರವಾಹದಿಂದ ಹಾನಿಯಾಗಿದ್ದು, ಅದು ಮಾಸುವ ಮುನ್ನವೇ ಈ ವರ್ಷ ಹೆಚ್ಚಿನ ಮಳೆಗೆ ಬೆಳೆಗಳು ಹಾನಿಗೀಡಾಗಿವೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಹ ಸ್ಥಿತಿ ಎದುರಾಗಿದೆ. ಹಲವಾರು ಮನೆಗಳು ಬಿದ್ದಿದ್ದು, ಪ್ರವಾಹದಿಂದ ಹಾನಿಗೀಡಾದ ಮನೆಗಳಿಗೆ ಇನ್ನು ಸಂಪೂರ್ಣ ಪರಿಹಾರ ದೊರೆತಿಲ್ಲ. ಈಗ ಮತ್ತೆ ಮನೆಗಳು ಬೀಳುತ್ತಿರುವುದು ಸ್ಥಳೀಯರಿಗೆ ದಿಕ್ಕು ತೋಚದಂತಾಗಿದೆ.</p>.<p>ಹಲವು ಕಡೆಗಳಲ್ಲಿ ಒಡ್ಡುಗಳು ಒಡೆದು ಬೆಳೆ ನಾಶವಾಗಿವೆ. ಮೆಕ್ಕೆಜೋಳದ ತೆನೆಗಳು ನೀರಲ್ಲಿ ಬಿದ್ದು ಮೊಳಕೆ ಬರುತ್ತಿವೆ. ಶೇಂಗಾ ಹೆಚ್ಚು ಕಾಯಿಯಾಗದೇ ಮಳೆಯಿಂದ ಬಳ್ಳಿಮಾತ್ರ ಹಬ್ಬಿದೆ, ಜಮೀನುಗಳಲ್ಲಿ ಸಂಗ್ರಹವಾಗಿರುವ ನೀರನ್ನು ಹೊರ ಹಾಕುವುದು ರೈತರಿಗೆ ಸವಾಲಾಗಿದೆ.</p>.<p>ತಂಪು ಹವೆಯಿಂದ ತೊಗರಿ ಗಿಡಗಳು ಪ್ರತಿ ವರ್ಷಕ್ಕಿಂತ ಹೆಚ್ಚು ಎತ್ತರಕ್ಕೆ ಬೆಳೆದಿದ್ದು, ಕಾಯಿ ಮಾತ್ರ ಕಾಣುತ್ತಿಲ್ಲ. ತೊಗರಿಬೆಳೆಗೂ ರೋಗ ಕಾಣಿಸಿಕೊಂಡಿದೆ. ಅಲ್ಲದೇ, ನೀರು ನಿಂತು ತೊಗರಿ ಗಿಡ ಜಲಾವೃತವಾಗಿವೆ.</p>.<p>ಕಟಾವಿನ ಹಂತಕ್ಕೆ ಬಂದಿದ್ದ ಸೋಯಾಬೀನ್, ಹೆಸರು, ಗೋವಿನಜೋಳ ಹಾಗೂ ಕಬ್ಬಿಗೂ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ: </strong>ತಾಲ್ಲೂಕಿನಲ್ಲಿ ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆಯಿಂದ ಕಟಾವಿಗೆ ಬಂದ ಪೈರಿಗೆ ತೀವ್ರ ಹಾನಿ ಉಂಟಾಗಿದೆ. ಹಲವು ಮನೆಗಳು ನೆಲಕ್ಕುರುಳಿವೆ.</p>.