<figcaption>""</figcaption>.<p><strong>ಬಾಗಲಕೋಟೆ:</strong> ತಾಲ್ಲೂಕಿನ ಕಲಾದಗಿಯ ಸೀಲ್ಡೌನ್ ಪ್ರದೇಶದಲ್ಲಿ ಬುಧವಾರ ಸುರಿಯುವ ಮಳೆಯ ನಡುವೆ ಛತ್ರಿಯ ಕೆಳಗೆ ನಿಂತು ಕರ್ತವ್ಯ ನಿರ್ವಹಿಸಿದ ಕಾನ್ಸ್ಟೆಬಲ್ ಮಾರುತಿ ಭಜಂತ್ರಿ ಅವರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶಂಸಾ ಪತ್ರ ಬರೆದಿದ್ದಾರೆ.</p>.<p>ಮಳೆಯ ನಡುವೆ ಮಾರುತಿ ಭಜಂತ್ರಿ ಕಾರ್ಯನಿರ್ವಹಿಸುತ್ತಿರುವ ವಿಡಿಯೊವನ್ನು ಬಾಗಲಕೋಟೆ ಎಸ್ಪಿ ಲೋಕೇಶ ಜಗಲಾಸರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಾರುತಿ ಅವರನ್ನು ಗುರುವಾರ ತಮ್ಮ ಕಚೇರಿಗೆ ಕರೆಸಿ ಗೌರವಿಸಿದ್ದಾರೆ. ಜೊತೆಗೆ ಅವರೂ ಪ್ರಶಂಸಾ ಪತ್ರ ನೀಡಿದ್ದಾರೆ.</p>.<p>ಹಾವೇರಿಯಲ್ಲಿ ಕೆಲಸ ಮಾಡುವ ಕಲಾದಗಿಯ ಅಬಕಾರಿ ಇಲಾಖೆ ಇನ್ಸ್ಪೆಕ್ಟರ್ವೊಬ್ಬರ ಮದುವೆ ಸಮಾರಂಭ ಜೂನ್ 12ರಂದು ಬಾಗಲಕೋಟೆಯಲ್ಲಿ ನಡೆದಿದ್ದು, ಮದುವೆಯಲ್ಲಿ ಪಾಲ್ಗೊಂಡಿದ್ದ 50ಕ್ಕೂ ಹೆಚ್ಚು ಜನರಿಗೆ ಕೋವಿಡ್-19 ದೃಢಪಟ್ಟಿದೆ. ಹೀಗಾಗಿ ಗ್ರಾಮದಲ್ಲಿ ಸೋಂಕಿತರು ವಾಸಿಸುತ್ತಿದ್ದ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ ಮಾರುತಿ ಅವರನ್ನು ಅಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.</p>.<div style="text-align:center"><figcaption><strong>ಪ್ರಶಂಸಾ ಪತ್ರ</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬಾಗಲಕೋಟೆ:</strong> ತಾಲ್ಲೂಕಿನ ಕಲಾದಗಿಯ ಸೀಲ್ಡೌನ್ ಪ್ರದೇಶದಲ್ಲಿ ಬುಧವಾರ ಸುರಿಯುವ ಮಳೆಯ ನಡುವೆ ಛತ್ರಿಯ ಕೆಳಗೆ ನಿಂತು ಕರ್ತವ್ಯ ನಿರ್ವಹಿಸಿದ ಕಾನ್ಸ್ಟೆಬಲ್ ಮಾರುತಿ ಭಜಂತ್ರಿ ಅವರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶಂಸಾ ಪತ್ರ ಬರೆದಿದ್ದಾರೆ.</p>.<p>ಮಳೆಯ ನಡುವೆ ಮಾರುತಿ ಭಜಂತ್ರಿ ಕಾರ್ಯನಿರ್ವಹಿಸುತ್ತಿರುವ ವಿಡಿಯೊವನ್ನು ಬಾಗಲಕೋಟೆ ಎಸ್ಪಿ ಲೋಕೇಶ ಜಗಲಾಸರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಾರುತಿ ಅವರನ್ನು ಗುರುವಾರ ತಮ್ಮ ಕಚೇರಿಗೆ ಕರೆಸಿ ಗೌರವಿಸಿದ್ದಾರೆ. ಜೊತೆಗೆ ಅವರೂ ಪ್ರಶಂಸಾ ಪತ್ರ ನೀಡಿದ್ದಾರೆ.</p>.<p>ಹಾವೇರಿಯಲ್ಲಿ ಕೆಲಸ ಮಾಡುವ ಕಲಾದಗಿಯ ಅಬಕಾರಿ ಇಲಾಖೆ ಇನ್ಸ್ಪೆಕ್ಟರ್ವೊಬ್ಬರ ಮದುವೆ ಸಮಾರಂಭ ಜೂನ್ 12ರಂದು ಬಾಗಲಕೋಟೆಯಲ್ಲಿ ನಡೆದಿದ್ದು, ಮದುವೆಯಲ್ಲಿ ಪಾಲ್ಗೊಂಡಿದ್ದ 50ಕ್ಕೂ ಹೆಚ್ಚು ಜನರಿಗೆ ಕೋವಿಡ್-19 ದೃಢಪಟ್ಟಿದೆ. ಹೀಗಾಗಿ ಗ್ರಾಮದಲ್ಲಿ ಸೋಂಕಿತರು ವಾಸಿಸುತ್ತಿದ್ದ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ ಮಾರುತಿ ಅವರನ್ನು ಅಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.</p>.<div style="text-align:center"><figcaption><strong>ಪ್ರಶಂಸಾ ಪತ್ರ</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>