<p><strong>ಬಾಗಲಕೋಟೆ:</strong> ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಚೇರಿ ಸಮಯದಲ್ಲಿ ಪೌರಾಯುಕ್ತ, ಮುಖ್ಯಾಧಿಕಾರಿ ಲಭ್ಯವಿರುವುದಿಲ್ಲ ಎಂದು ಸಾರ್ವಜನಿಕರಿಂದ ದೂರು ಬಂದಿರುವ ಹಿನ್ನಲೆಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಲಭ್ಯರಿರಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಸೂಚಿಸಿದ್ದಾರೆ.</p>.<p>ಈ ಕುರಿತು ಸುತ್ತೋಲೆ ಹೊರಡಿಸಿರುವ ಅವರು, ಬೆಳಿಗ್ಗೆ ಸಮಯದಲ್ಲಿ ವಾರ್ಡ್ಗಳಿಗೆ ಸ್ವಚ್ಛ ಕಾರ್ಯದ ಪರಿವೀಕ್ಷಣೆಯ ನಂತರ ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ಕಚೇರಿಯಲ್ಲಿ ಲಭ್ಯವಿರಬೇಕು ಎಂದಿದ್ದಾರೆ.</p>.<p>ಸಾರ್ವಜನಿಕರು ನೀಡಿದ ಕುಂದು ಕೊರತೆಗಳನ್ನು ಆಲಿಸಿ ಸ್ಥಳದಲ್ಲಿಯೇ ಇತ್ಯರ್ಥ ಪಡಿಸಬೇಕು. ಊಟದ ಸಮಯದ ನಂತರ ಸ್ಥಾನಿಕ ಭೇಟಿ, ಚೌಕಾಸಿ ಇದ್ದ ಪ್ರಕರಣಗಳಲ್ಲಿ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.</p>.<p>ಮೇಲಧಿಕಾರಿಗಳ ಸಭೆ, ನ್ಯಾಯಾಲಯದ ಪ್ರಕರಣಗಳಿಗೆ ಹಾಜರಾಗಬೇಕಾದಲ್ಲಿ ಪೂರ್ವಭಾವಿಯಾಗಿ ಅನುಮತಿ ಪಡೆಯಬೇಕು. ಸ್ಥಳೀಯವಾಗಿ ನೀವು ಲಭ್ಯ ಇರದಿದ್ದ ಸಮಯದಲ್ಲಿ ಈ ವಿಷಯವನ್ನು ನಿಮ್ಮ ಕಾರ್ಯಾಲಯದ ಸೂಚನಾ ಫಲಕದ ಮೇಲೆ ಕಾರಣದೊಂದಿಗೆ ಪ್ರಕಟಿಸಬೇಕು. ಸಕಾರಣ ಇಲ್ಲದೇ, ಪೂರ್ವಾನುಮತಿ ಇಲ್ಲದೇ ಕೇಂದ್ರ ಸ್ಥಾನದಲ್ಲಿ ಲಭ್ಯವಿರದಿದ್ದರೆ, ಗಂಭೀರವಾಗಿ ಪರಿಗಣಿಸಲಾಗುವುದು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಚೇರಿ ಸಮಯದಲ್ಲಿ ಪೌರಾಯುಕ್ತ, ಮುಖ್ಯಾಧಿಕಾರಿ ಲಭ್ಯವಿರುವುದಿಲ್ಲ ಎಂದು ಸಾರ್ವಜನಿಕರಿಂದ ದೂರು ಬಂದಿರುವ ಹಿನ್ನಲೆಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಲಭ್ಯರಿರಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಸೂಚಿಸಿದ್ದಾರೆ.</p>.<p>ಈ ಕುರಿತು ಸುತ್ತೋಲೆ ಹೊರಡಿಸಿರುವ ಅವರು, ಬೆಳಿಗ್ಗೆ ಸಮಯದಲ್ಲಿ ವಾರ್ಡ್ಗಳಿಗೆ ಸ್ವಚ್ಛ ಕಾರ್ಯದ ಪರಿವೀಕ್ಷಣೆಯ ನಂತರ ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ಕಚೇರಿಯಲ್ಲಿ ಲಭ್ಯವಿರಬೇಕು ಎಂದಿದ್ದಾರೆ.</p>.<p>ಸಾರ್ವಜನಿಕರು ನೀಡಿದ ಕುಂದು ಕೊರತೆಗಳನ್ನು ಆಲಿಸಿ ಸ್ಥಳದಲ್ಲಿಯೇ ಇತ್ಯರ್ಥ ಪಡಿಸಬೇಕು. ಊಟದ ಸಮಯದ ನಂತರ ಸ್ಥಾನಿಕ ಭೇಟಿ, ಚೌಕಾಸಿ ಇದ್ದ ಪ್ರಕರಣಗಳಲ್ಲಿ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.</p>.<p>ಮೇಲಧಿಕಾರಿಗಳ ಸಭೆ, ನ್ಯಾಯಾಲಯದ ಪ್ರಕರಣಗಳಿಗೆ ಹಾಜರಾಗಬೇಕಾದಲ್ಲಿ ಪೂರ್ವಭಾವಿಯಾಗಿ ಅನುಮತಿ ಪಡೆಯಬೇಕು. ಸ್ಥಳೀಯವಾಗಿ ನೀವು ಲಭ್ಯ ಇರದಿದ್ದ ಸಮಯದಲ್ಲಿ ಈ ವಿಷಯವನ್ನು ನಿಮ್ಮ ಕಾರ್ಯಾಲಯದ ಸೂಚನಾ ಫಲಕದ ಮೇಲೆ ಕಾರಣದೊಂದಿಗೆ ಪ್ರಕಟಿಸಬೇಕು. ಸಕಾರಣ ಇಲ್ಲದೇ, ಪೂರ್ವಾನುಮತಿ ಇಲ್ಲದೇ ಕೇಂದ್ರ ಸ್ಥಾನದಲ್ಲಿ ಲಭ್ಯವಿರದಿದ್ದರೆ, ಗಂಭೀರವಾಗಿ ಪರಿಗಣಿಸಲಾಗುವುದು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>