<p><strong>ಬಾಗಲಕೋಟೆ</strong>: ಲೋಕಸಭಾ ಚುನಾವಣೆ ಕರ್ತವ್ಯದಲ್ಲಿದ್ದಾಗ ಮರಣ ಹೊಂದಿದ್ದ ಮುಧೋಳ ತಾಲ್ಲೂಕಿನ ಬಿದರಿ ಜನತಾ ಪ್ಲಾಟ್ ಎಲ್.ಪಿ.ಎಸ್ನ ಸಹ ಶಿಕ್ಷಕ ಗೋವಿಂದಪ್ಪ ಸಿದ್ದಾಪುರ ಕುಟುಂಬ ಸದಸ್ಯರಿಗೆ ಗುರುವಾರ ₹15 ಲಕ್ಷ ಪರಿಹಾರವನ್ನು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ವಿತರಿಸಿದರು.</p>.<p>ಮೃತ ಗೋವಿಂದ ಸಿದ್ದಾಪುರ ಲೋಕಸಭಾ ಚುನಾವಣೆಯ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ನಿಯೋಜಿಸಲಾಗಿತ್ತು. ಮೇ 6ರಂದು ಚುನಾವಣಾ ಮಸ್ಟರಿಂಗ್ ಕರ್ತವ್ಯಕ್ಕೆಂದು ಮುಧೋಳ ವಿಧಾನಸಭಾ ಕ್ಷೇತ್ರದಿಂದ ಜಮಖಂಡಿಗೆ ತೆರಳುವ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿಯೇ ಹೃದಯಾಘಾತದಿಂದ ಮರಣ ಹೊಂದಿದ್ದರು.</p>.<p>ಮೃತರ ಕುಟುಂಬಕ್ಕೆ ₹15 ಲಕ್ಷ ಪರಿಹಾರ ಮಂಜೂರು ಮಾಡುವಂತೆ ಮುಖ್ಯ ಚುನಾವಣಾಧಿಕಾರಿಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಮೃತರ ಪತ್ನಿ ಸುಜಾತಾ ಗೋವಿಂದಪ್ಪ ಸಿದ್ದಾಪುರ ಬ್ಯಾಂಕ್ ಖಾತೆಗೆ ಮರಣ ಪರಿಹಾರ ಜಮೆ ಮಾಡುವಂತೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಲೋಕಸಭಾ ಚುನಾವಣೆ ಕರ್ತವ್ಯದಲ್ಲಿದ್ದಾಗ ಮರಣ ಹೊಂದಿದ್ದ ಮುಧೋಳ ತಾಲ್ಲೂಕಿನ ಬಿದರಿ ಜನತಾ ಪ್ಲಾಟ್ ಎಲ್.ಪಿ.ಎಸ್ನ ಸಹ ಶಿಕ್ಷಕ ಗೋವಿಂದಪ್ಪ ಸಿದ್ದಾಪುರ ಕುಟುಂಬ ಸದಸ್ಯರಿಗೆ ಗುರುವಾರ ₹15 ಲಕ್ಷ ಪರಿಹಾರವನ್ನು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ವಿತರಿಸಿದರು.</p>.<p>ಮೃತ ಗೋವಿಂದ ಸಿದ್ದಾಪುರ ಲೋಕಸಭಾ ಚುನಾವಣೆಯ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ನಿಯೋಜಿಸಲಾಗಿತ್ತು. ಮೇ 6ರಂದು ಚುನಾವಣಾ ಮಸ್ಟರಿಂಗ್ ಕರ್ತವ್ಯಕ್ಕೆಂದು ಮುಧೋಳ ವಿಧಾನಸಭಾ ಕ್ಷೇತ್ರದಿಂದ ಜಮಖಂಡಿಗೆ ತೆರಳುವ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿಯೇ ಹೃದಯಾಘಾತದಿಂದ ಮರಣ ಹೊಂದಿದ್ದರು.</p>.<p>ಮೃತರ ಕುಟುಂಬಕ್ಕೆ ₹15 ಲಕ್ಷ ಪರಿಹಾರ ಮಂಜೂರು ಮಾಡುವಂತೆ ಮುಖ್ಯ ಚುನಾವಣಾಧಿಕಾರಿಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಮೃತರ ಪತ್ನಿ ಸುಜಾತಾ ಗೋವಿಂದಪ್ಪ ಸಿದ್ದಾಪುರ ಬ್ಯಾಂಕ್ ಖಾತೆಗೆ ಮರಣ ಪರಿಹಾರ ಜಮೆ ಮಾಡುವಂತೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>