ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಫ್ಯೂಗೆ ಸೊಪ್ಪು ಹಾಕದ ಜನ: ಮಾಸ್ಕ್, ಸಾಮಾಜಿಕ ಅಂತರ ಮಾಯ

Last Updated 29 ಏಪ್ರಿಲ್ 2021, 5:02 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಕಳೆದ ಮೂರು ದಿನಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಕೋವಿಡ್ ಸೋಂಕಿನ ಪ್ರಕರಣ ದೃಢಪಟ್ಟಿವೆ. ಬುಧವಾರ ಒಂದೇ ದಿನ 333 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ.

ಆದರೆ ಸಾರ್ವಜನಿಕರು ಅದ್ಯಾವುದನ್ನೂ ಗಂಭೀರವಾಗಿ ಪರಿಗಣಿಸಿಲ್ಲ.

ಬಾಗಲಕೋಟೆ ನಗರದ ಹಳೆ ಮಾರ್ಕೆಟ್ ಏರಿಯಾದಲ್ಲಿ ಗುರುವಾರ ಮುಂಜಾನೆ ಜನದಟ್ಟಣೆ ಕಂಡುಬಂದಿತು. ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದರು. ಆಗ ಮಾಸ್ಕ್ ಧರಿಸುವುದು, ಸಾಮಾಜಿಕ‌ ಅಂತರ ಕಾಯ್ದುಕೊಳ್ಳುವುದು ಕಂಡು ಬರಲಿಲ್ಲ.

ಪೊಲೀಸರು ದಂಡ ವಿಧಿಸಿದರೂ, ಲಾಠಿ ಏಟು ಕೊಟ್ಟರೂ ಅದಕ್ಕೆ ಸೊಪ್ಪು ಹಾಕದೇ ಬುಧವಾರ ಕರ್ಫ್ಯೂ ಅವಧಿಯಲ್ಲಿ ಸಾರ್ವಜನಿಕರ ಓಡಾಟ ನಡೆದೇ ಇತ್ತು. ದ್ವಿಚಕ್ರ ವಾಹನಗಳಲ್ಲಿ ಸವಾರರ ಓಡಾಟ ಸಾಮಾನ್ಯ ದಿನಗಳಂತೆಯೇ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT