<p><strong>ಬಾಗಲಕೋಟೆ</strong>: ಕುರಿಗಾಹಿಗಳ ರಕ್ಷಣೆಗೆ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿ ಮಾಡಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಆಗ್ರಹಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುರಿಗಾಹಿಗಳ ರಕ್ಷಣೆಗೆ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ವಿಧಾನಮಂಡಲದಲ್ಲಿ ಹೇಳಿದ್ದರು. ಆದರೆ, ಈಗ ಅದನ್ನು ಜಾರಿಗೊಳಿಸುತ್ತಿಲ್ಲ. ಜಾರಿ ಮಾಡಿದಿದ್ದರೆ ಹೊರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಕುರಿ ಕಾಯಿಸಲು ಕಾಡು ಪ್ರದೇಶದಲ್ಲಿ, ಹೊಲಗಳಲ್ಲಿ ವಾಸ್ತವ್ಯ ಮಾಡುವುದರಿಂದ ಅಪಾಯ ಹೆಚ್ಚಿರುತ್ತದೆ. ಅವರಿಗೆ ಸೂಕ್ತ ರಕ್ಷಣೆ ಒದಗಿಸುವ ಕೆಲಸ ಆಗಬೇಕಿದೆ. ಇತ್ತೀಚಿನ ದಿನಗಳಲ್ಲಿ ಕುರಿಗಳ ಕಳ್ಳತನ, ಅವರ ಮೇಲೆ ಹಲ್ಲೆ, ಕೊಲೆ ಪ್ರಕರಣಗಳಾಗುತ್ತಿರುವುದರಿಂದ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.</p>.<p>‘ಕುರಿ ಕಾಯುವ ಕಾರ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಕುರುಬರು ಮಾಡುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಎಲ್ಲ ಜನಾಂಗದವರೂ ಮಾಡುತ್ತಿದ್ದಾರೆ. ಅವರ ರಕ್ಷಣೆ ಕಾರ್ಯ ಆಗಬೇಕು’ ಎಂದರು.</p>.<p>ಮುಖಂಡ ಕಾಶಿನಾಥ ಹುಡೇದ ಮಾತನಾಡಿ, ಅರಣ್ಯ ಇಲಾಖೆಯಿಂದ ಕುರಿಗಾಹಿಗಳಿಗೆ ತೊಂದರೆ ಇದೆ. ಕುರಿಗಳನ್ನು ಮೇಯಿಸಲು ಜಾಗ ಒದಗಿಸುವ ವ್ಯವಸ್ಥೆ ಆಗಬೇಕು. ಇಲಾಖೆಯಿಂದ ಆಗುವ ತೊಂದರೆಯನ್ನು ತಪ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಬಾಗಲಕೋಟೆ ಜಿಲ್ಲೆಯಲ್ಲಿ ಕುರಿಗಾಹಿಗಳಿಗೆ ಬಂದೂಕು ತರಬೇತಿ ನೀಡಿರುವುದು ಒಳ್ಳೆಯದು. ಉಳಿದ ಜಿಲ್ಲೆಗಳಲ್ಲಿಯೂ ಇಂತಹ ತರಬೇತಿಯನ್ನು ನೀಡಬೇಕು. ಅವರಿಗೆ ಶಿಕ್ಷಣ ನೀಡುವ ಕೆಲಸ ಆಗಬೇಕು ಎಂದರು.</p>.<p>ಮುಖಂಡರಾದ ಪರಶುರಾಮ ಮಂಟೂರ, ಬಸವರಾಜ ಧರ್ಮಟ್ಟಿ, ಈರಪ್ಪ ಹಂಚಿನಾಳ, ಯಲ್ಲಪ್ಪ ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಕುರಿಗಾಹಿಗಳ ರಕ್ಷಣೆಗೆ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿ ಮಾಡಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಆಗ್ರಹಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುರಿಗಾಹಿಗಳ ರಕ್ಷಣೆಗೆ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ವಿಧಾನಮಂಡಲದಲ್ಲಿ ಹೇಳಿದ್ದರು. ಆದರೆ, ಈಗ ಅದನ್ನು ಜಾರಿಗೊಳಿಸುತ್ತಿಲ್ಲ. ಜಾರಿ ಮಾಡಿದಿದ್ದರೆ ಹೊರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಕುರಿ ಕಾಯಿಸಲು ಕಾಡು ಪ್ರದೇಶದಲ್ಲಿ, ಹೊಲಗಳಲ್ಲಿ ವಾಸ್ತವ್ಯ ಮಾಡುವುದರಿಂದ ಅಪಾಯ ಹೆಚ್ಚಿರುತ್ತದೆ. ಅವರಿಗೆ ಸೂಕ್ತ ರಕ್ಷಣೆ ಒದಗಿಸುವ ಕೆಲಸ ಆಗಬೇಕಿದೆ. ಇತ್ತೀಚಿನ ದಿನಗಳಲ್ಲಿ ಕುರಿಗಳ ಕಳ್ಳತನ, ಅವರ ಮೇಲೆ ಹಲ್ಲೆ, ಕೊಲೆ ಪ್ರಕರಣಗಳಾಗುತ್ತಿರುವುದರಿಂದ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.</p>.<p>‘ಕುರಿ ಕಾಯುವ ಕಾರ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಕುರುಬರು ಮಾಡುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಎಲ್ಲ ಜನಾಂಗದವರೂ ಮಾಡುತ್ತಿದ್ದಾರೆ. ಅವರ ರಕ್ಷಣೆ ಕಾರ್ಯ ಆಗಬೇಕು’ ಎಂದರು.</p>.<p>ಮುಖಂಡ ಕಾಶಿನಾಥ ಹುಡೇದ ಮಾತನಾಡಿ, ಅರಣ್ಯ ಇಲಾಖೆಯಿಂದ ಕುರಿಗಾಹಿಗಳಿಗೆ ತೊಂದರೆ ಇದೆ. ಕುರಿಗಳನ್ನು ಮೇಯಿಸಲು ಜಾಗ ಒದಗಿಸುವ ವ್ಯವಸ್ಥೆ ಆಗಬೇಕು. ಇಲಾಖೆಯಿಂದ ಆಗುವ ತೊಂದರೆಯನ್ನು ತಪ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಬಾಗಲಕೋಟೆ ಜಿಲ್ಲೆಯಲ್ಲಿ ಕುರಿಗಾಹಿಗಳಿಗೆ ಬಂದೂಕು ತರಬೇತಿ ನೀಡಿರುವುದು ಒಳ್ಳೆಯದು. ಉಳಿದ ಜಿಲ್ಲೆಗಳಲ್ಲಿಯೂ ಇಂತಹ ತರಬೇತಿಯನ್ನು ನೀಡಬೇಕು. ಅವರಿಗೆ ಶಿಕ್ಷಣ ನೀಡುವ ಕೆಲಸ ಆಗಬೇಕು ಎಂದರು.</p>.<p>ಮುಖಂಡರಾದ ಪರಶುರಾಮ ಮಂಟೂರ, ಬಸವರಾಜ ಧರ್ಮಟ್ಟಿ, ಈರಪ್ಪ ಹಂಚಿನಾಳ, ಯಲ್ಲಪ್ಪ ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>