<p>ಮುಂಗಾರು ಹಂಗಾಮಿನ ಬೆಳೆ ಸೋಯಾಬೀನ್, ಹೆಸರು ಕಾಳು ಕಟಾವಿನ ಹಂತಕ್ಕೆ ಬಂದಿತ್ತು. ಆಳೆತ್ತರಕ್ಕೆ ಬೆಳೆದ ಕಬ್ಬು ಎಲ್ಲವೂ ಸಂಪೂರ್ಣ ನೆಲಕಚ್ಚಿವೆ. ಅಲ್ಲಲ್ಲಿ ಮೆಕ್ಕೆಜೋಳ, ತೊಗರಿ ಹೊಲಗಳು ಜಲಾವೃತವಾಗಿರುವುದು ರೈತರನ್ನು ಚಿಂತೆಗೆ ನೂಕಿದೆ. ಮಳೆಯು ಮುಂದುವರಿಯುವ ಸಾಧ್ಯತೆಯೂ ಇರುವುದರಿಂದ ರೈತರು ಕಂಗಾಲಾಗಿದ್ದಾರೆ.</p>.<p>ಕಳೆದ ವರ್ಷ ಪ್ರವಾಹದಿಂದ ಹಾನಿಯಾಗಿದ್ದು, ಅದು ಮಾಸುವ ಮುನ್ನವೇ ಈ ವರ್ಷ ಹೆಚ್ಚಿನ ಮಳೆಗೆ ಬೆಳೆಗಳು ಹಾನಿಗೀಡಾಗಿವೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಹ ಸ್ಥಿತಿ ಎದುರಾಗಿದೆ. ಹಲವಾರು ಮನೆಗಳು ಬಿದ್ದಿದ್ದು, ಪ್ರವಾಹದಿಂದ ಹಾನಿಗೀಡಾದ ಮನೆಗಳಿಗೆ ಇನ್ನು ಸಂಪೂರ್ಣ ಪರಿಹಾರ ದೊರೆತಿಲ್ಲ. ಈಗ ಮತ್ತೆ ಮನೆಗಳು ಬೀಳುತ್ತಿರುವುದು ಸ್ಥಳೀಯರಿಗೆ ದಿಕ್ಕು ತೋಚದಂತಾಗಿದೆ.</p>.<p>ಹಲವು ಕಡೆಗಳಲ್ಲಿ ಒಡ್ಡುಗಳು ಒಡೆದು ಬೆಳೆ ನಾಶವಾಗಿವೆ. ಮೆಕ್ಕೆಜೋಳದ ತೆನೆಗಳು ನೀರಲ್ಲಿ ಬಿದ್ದು ಮೊಳಕೆ ಬರುತ್ತಿವೆ. ಶೇಂಗಾ ಹೆಚ್ಚು ಕಾಯಿಯಾಗದೇ ಮಳೆಯಿಂದ ಬಳ್ಳಿಮಾತ್ರ ಹಬ್ಬಿದೆ, ಜಮೀನುಗಳಲ್ಲಿ ಸಂಗ್ರಹವಾಗಿರುವ ನೀರನ್ನು ಹೊರ ಹಾಕುವುದು ರೈತರಿಗೆ ಸವಾಲಾಗಿದೆ.</p>.<p>ತಂಪು ಹವೆಯಿಂದ ತೊಗರಿ ಗಿಡಗಳು ಪ್ರತಿ ವರ್ಷಕ್ಕಿಂತ ಹೆಚ್ಚು ಎತ್ತರಕ್ಕೆ ಬೆಳೆದಿದ್ದು, ಕಾಯಿ ಮಾತ್ರ ಕಾಣುತ್ತಿಲ್ಲ. ತೊಗರಿಬೆಳೆಗೂ ರೋಗ ಕಾಣಿಸಿಕೊಂಡಿದೆ. ಅಲ್ಲದೇ, ನೀರು ನಿಂತು ತೊಗರಿ ಗಿಡ ಜಲಾವೃತವಾಗಿವೆ.</p>.<p>ಕಟಾವಿನ ಹಂತಕ್ಕೆ ಬಂದಿದ್ದ ಸೋಯಾಬೀನ್, ಹೆಸರು, ಗೋವಿನಜೋಳ ಹಾಗೂ ಕಬ್ಬಿಗೂ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>