ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುನಗುಂದ | ಗುಡ್ಡುಗಾಡು ಪಂದ್ಯಾವಳಿಗೆ ಆಯ್ಕೆ ಪ್ರಕ್ರಿಯೆ: ಡಿ.19 ರಂದು ಸಮಾರೋಪ

Published 17 ಡಿಸೆಂಬರ್ 2023, 14:16 IST
Last Updated 17 ಡಿಸೆಂಬರ್ 2023, 14:16 IST
ಅಕ್ಷರ ಗಾತ್ರ

ಹುನಗುಂದ: 2023-24ರ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಜಮಖಂಡಿಯ ಬಾಗಲಕೋಟೆ ವಿಶ್ವವಿದ್ಯಾಲಯದಿಂದ ಅಂತರ ಕಾಲೇಜು ಏಕ ವಲಯ ಪುರುಷ ಮತ್ತು ಮಹಿಳೆಯರ ಗುಡ್ಡುಗಾಡು ಓಟ(ಕ್ರಾಸ್ ಕಂಟ್ರಿ) ಪಂದ್ಯಾವಳಿಯ ಆಯ್ಕೆ ಪ್ರಕ್ರಿಯೆ ಸಮಾರೋಪ ಹಾಗೂ ಹೆಚ್ಚುವರಿ ಕೊಠಡಿ ಉದ್ಘಾಟನಾ ಸಮಾರಂಭವನ್ನು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿ.19 ರಂದು ಬೆಳಿಗ್ಗೆ 10.30 ಹಮ್ಮಿಕೊಳ್ಳಲಾಗಿದೆ.

ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆ ವಹಿಸುವರು. ಮುಖ್ಯಾತಿಥಿಗಳಾಗಿ ತಹಶೀಲ್ದಾರ್ ನಿಂಗಪ್ಪ ಬಿರಾದಾರ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಮುರುಳೀಧರ ದೇಶಪಾಂಡೆ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಎಸ್. ಎಸ್. ಅಂಗಡಿ, ಪುರಸಭೆ ಮುಖ್ಯಾಧಿಕಾರಿ ಪಿ.ಕೆ.ಗುಡದಾರಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾದ್ಯಕ್ಷ ವಿಜಯ ಮಹಾಂತೇಶ ಗದ್ದನಕೇರಿ, ಸಿಪಿಐ ಸುನೀಲ ಸವದಿ, ಜಮಖಂಡಿಯ ಬಾಗಲಕೋಟೆ ವಿಶ್ವವಿದ್ಯಾಲಯದ ಕ್ರೀಡಾ ಸಂಯೋಜಕ ಕೆ.ಎಂ.ಶಿರಹಟ್ಟಿ, ಬೀಳಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಸುನೀಲ ನಾರಾಯಣಿ, ಪ್ಯಾರ ಒಲಂಪಿಕ್ ನ ರಾಷ್ಟ್ರೀಯ ಅಥ್ಲೀಟ್ ಭೀಮಪ್ಪ ಪೂಜಾರಿ, ಸ್ಥಳೀಯ ಕಾಲೇಜಿನ ದೈಹಿಕ‌ ಶಿಕ್ಷಣ ನಿರ್ದೇಶಕ ಭೀ. ವೈ. ಆಲೂರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತಿರುವರು ಎಂದು ಪ್ರಾಚಾರ್ಯ ಸುರೇಶ ಎಚ್.ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT