<p><strong>ಬಾಗಲಕೋಟೆ</strong>: ‘ಸ್ಥಳೀಯ ಸಂಸ್ಥೆಗಳು, ರಾಜ್ಯಮಟ್ಟದ ನಿಗಮ, ಮಂಡಳಿಗಳಲ್ಲಿ ಜಿಲ್ಲೆಯ ಮುಖಂಡರಿಗೆ, ಕಾರ್ಯಕರ್ತರಿಗೆ ಅವಕಾಶ ನೀಡಬೇಕು’ ಎಂದು ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು.</p>.<p>ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ‘ಭಾಗವಹಿಸಿದ್ದ ಮುಂಚೂಣಿ ಘಟಕಗಳ ಅಧ್ಯಕ್ಷರು, ಸಮಿತಿಗಳ ಸದಸ್ಯರು, ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಸಿಗುವಂತಾಗಬೇಕು’ ಎಂದು ಆಗ್ರಹಿಸಿದರು.</p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷವೇ ಆಗಿದೆ. ಜಿಲ್ಲೆಯಲ್ಲಿ ಬಹುತೇಕ ಅಧಿಕಾರ ಶಾಸಕರಿಗೆ ಲಭಿಸಿದೆ. ಕಾರ್ಯಕರ್ತರಿಗೆ ಹೆಚ್ಚಿನ ಪ್ರಮಾಣದಲ್ಲಿ ಅಧಿಕಾರ ದೊರೆತಿಲ್ಲ. ಕೂಡಲೇ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳಲ್ಲಿ ನಾಮನಿರ್ದೇಶನ ಮಾಡಬೇಕು’ ಎಂದು ಕೋರಿದರು.</p>.<p>‘ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ನಾಮ ನಿರ್ದೇಶನ ಮಾಡಲು ಅವಕಾಶವಿದೆ. ಕೂಡಲೇ ನಾಮನಿರ್ದೇಶನ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜನಯ್ಯಮಠ ಮಾತನಾಡಿ, ‘ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪೂರ್ಣಗೊಳಿಸಬೇಕು. ಯಾವುದೇ ಫಲಾನುಭವಿ ಯೋಜನೆಯಿಂದ ಹೊರಗುಳಿಯಬಾರದು’ ಎಂದರು.</p>.<p>ಶಾಸಕ ಭೀಮಸೇನ ಚಿಮ್ಮನಕಟ್ಟಿ, ಸಂಯುಕ್ತಾ ಪಾಟೀಲ, ಸಿದ್ದು ಕೊಣ್ಣೂರ, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಗಿರೀಶ ಅಂಕಲಗಿ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಅಧ್ಯಕ್ಷರಾದ ಎಸ್.ಎಚ್. ತೆಗ್ಗೆನವರ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಸ್ಥಳೀಯ ಸಂಸ್ಥೆಗಳು, ರಾಜ್ಯಮಟ್ಟದ ನಿಗಮ, ಮಂಡಳಿಗಳಲ್ಲಿ ಜಿಲ್ಲೆಯ ಮುಖಂಡರಿಗೆ, ಕಾರ್ಯಕರ್ತರಿಗೆ ಅವಕಾಶ ನೀಡಬೇಕು’ ಎಂದು ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು.</p>.<p>ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ‘ಭಾಗವಹಿಸಿದ್ದ ಮುಂಚೂಣಿ ಘಟಕಗಳ ಅಧ್ಯಕ್ಷರು, ಸಮಿತಿಗಳ ಸದಸ್ಯರು, ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಸಿಗುವಂತಾಗಬೇಕು’ ಎಂದು ಆಗ್ರಹಿಸಿದರು.</p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷವೇ ಆಗಿದೆ. ಜಿಲ್ಲೆಯಲ್ಲಿ ಬಹುತೇಕ ಅಧಿಕಾರ ಶಾಸಕರಿಗೆ ಲಭಿಸಿದೆ. ಕಾರ್ಯಕರ್ತರಿಗೆ ಹೆಚ್ಚಿನ ಪ್ರಮಾಣದಲ್ಲಿ ಅಧಿಕಾರ ದೊರೆತಿಲ್ಲ. ಕೂಡಲೇ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳಲ್ಲಿ ನಾಮನಿರ್ದೇಶನ ಮಾಡಬೇಕು’ ಎಂದು ಕೋರಿದರು.</p>.<p>‘ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ನಾಮ ನಿರ್ದೇಶನ ಮಾಡಲು ಅವಕಾಶವಿದೆ. ಕೂಡಲೇ ನಾಮನಿರ್ದೇಶನ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜನಯ್ಯಮಠ ಮಾತನಾಡಿ, ‘ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪೂರ್ಣಗೊಳಿಸಬೇಕು. ಯಾವುದೇ ಫಲಾನುಭವಿ ಯೋಜನೆಯಿಂದ ಹೊರಗುಳಿಯಬಾರದು’ ಎಂದರು.</p>.<p>ಶಾಸಕ ಭೀಮಸೇನ ಚಿಮ್ಮನಕಟ್ಟಿ, ಸಂಯುಕ್ತಾ ಪಾಟೀಲ, ಸಿದ್ದು ಕೊಣ್ಣೂರ, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಗಿರೀಶ ಅಂಕಲಗಿ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಅಧ್ಯಕ್ಷರಾದ ಎಸ್.ಎಚ್. ತೆಗ್ಗೆನವರ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>